• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪಕ್ಷವನ್ನು ಬೂತ್‌ ಮಟ್ಟದಲ್ಲಿ ಬಲಪಡಿಸಲು, ಬಿಜೆಪಿಯಿಂದ ‘ಬೂತ್‌ ವಿಜಯ’ ಅಭಿಯಾನ

Coastal Times by Coastal Times
January 1, 2023
in ರಾಜಕೀಯ
ಮಂಗಳೂರು: ಪಕ್ಷವನ್ನು ಬೂತ್‌ ಮಟ್ಟದಲ್ಲಿ ಬಲಪಡಿಸಲು, ಬಿಜೆಪಿಯಿಂದ ‘ಬೂತ್‌ ವಿಜಯ’ ಅಭಿಯಾನ
26
VIEWS
WhatsappTelegramShare on FacebookShare on Twitter

ಮಂಗಳೂರು: ಪಕ್ಷವನ್ನು ಬೂತ್‌ ಮಟ್ಟದಲ್ಲಿ ಬಲಪಡಿಸಲು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಇದೇ 2ರಿಂದ 12ರವರೆಗೆ ಬೂತ್‌ ವಿಜಯ ಅಭಿಯಾನವನ್ನು ಹಮ್ಮಿಕೊಂಡಿದೆ.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾಹಿತಿ ನೀಡಿದ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ, ‘ಜಿಲ್ಲೆಯ 1,861 ಬೂತ್‌ಗಳಿದ್ದು, ಅಭಿಯಾನದ ಅವಧಿಯಲ್ಲಿ ಪ್ರತಿ ಬೂತ್‌ನಲ್ಲೂ ಸಭೆ ನಡೆಸಲಿದ್ದೇವೆ. ಪಕ್ಷದತ್ತ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ಕಾರ್ಯಕರ್ತರು ಮಾಡಲಿದ್ದಾರೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ನಗರದ ರಮಣ ಪೈ ಸಭಾಂಗಣದಲ್ಲಿ ಇದೇ 2ರಂದು ಬೆಳಿಗ್ಗೆ 10ಕ್ಕೆ ಈ ಅಭಿಯಾನವನ್ನು ಉದ್ಘಾಟಿಸಲಿದ್ದಾರೆ’ ಎಂದರು.

‘ಪ್ರತಿ ಬೂತ್‌ನ ಮತದಾರರ ಪಟ್ಟಿಯ ಪುಟಕ್ಕೆ ಒಬ್ಬರಂತೆ ಪೇಜ್‌ ಪ್ರಮುಖ್‌ ಕಾರ್ಯಕರ್ತನನ್ನು ನೇಮಿಸಿದ್ದೇವೆ. ಅವರ ಕೊರತೆ ಇರುವ ಯಾವ ಬೂತ್‌ಗಳಿಗೆ ಹೊಸತಾಗಿ ನೇಮಕ ಮಾಡಲಿದ್ದೇವೆ. ಒಬ್ಬ ಪೇಜ್‌ ಪ್ರಮುಖ್‌ ಕಾರ್ಯಕರ್ತ ಕನಿಷ್ಠ 30 ಮತದಾರರ ಸಂಪರ್ಕ ಹೊಂದಿರಬೇಕು. ಬಿಜೆಪಿ ಅಭ್ಯರ್ಥಿಗೆ ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಮತ ಪಡೆಯಲು ಪ್ರಯತ್ನಿಸಬೇಕು ಎಂಬ ಉದ್ದೇಶ ನಮ್ಮದು. ಜಿಲ್ಲೆಯಲ್ಲಿ ಇಂತಹ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲಿ ಅನೇಕ ವಾಟ್ಸಾಪ್‌ ಗ್ರೂಪ್‌ಗಳನ್ನು ಕಾರ್ಯಕರ್ತರೇ ನಿರ್ವಹಿಸುತ್ತಿದ್ದಾರೆ’ ಎಂದು ಅವರು ಮಾಹಿತಿ ನೀಡಿದರು.

‘ಈ ಅಭಿಯಾನದ ಜೊತೆಗೆ ‘ನಮ್ಮ ಮನೆ– ಬಿಜೆಪಿ ಮನೆ’ ಎಂಬ ಕಾರ್ಯಕ್ರಮವನ್ನೂ ಹಮ್ಮಿಕೊಂಡಿದ್ದೇವೆ. ಬೂತ್‌ ಮಟ್ಟದಲ್ಲಿ ಕನಿಷ್ಠ 25 ಮನೆಗಳಲ್ಲಾದರೂ ಪಕ್ಷದ ಧ್ವಜ ಹಾರಾಡುವಂತೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕಿ ಬಾತ್‌’ ಕಾರ್ಯಕ್ರಮದ ಪ್ರಸಾರಕ್ಕೆ ವ್ಯವಸ್ಥೆ ಮಾಡಿ, ಆದಷ್ಟು ಹೆಚ್ಚು ಜನರಿಗೆ ಇದನ್ನು ತಲುಪಿಸಬೇಕು ಎಂದು ಸೂಚನೆ ನೀಡಿದ್ದೇವೆ’ ಎಂದರು.

ವಿಧಾನಸಭಾ ಕ್ಷೇತ್ರಗಳಿಗೆ ಟಿಕೆಟ್‌ ಹಂಚುವಾಗ ಗುಜರಾತ್‌ ಮಾದರಿಯಲ್ಲೇ ಹೊಸಮುಖಗಳಿಗೆ ಹೆಚ್ಚಿನ ಅವಕಾಶ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ನಮ್ಮ ಹಂತದಲ್ಲಿ ತೀರ್ಮಾನ ಕೈಗೊಳ್ಳುವುದಿಲ್ಲ. ಕಾರ್ಯಕರ್ತರ ಅಭಿಪ್ರಾಯ ಆಧರಿಸಿ ಅಭ್ಯರ್ಥಿಯ ಆಯ್ಕೆ ನಡೆಯಲಿದೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ ಮಿಜಾರು, ಪಕ್ಷದ ಮುಖಂಡರಾದ ಕಸ್ತೂರಿ ಪಂಜ, ಶಾಸಕ ವೇದವ್ಯಾಸ ಕಾಮತ್‌, ಜಗದೀಶ ಶೇಣವ ಹಾಗೂ ವಿಜಯ್‌ ಕುಮಾರ್‌ ಇದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸುರತ್ಕಲ್ ಬೀಚ್ ನಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಸಮುದ್ರ ಪಾಲು ; ಹೊಸ ವರ್ಷದ ಸಂಭ್ರಮದಲ್ಲಿ ಕುಟುಂಬಕ್ಕೆ ಶೋಕ

Next Post

ಬೆಳ್ತಂಗಡಿ: ಖಾಸಗಿ ಬಸ್‌-ಇನ್ನೋವಾ ಕಾರಿನ ನಡುವೆ ಅಪಘಾತ; ಇಬ್ಬರು ಸಾವು

Related Posts

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ
ರಾಜಕೀಯ

ರಾಜ್ಯ ಸರ್ಕಾರ ನಿಗಮ ಮಂಡಳಿಗೆ ನೇಮಕ: ಮೆಸ್ಕಾಂ ಹರೀಶ್ ಕುಮಾರ್, ಕರಾವಳಿ ಪ್ರಾಧಿಕಾರಕ್ಕೆ ಗಫೂರ್, ಪ್ರವಾಸೋದ್ಯಮ ಶಾಲೆಟ್ ಪಿಂಟೋ

September 27, 2025
51
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
41
Next Post
ಬೆಳ್ತಂಗಡಿ: ಖಾಸಗಿ ಬಸ್‌-ಇನ್ನೋವಾ ಕಾರಿನ ನಡುವೆ ಅಪಘಾತ; ಇಬ್ಬರು ಸಾವು

ಬೆಳ್ತಂಗಡಿ: ಖಾಸಗಿ ಬಸ್‌-ಇನ್ನೋವಾ ಕಾರಿನ ನಡುವೆ ಅಪಘಾತ; ಇಬ್ಬರು ಸಾವು

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
32
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
6
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d