• About us
  • Contact us
  • Disclaimer
Wednesday, February 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಂಬಳ ಕ್ರೀಡೆಗೆ ಪ್ರಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ಮೆರುಗು, ಈ ತಂತ್ರಜ್ಞಾನ ಅಳವಡಿಕೆಗೆ ಅದಾನಿ ಫೌಂಡೇಶನ್‌ ಅನುದಾನದಿಂದ 10 ಲಕ್ಷ ರೂ.

Coastal Times by Coastal Times
February 1, 2024
in ಕ್ರೀಡಾ ಸುದ್ದಿ
ಕಂಬಳ ಕ್ರೀಡೆಗೆ ಪ್ರಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ಮೆರುಗು, ಈ ತಂತ್ರಜ್ಞಾನ ಅಳವಡಿಕೆಗೆ ಅದಾನಿ ಫೌಂಡೇಶನ್‌ ಅನುದಾನದಿಂದ 10 ಲಕ್ಷ ರೂ.
55
VIEWS
WhatsappTelegramShare on FacebookShare on Twitter

 ಮಂಗಳೂರು: ಕಂಬಳದ ಸಮಯ ವ್ಯಯವಾಗದಂತೆ ತಡೆಯಲು ಮತ್ತು ನಿಖರ ಫಲಿತಾಂಶ ನೀಡಲು ಪ್ರಥಮ ಬಾರಿಗೆ ಕಂಬಳ ಕ್ರೀಡೆಗೆ ಸ್ವಯಂ ಚಾಲಿತ ಸಮಯ ಗೇಟ್‌ ವ್ಯವಸ್ಥೆ ಮತ್ತು ಫೋಟೋ ಫಿನಿಶ್‌ ಫಲಿತಾಂಶ ಅಳವಡಿಸಲು ದಕ್ಷಿಣಕನ್ನಡ, ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ತೀರ್ಮಾನಿಸಿದೆ.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು ಮಾಹಿತಿ ನೀಡಿ, ಫೆ. 3ರಂದು ನಡೆಯುವ ಐಕಳ ಬಾವ ಕಂಬಳದಲ್ಲಿ ಪ್ರಾಯೋಗಿಕವಾಗಿ ಇದು ಅನ್ವಯವಾಗಲಿದೆ. ಕ್ರಮೇಣ ಇದನ್ನು ಎಲ್ಲ ಕಂಬಳ ಗಳಿಗೂ ಅಳವಡಿಸಿ 2ದಿನ ನಡೆ ಯುತ್ತಿರುವ ಕಂಬಳವನ್ನು 30 ಗಂಟೆಗೆ ಸೀಮಿತಗೊಳಿಸಲಾಗುವುದು ಎಂದರು.

ರೂ. 10 ಲಕ್ಷ ಅದಾನಿ ಫೌಂಡೇಶನ್ ಅನುದಾನದಿಂದ ಇದೇ ಪ್ರಪ್ರಥಮ ಬಾರಿಗೆ ಕಂಬಳ ಕ್ರೀಡೆಗೆ ಸ್ವಯಂಚಾಲಿತ ಸಮಯ ಗೇಟ್ ವ್ಯವಸ್ಥೆ ಮತ್ತು ಫೋಟೋ ಫಿನಿಶ್ ಫಲಿತಾಂಶದ ವ್ಯವಸ್ಥೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಕಂಬಳದ ಸಮಯವನ್ನು ಪೋಲಾಗದಂತೆ ಹಾಗೂ ನಿಖರ ಫಲಿತಾಂಶವನ್ನು ತಿಳಿಯಲು ಉಪಯುಕ್ತವಾಗಿದೆ. ಈ ವ್ಯವಸ್ಥೆಯು ದಿನಾಂಕ 03ನೇ ಫೆಬ್ರವರಿ 2024 ರಂದು ನಡೆಯುವ ಐಕಳ ಕಂಬಳದಲ್ಲಿ ಅಳವಡಿಸುವುದರ ಮೂಲಕ ಗ್ರಾಮೀಣ ಕ್ರೀಡೆಗೆ ಆಧುನಿಕ ತಂತ್ರಜ್ಞಾನದ ಮೆರುಗು ನೀಡಿದಂತಾಗುತ್ತದೆ. ಈ ತಂತ್ರಜ್ಞಾನವನ್ನು ಎಲ್ಲಾ ಕಂಬಳ ಕ್ರೀಡೆಗೂ ಅಳವಡಿಸಲಾ ಗುವುದುಎಂದು ಐಕಳ ದೇವಿ ಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಕಂಬಳ ಭವನ ನಿರ್ಮಾಣ ಸೇರಿದಂತೆ ಪೂರಕ ಕೆಲಸಗಳಿಗೆ ಸಂಬಂಧಿಸಿ ಪಿಲಿಕುಳದಲ್ಲಿ 2 ಎಕ್ರೆ ಜಾಗ ಮೀಸಲಿಡುವಂತೆ ಮತ್ತು ಪಿಲಿಕುಳದಲ್ಲಿ ಕಂಬಳ ಆಯೋಜನೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ ಎಂದರು.

ಚೆಕ್‌ ಅನ್ನು ಸಮಿತಿಗೆ ಹಸ್ತಾಂ ತರಿಸಿದ ಅದಾನಿ ಸಮೂಹ ಸಂಸ್ಥೆ ಯ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್‌ ಆಳ್ವ, ಕಂಬಳ ವಿಳಂಬ ಆಗುವುದನ್ನು ತಪ್ಪಿಸಲು ಈ ತಂತ್ರಜ್ಞಾನ ಬಳಸಲಾಗುತ್ತಿದೆ ಎಂದರು. ಸಮಿತಿ ಗೌರವಾಧ್ಯಕ್ಷ ರೋಹಿತ್‌ ಹೆಗ್ಡೆ ಎರ್ಮಾಳು, ಮಾಜಿ ಅಧ್ಯಕ್ಷ ಬಾರ್ಕೂರು ಶಾಂತಾರಾಮ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಶೆಟ್ಟಿ, ಕೋಶಾಧಿಕಾರಿ ಚಂದ್ರಹಾಸ್‌ ಸನಿಲ್‌, ತೀರ್ಪುಗಾರರ ಸಂಚಾಲಕ ವಿಜಯ ಕುಮಾರ್‌ ಕಂಗಿನಮನೆ, ಕೋಣಗಳ ಯಜಮಾನರಾದ ಶ್ರೀಕಾಂತ್‌ ಭಟ್‌, ಕಂಬಳ ವ್ಯವಸ್ಥಾಪಕ ಚಂದ್ರಹಾಸ್‌ ಶೆಟ್ಟಿ ಉಪಸ್ಥಿತರಿದ್ದರು.

ತಂತ್ರಜ್ಞಾನದ ನಿರ್ವಹಣೆ ಹೇಗೆ? : ನಿಗದಿ ಪಡಿಸಿದ ಸೀಮಿತ ಅವಧಿಯೊಳಗೆ ಕೋಣ ಬಿಡದಿದ್ದರೆ ಗೇಟ್‌ ಬೀಳುತ್ತದೆ. ಇದಾದ 100 ಸೆಕೆಂಡಿನಿಂದ 10 ಸೆಕೆಂಡ್‌ವರೆಗೆ ಕೆಂಪು ದೀಪ, 10ರಿಂದ 1 ಸೆಕೆಂಡ್‌ ವರೆಗೆ ಹಳದಿ ದೀಪ ಬೆಳಗು ತ್ತದೆ. 0 ಬಂದಾಕ್ಷಣ ಹಸಿರು ದೀಪ ಬೆಳಗಿ ಓಟಕ್ಕೆ ಗ್ರೀನ್‌ ಸಿಗ್ನಲ್‌ ಬೀಳುತ್ತದೆ. ಈ ಅವಧಿಯಲ್ಲಿ ಕೋಣ ಓಟ ಆರಂಭಿಸಬೇಕು. ಇಲ್ಲದಿದ್ದಲ್ಲಿ ಆ ಕೋಣ ಗಳನ್ನು ಸ್ಪರ್ಧೆಯಿಂದ ಹೊರಗಿಡಲಾಗುವುದು. ಸ್ಪರ್ಧೆಯಲ್ಲಿರುವ ಕೋಣಗಳ ಮುಖ ಸ್ಕ್ಯಾನ್‌ ಮೇಲೆ ನಿಖರ ಫಲಿತಾಂಶವನ್ನು ಫೋಟೋ ಫಿನಿಶಿಂಗ್‌ ತಂತ್ರಜ್ಞಾನ ನೀಡಲಿದೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳಿಗೆ ಪೂಜೆ ನಡೆಸಲು ಅನುಮತಿ ನೀಡಿದ ಕೋರ್ಟ್

Next Post

ಪತಿ- ಪತ್ನಿ ಸೇರಿ ಹನಿಟ್ರ್ಯಾಪ್ ; ಮಂಗಳೂರಿಗೆ ಕರೆದೊಯ್ದು ನಗ್ನಚಿತ್ರ ತೆಗೆದು ಬ್ಲಾಕ್ಮೇಲ್, ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳ ಬಂಧನ

Related Posts

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025
ಕರಾವಳಿ

ಮಂಗಳೂರು: ಡಿಸೆಂಬರ್ 19ರಿಂದ 22ರವರೆಗೆ ಯೆಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ, 5ನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್ – 2025

December 18, 2025
32
ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!
ಕ್ರೀಡಾ ಸುದ್ದಿ

ವಿಶ್ವಕಪ್​ ಗೆದ್ದ ಪ್ರತಿಯೊಬ್ಬ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಗೆ ಸಿಕ್ತು ಟಾಟಾ ಸಿಯೆರಾ ಎಸ್‌ಯುವಿ ಗಿಫ್ಟ್!

December 18, 2025
34
Next Post
ಪತಿ- ಪತ್ನಿ ಸೇರಿ ಹನಿಟ್ರ್ಯಾಪ್ ; ಮಂಗಳೂರಿಗೆ ಕರೆದೊಯ್ದು ನಗ್ನಚಿತ್ರ ತೆಗೆದು ಬ್ಲಾಕ್ಮೇಲ್, ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳ ಬಂಧನ

ಪತಿ- ಪತ್ನಿ ಸೇರಿ ಹನಿಟ್ರ್ಯಾಪ್ ; ಮಂಗಳೂರಿಗೆ ಕರೆದೊಯ್ದು ನಗ್ನಚಿತ್ರ ತೆಗೆದು ಬ್ಲಾಕ್ಮೇಲ್, ಮಹಿಳೆಯರು ಸೇರಿ ಏಳು ಮಂದಿ ಆರೋಪಿಗಳ ಬಂಧನ

Discussion about this post

Recent News

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
15
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d