• About us
  • Contact us
  • Disclaimer
Thursday, November 13, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜೆಪಿ ಸಂಸದ ಉಮೇಶ್‌ ಜಾಧವ್‌ ಬೆಂಬಲಿಗನ ಬರ್ಬರ ಹತ್ಯೆ

Coastal Times by Coastal Times
March 1, 2024
in ಕ್ರೈಮ್ ನ್ಯೂಸ್
ಬಿಜೆಪಿ ಸಂಸದ ಉಮೇಶ್‌ ಜಾಧವ್‌ ಬೆಂಬಲಿಗನ ಬರ್ಬರ ಹತ್ಯೆ
49
VIEWS
WhatsappTelegramShare on FacebookShare on Twitter

ಕಲಬುರಗಿ, ಮಾ 01: ಸಂಸದ ಡಾ. ಉಮೇಶ್​ ಜಾಧವ್ ಆಪ್ತ ಹಾಗೂ ಬಿಜೆಪಿ ಮುಖಂಡನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರು ಗ್ರಾಮದಲ್ಲಿ ನಡೆದಿದೆ. ಗಿರೀಶ್ ಚಕ್ರ ಕೊಲೆಯಾದ ಬಿಜೆಪಿ ಮುಖಂಡ ಎಂದು ಗುರುತಿಸಲಾಗಿದೆ.

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ ಗಿರೀಶ್ ಚಕ್ರ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಗಿರೀಶ್ ಅವರನ್ನು ಕಳೆದ ನಾಲ್ಕು ದಿನಗಳ ಹಿಂದೆ ಕಲಬುರಗಿ ಬಿಎಸ್​ಎನ್​ಎಲ್‌ ಸಲಹಾ ಸಮಿತಿಗೆ ನಿರ್ದೇಶಕರಾಗಿ ಸಂಸದ ಉಮೇಶ್ ಜಾಧವ್ ಆಯ್ಕೆ ಮಾಡಿದ್ದರು. ಸಲಹಾ ಸಮಿತಿ‌ ನಿರ್ದೇಶಕ ನೇಮಕ ಹಿನ್ನೆಲೆಯಲ್ಲಿ ಪಾರ್ಟಿ ಕೊಡುವ ನೆಪದಲ್ಲಿ ಗಿರೀಶ್ ಚಕ್ರ ಅವರನ್ನು ಸಾಗನೂರ ಗ್ರಾಮದ ಜಮೀನಿಗೆ ಕರೆಸಲಾಗಿದೆ. ಪರಿಚಿತರ ಕರೆ ಮೇರೆಗೆ ಜಮೀನಿಗೆ ಬಂದ ಗಿರೀಶ್ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆ ಜಮೀನಲ್ಲಿ ರಕ್ತದ ಮಡುವಿನಲ್ಲಿ ಗಿರೀಶ್ ಚಕ್ರ ಮೃತದೇಹ ಪತ್ತೆಯಾಗಿದೆ.

ಇನ್ನು ಈ ದುರ್ಘಟನೆ ಬಗ್ಗೆ ಸಂಸದ ಡಾ. ಉಮೇಶ್​ ಜಾಧವ್ ಮಾತನಾಡಿದ್ದು, ‘ಗಿರೀಶ್ ಚಕ್ರ​​ ಕೊಲೆ ವಿಚಾರ ತಿಳಿದು ನನಗೆ ಆಘಾತ ಉಂಟಾಗಿದೆ. ಗಿರೀಶ್ ಚಕ್ರ ಉತ್ತಮ ಕೆಲಸಗಾರ. ಹೀಗಾಗಿ ಬಿಎಸ್​​ಎನ್​ಎಲ್​​ ಸಲಹಾ ಸಮಿತಿ ನಿರ್ದೇಶಕನಾಗಿದ್ದ. ನನ್ನ ಕಟ್ಟಾ ಬೆಂಬಲಿಗನಾಗಿದ್ದ. ಆತನ ಕೊಲೆ ವಿಚಾರ ತಿಳಿದು ತುಂಬಾ ನೋವಾಗಿದೆ. ಆರೋಪಿಗಳನ್ನು ಬಂಧಿಸಿ ಕೂಡಲೇ ಕ್ರಮಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ. ಗಿರೀಶ್ ಚಕ್ರ ಕೊಲೆ ಸಂಬಂಧ ಗಾಣಗಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿಗಳಿಗಾಗಿ ಶೋಧ ಪ್ರಾರಂಭವಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಹಿರಿಯ ಪತ್ರಕರ್ತ,ನಿರೂಪಕ ಮನೋಹರ ಪ್ರಸಾದ್ ನಿಧನ

Next Post

ಕ್ಯಾರಟ್‌ಲೇನ್ – ತನಿಷ್ಕ್ ಪಾಲುದಾರಿಕೆಯಲ್ಲಿ ಮಂಗಳೂರಿನಲ್ಲಿ 2ನೇ ಮಳಿಗೆ ಆರಂಭ

Related Posts

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ
ಕ್ರೈಮ್ ನ್ಯೂಸ್

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ

November 11, 2025
750
ಉದ್ಯಮಿಗಳಿಗೆ ಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ಮನೆ, ಬ್ಯಾಂಕ್ ಖಾತೆ ಸಹಿತ 2.85 ಕೋಟಿ ರೂ. ಮೌಲ್ಯದ ಸೊತ್ತು ಮುಟ್ಟುಗೋಲು
ಕ್ರೈಮ್ ನ್ಯೂಸ್

ಉದ್ಯಮಿಗಳಿಗೆ ಬಹುಕೋಟಿ ರೂ.ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ಡಾನ ಮನೆ, ಬ್ಯಾಂಕ್ ಖಾತೆ ಸಹಿತ 2.85 ಕೋಟಿ ರೂ. ಮೌಲ್ಯದ ಸೊತ್ತು ಮುಟ್ಟುಗೋಲು

November 9, 2025
77
Next Post

ಕ್ಯಾರಟ್‌ಲೇನ್ - ತನಿಷ್ಕ್ ಪಾಲುದಾರಿಕೆಯಲ್ಲಿ ಮಂಗಳೂರಿನಲ್ಲಿ 2ನೇ ಮಳಿಗೆ ಆರಂಭ

Discussion about this post

Recent News

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

November 13, 2025
1
ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

November 13, 2025
202
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

ಕೆಂಪುಕಲ್ಲಿಗೆ ವಿಧಿಸುವ ರಾಯಲ್ಟಿ ಕಡಿಮೆ ಮಾಡಿದ್ದರೂ ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ, ಜನಸಾಮಾನ್ಯರು ಕಂಗಾಲು

November 13, 2025
ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

ಮಂಗಳೂರು ಜಪ್ಪು ಸೂಟರ್ ಪೇಟೆಯ ಮಹಿಳೆ ನಾಪತ್ತೆ; ದೂರು ದಾಖಲು

November 13, 2025
3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

3800 ಮಕ್ಕಳ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ ಗಿನ್ನೆಸ್ ದಾಖಲೆ ಮಾಡಿದ ‘ಏನಮ್ಮಿ ಏನಮ್ಮಿ’ ಗಾಯಕಿ ಪಲಕ್ ಮುಚ್ಚಲ್

November 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d