• About us
  • Contact us
  • Disclaimer
Tuesday, July 8, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೊರಗ ಸಮುದಾಯದ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ, ಸಂತ್ರಸ್ತರಿಗೆ ತಲಾ 2 ಲಕ್ಷ ರೂ. ಪರಿಹಾರ

Coastal Times by Coastal Times
January 1, 2022
in ಕರಾವಳಿ
ಕೊರಗ ಸಮುದಾಯದ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ, ಸಂತ್ರಸ್ತರಿಗೆ ತಲಾ 2 ಲಕ್ಷ ರೂ. ಪರಿಹಾರ
94
VIEWS
WhatsappTelegramShare on FacebookShare on Twitter

ಕುಂದಾಪುರ: ಕೋಟತಟ್ಟು ಕೊರಗ ಕಾಲನಿ ಮೆಹದಿ ಕಾರ್ಯಕ್ರಮದಲ್ಲಿ ಡಿಜೆ ಹಾಕಿದ್ದಕ್ಕೆ ಹಲ್ಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಶನಿವಾರ ಕಾಲನಿಯಲ್ಲಿ ಕೊರಗ ಸಮುದಾಯದವರನ್ನು ಭೇಟಿ ಮಾಡಿ ಧೈರ್ಯ ತುಂಬಿದ ಅವರು, ಪೊಲೀಸರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ದಲಿತರು, ಕೆಳಸ್ತರದ ವ್ಯಕ್ತಿಗಳಿಗೆ ನೋವಾಗಬಾರದೆಂಬ ಬದ್ಧತೆ ಸರ್ಕಾರಕ್ಕೆ ಇದೆ. ಪೊಲೀಸರು ನೊಂದವರ ಮೇಲೆ ಹಾಕಿದ ಕೇಸು ಸುಳ್ಳು ಎಂಬುದು ಅರಿವಿದ್ದು, ಇದರ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

ತಳಮಟ್ಟದ ಸಮುದಾಯದ ಯಾರೂ ಹೆದರುವ ಅಗತ್ಯವಿಲ್ಲ. ನಾವಿದ್ದೇವೆ, ಸರ್ಕಾರವಿದೆ. ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಬ್ಬರ ಅಮಾನತು ಮಾಡಲಾಗಿದೆ. ಉಳಿದವರ ವರ್ಗಾವಣೆ ಮಾಡಲಾಗಿದ್ದು, ಮುಂದಿನ ಕ್ರಮದ ಬಗ್ಗೆ ಅವಲೋಕನ ಮಾಡಲಾಗುತ್ತದೆ. ಘಟನೆ ನಡೆದ 2-3 ದಿನಗಳ ನಂತರ ಪೊಲೀಸ್ ಸಿಬ್ಬಂದಿ ಕೊರಗರು ಸಹಿತ ಇನ್ನೂ ಕೆಲವರ ಮೇಲೆ ಕೇಸು ದಾಖಲಿಸಿರುವುದು, ಇದೊಂದು ಸುಳ್ಳು ಪ್ರಕರಣ ಎಂದು ಎಲ್ಲರಿಗೂ ತಿಳಿಯುತ್ತದೆ. ಪೊಲೀಸರು ರೌಡಿ ಕೆಲಸ ಮಾಡಬಾರದು. ಇಲಾಖೆಗೆ ಕಪ್ಪು ಚುಕ್ಕೆ ತರುವ ಕೆಲಸ ಕೆಲವು ಪೊಲೀಸರಿಂದ ಆಗಿದ್ದಕ್ಕೆ ನೋವಾಗಿದೆ. ರಾಜ್ಯದಲ್ಲಿ 1 ಲಕ್ಷ ಪೊಲೀಸರಿದ್ದು ಅವರಲ್ಲಿರುವ ಒಳ್ಳೆ ಪೊಲೀಸರಿಗೆ ಅವಮಾನವಾಗುವ ಕೆಲಸ ಮಾಡುವ ಕೆಲವು ಪೊಲೀಸರಿಂದ ಹೀಗಾಗುತ್ತಿದೆ. ಅವರು ಪೊಲೀಸ್ ಇಲಾಖೆಗೆ ಯೋಗ್ಯರೋ ಇಲ್ಲವೋ ಎಂಬುದನ್ನುಸರ್ಕಾರ ನಿರ್ಧರಿಸುತ್ತದೆ ಎಂದು ಹೇಳಿದರು.

ತಲಾ 2 ಲಕ್ಷ ರೂ. ಪರಿಹಾರ:ಸಂತ್ರಸ್ತ 6 ಮಂದಿಗೆ ಸರ್ಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಚಿವರು, ಮೊದಲ ಹಂತದಲ್ಲಿ ತಲಾ 50 ಸಾವಿರ ರೂ. ಪರಿಹಾರ ಮೊತ್ತದ ಚೆಕ್ ಅನ್ನು ಸ್ಥಳದಲ್ಲಿಯೇ ವಿತರಿಸಿದರು.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ನಾಗರಿಕ ಆಹಾರ ಪೂರೈಕೆ ನಿಗಮ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಜಿಲ್ಲಾಧಿಕಾರಿ ಕೂರ್ಮಾ ರಾವ್, ಎಸ್ಪಿ ವಿಷ್ಣುವರ್ಧನ್ ಇದ್ದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಎಂ.ಆರ್‌.ಜಿ ಗ್ರೂಪ್‌ನಿಂದ 1.5 ಕೋ.ರೂ. ಆರ್ಥಿಕ ನೆರವು ವಿತರಣೆ

Next Post

‘ವಿಶ್ವ ಕೊಂಕಣಿ ಸರ್ದಾರ್’ ಬಸ್ತಿ ವಾಮನ ಶೆಣೈ ನಿಧನ

Related Posts

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ
ಕರಾವಳಿ

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ

July 5, 2025
66
ಕುಂದಾಪುರದಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದ್ದ ತೆರಿಗೆ ಪಾವತಿಸದ ಬಸ್‌ಗಳು ವಶಕ್ಕೆ
ಕರಾವಳಿ

ಕುಂದಾಪುರದಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದ್ದ ತೆರಿಗೆ ಪಾವತಿಸದ ಬಸ್‌ಗಳು ವಶಕ್ಕೆ

July 4, 2025
40
Next Post
‘ವಿಶ್ವ ಕೊಂಕಣಿ ಸರ್ದಾರ್’ ಬಸ್ತಿ ವಾಮನ ಶೆಣೈ ನಿಧನ

'ವಿಶ್ವ ಕೊಂಕಣಿ ಸರ್ದಾರ್' ಬಸ್ತಿ ವಾಮನ ಶೆಣೈ ನಿಧನ

Discussion about this post

Recent News

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
27
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
1
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

ಬಂಟ್ವಾಳ: ಮೂರ್ಛೆ ತಪ್ಪಿ ಬಿದ್ದ ಪ್ರೇಯಸಿ, ಸತ್ತಳೆಂದು ಆಕೆಯ ಮನೆಯಲ್ಲೇ ಪ್ರಿಯಕರ ನೇಣಿಗೆ ಶರಣು

July 8, 2025
ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

ಉಳ್ಳಾಲ: ಬಾಲಕಿಯ ಅಪಹರಣ ಪ್ರಕರಣ, ದಂಪತಿ ಸಹಿತ ಮೂವರ ವಿರುದ್ಧ ಪೋಕ್ಸೋ

July 8, 2025
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಟಾಸ್ಕ್ 4.59 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವ ಟಾಸ್ಕ್ 4.59 ಲಕ್ಷ ರೂ. ವಂಚನೆ: ಪ್ರಕರಣ ದಾಖಲು

July 8, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d