• About us
  • Contact us
  • Disclaimer
Tuesday, August 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಸ್ಟಾಪ್ ಟೊಬ್ಯಾಕೋ’ ಮೊಬೈಲ್ ಆ್ಯಪ್ ಬಿಡುಗಡೆ: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಎಚ್ಚರಿಕೆ..!

Coastal Times by Coastal Times
March 1, 2023
in ರಾಜ್ಯ
‘ಸ್ಟಾಪ್ ಟೊಬ್ಯಾಕೋ’ ಮೊಬೈಲ್ ಆ್ಯಪ್ ಬಿಡುಗಡೆ: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಎಚ್ಚರಿಕೆ..!
44
VIEWS
WhatsappTelegramShare on FacebookShare on Twitter

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ನಿಷೇಧ ಹೇರಿದ್ದರೂ, ಸಾಕಷ್ಟು ನಿಯಮಗಳನ್ನು ಉಲ್ಲಂಘನೆ ಮಾಡುತ್ತಿರುವುದು ಪ್ರತೀನಿತ್ಯ ಕಂಡು ಬರುತ್ತಲೇ ಇರುತ್ತದೆ. ನಿಯಮ ಉಲ್ಲಂಘಿಸುತ್ತಿರುವುದು ಕಂಡು ಬಂದರೂ ದೂರು ನೀಡಲು ಸಾಧ್ಯವಾಗದ ಕಾರಣ ಇಷ್ಟು ದಿನ ಮೂಕ ಪ್ರೇಕ್ಷಕರಂತಿರಬೇಕಾಗಿತ್ತು. ಆದರೆ, ಇದೀಗ ದೂರ ನೀಡಲು ಸರ್ಕಾರ ವೇದಿಕೆಯೊಂದನ್ನು ಕಲ್ಪಿಸಿದೆ.

ಸ್ಟಾಪ್ ಟೊಬ್ಯಾಕೋ ಮೊಬೈಲ್ ಆ್ಯಪ್ ನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುತ್ತಿರುವವರ ಫೋಟೋ ತೆಗೆದು, ಆ್ಯಪ್ ಮೂಲಕ ದೂರು ಸಲ್ಲಿಸಬಹುದಾಗಿದೆ. ನಂತರ ಫೋಟೋವನ್ನು ಆಧರಿಸಿ ನಿಯಮ ಉಲ್ಲಂಘಿಸುತ್ತಿರುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಮತ್ತು ರಾಜ್ಯ ತಂಬಾಕು ನಿಯಂತ್ರಣ ಘಟಕ, ಮೀಡಿಯಾ ಅಲೂಮ್ನಿ ಅಸೋಸಿಯೇಷನ್ ಮಂಗಳಗಂಗೋತ್ರಿಯ ಸಹಯೋಗದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸ್ಟಾಪ್ ಟೊಬ್ಯಾಕೋ ಮೊಬೈಲ್ ಆಪ್ ಬಿಡುಗಡೆ ಮಾಡಲಾಯಿತು.

ನಾಗರಿಕರು ಗೂಗಲ್ ಪ್ಲೇ ಸ್ಟೋರ್‌ನಿಂದ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಬೇಕು (ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ), ಆ್ಯಪ್ ಡೌನ್ ಲೋಡ್ ಮಾಡಿಕೊಂಡವರು, ನಿಯಮ ಉಲ್ಲಂಘಿಸುತ್ತಿರುವ ಜನರ ಚಿತ್ರವನ್ನು ಕ್ಲಿಕ್ ಮಾಡಿ ಮತ್ತು ಅದನ್ನು ಅಪ್ಲಿಕೇಶನ್‌ನಲ್ಲಿ ಅಪ್‌ಲೋಡ್ ಮಾಡಬೇಕು.ಅಪ್ಲಿಕೇಶನ್’ನಲ್ಲಿ ಜಿಪಿಎಸ್’ನ್ನು ಸಕ್ರಿಯಗೊಳಿಸಲಾಗಿದೆ. ಫೋಟೋ ಅಪ್ಲೋಡ್ ಆಗುತ್ತಿದ್ದಂತೆಯೇ ನಿಯಮ ಉಲ್ಲಂಘನೆಯ ಸ್ಥಳವು ಸ್ವಯಂಚಾಲಿತವಾಗಿ ಫೀಡ್ ಆಗುತ್ತದೆ. ನಂತರ ದೂರು ಆಯಾ ಜಿಲ್ಲೆಯ ತಂಬಾಕು ನಿಯಂತ್ರಣ ವಿಭಾಗಕ್ಕೆ ತಲುಪಲಿದೆ. ನಂತರ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಾಪಾನ ಮಾಡುವುದು, ಅಪ್ರಾಪ್ತ ವಯಸ್ಕರಿಗೆ ತಂಬಾಕು ಮಾರಾಟ ಮಾಡುವುದು, ಶಿಕ್ಷಣ ಸಂಸ್ಥೆಗಳ 100 ಗಜಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತು, ತಂಬಾಕು ಮಾರಾಟ ಮತ್ತು ಎಚ್ಚರಿಕೆಯ ಸಂದೇಶಗಳಿಲ್ಲದೆ ಸಿಗರೇಟುಗಳ ಮಾರಾಟ ಮಾಡುವುದರ ವಿರುದ್ಧ ನಾಗರೀಕರು ದೂರು ಸಲ್ಲಿಸಬಹುದಾಗಿದೆ. ನಿಯಮ ಉಲ್ಲಂಘಿಸುವವರನ್ನು ಯಾವ ರೀತಿ ಗುರುತಿಸಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ನಾವು ಈ ಬಗ್ಗೆ ಗಮನಹರಿಸಿಲ್ಲ. ಅಂಗಡಿಯವರು, ಟೀ ಅಂಗಡಿಗಳು, ಕಾಫಿ ಶಾಪ್ ಗಳು, ಬೇಕರಿಗಳು ಮತ್ತು ಇತರ ಪ್ರಮುಖ ಸ್ಥಳಗಳಲ್ಲಾಗುವ ಉಲ್ಲಂಘನೆಗಳಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ. ಅಂಗಡಿಯವರು ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಗಳನ್ನು ನೀಡಬೇಕು. ಸಾರ್ವಜನಿಕವಾಗಿ ಧೂಮಪಾನ ಮಾಡಲು ಬಿಡಬಾರದು ಎಂದು ತಿಳಿಸಿದ್ದಾರೆ.  ಒಂದೇ ಅಂಗಡಿಯಿಂದ ಪದೇ ಪದೇ ದೂರುಗಳು ಬಂದರೆ, ಅದನ್ನು ಮುಚ್ಚಲು ಎಲ್ಲ ಕಾನೂನು ಅವಕಾಶಗಳಿವೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ರೈಲಿನಲ್ಲಿ ಕಳೆದು ಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ಪತ್ತೆಯಾದದ್ದು ಎಲ್ಲಿ ಗೊತ್ತಾ…?

Next Post

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ; ಇಬ್ಬರು ಸಾವು- ನೇಣು ಕುಣಿಕೆಯಿಂದ ಪಾರಾದ 12 ವರ್ಷದ ಬಾಲಕಿ !

Related Posts

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ
ರಾಜ್ಯ

ಎಸ್ಐಆರ್ ಪಟ್ಟಿಯಿಂದ 1.11 ಕೋಟಿಗೂ ಅಧಿಕ ಮತದಾರರ ಹೆಸರು ಡಿಲೀಟ್ ಸಾಧ್ಯತೆ: ಗಣತಿ ನಮೂನೆ ಸಲ್ಲಿಕೆಗೆ ಆಗಸ್ಟ್​ 8 ಕೊನೆಯ ದಿನ

August 6, 2026
13
ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ
ರಾಜ್ಯ

ಕರ್ನಾಟಕದ ಪರಿಸರ ಪ್ರಾಧಿಕಾರಗಳ SEIAA–SEAC ನೇಮಕಾತಿಗಳ ಅರ್ಹತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಎಂಟು ವಾರಗಳಲ್ಲಿ ಉತ್ತರಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ

July 25, 2026
10
Next Post
ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ; ಇಬ್ಬರು ಸಾವು- ನೇಣು ಕುಣಿಕೆಯಿಂದ ಪಾರಾದ 12 ವರ್ಷದ ಬಾಲಕಿ !

ಮಂಗಳೂರು: ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ; ಇಬ್ಬರು ಸಾವು- ನೇಣು ಕುಣಿಕೆಯಿಂದ ಪಾರಾದ 12 ವರ್ಷದ ಬಾಲಕಿ !

Discussion about this post

Recent News

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
3
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಸಾಮಾಜಿಕ ಭದ್ರತಾ ಪಿಂಚಣಿಗೆ ರೂ.32,000 ಆದಾಯ ಮಿತಿ : ಬಡವರ ಮೇಲೆ ಅನ್ಯಾಯ ದಾಖಲೆಗಳ ಹೆಸರಿನಲ್ಲಿ ಫಲಾನುಭವಿಗಳಿಗೆ ಕಿರುಕುಳ ನಿಲ್ಲಿಸಬೇಕು -ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

August 11, 2026
ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

ಮಂಗಳೂರಿನಲ್ಲಿ ವಾಹನ ಚಾಲಕರ ಸಂಘದ ವಾರ್ಷಿಕ ಮಹಾಸಭೆ ಹಾಗೂ ನಿವೃತ್ತರಿಗೆ ಸನ್ಮಾನ

August 11, 2026
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d