• About us
  • Contact us
  • Disclaimer
Saturday, June 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

Coastal Times by Coastal Times
March 1, 2026
in ರಾಷ್ಟ್ರೀಯ ಸುದ್ದಿ
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ
13
VIEWS
WhatsappTelegramShare on FacebookShare on Twitter

ತಿರುವನಂತಪುರಂ: ಇರಾನ್ ವಿರುದ್ಧ ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಮಿಲಿಟರಿ ಕಾರ್ಯಾಚರಣೆಯಿಂದ ಇಡೀ ಗಲ್ಫ್​ನಲ್ಲಿ ಯುದ್ಧದ ಕಾರ್ಮೋಡ ಆವರಿಸಿದೆ. ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಪ್ರತೀಕಾರದ ದಾಳಿಗಳನ್ನು ಪ್ರಾರಂಭಿಸುತ್ತಿದ್ದಂತೆ, ಲಕ್ಷಾಂತರ ಮಲಯಾಳಿ ವಲಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಬುಧಾಬಿಯಲ್ಲಿ ನಡೆದ ಕ್ಷಿಪಣಿ ದಾಳಿಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ಗಲ್ಫ್‌ನಾದ್ಯಂತ ವಲಸಿಗರಲ್ಲಿ ಆತಂಕ ಸೃಷ್ಟಿಸಿದೆ.

ಯುದ್ಧದ ಕಾರ್ಮೋಡ ಹಿನ್ನೆಲೆ ಇರಾನ್, ಇರಾಕ್, ಕುವೈತ್, ಬಹ್ರೇನ್ ಮತ್ತು ಕತಾರ್ ತಮ್ಮ ವಾಯುಪ್ರದೇಶ ಪ್ರವೇಶಗಳನ್ನು ನಿರ್ಬಂದಿಸಿವೆ. ಪರಿಣಾಮವಾಗಿ, ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆಯು ಸ್ಥಗಿತಗೊಂಡಿದೆ. ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (CIAL) ವಿಮಾನ ಕಾರ್ಯಾಚರಣೆಗಳ ಮೇಲೆ ಈಗಾಗಲೇ ತೀವ್ರವಾಗಿ ಪರಿಣಾಮ ಬೀರಿದೆ. ಕಣ್ಣೂರಿನಿಂದ ದೋಹಾಗೆ ಹೋಗುವ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳು, ಹಾಗೆಯೇ ತಿರುವನಂತಪುರಂನಿಂದ ದುಬೈ ಮತ್ತು ದೋಹಾಗೆ ಹೋಗುವ ಏರ್ ಇಂಡಿಯಾದ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಹೆಚ್ಚುವರಿಯಾಗಿ, ಏರ್ ಅರೇಬಿಯಾದ ಅಬುಧಾಬಿ ಸೇವೆಯನ್ನು ರದ್ದುಗೊಳಿಸಲಾಗಿದೆ.

ಕರಿಪುರ (ಕೊಝಿಕೋಡ್) ವಿಮಾನ ನಿಲ್ದಾಣದಲ್ಲಿ ನಾಲ್ಕು ಏರ್ ಇಂಡಿಯಾ ಸೇವೆಗಳು ಮತ್ತು ಮೂರು ಇಂಡಿಗೋ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇವುಗಳಲ್ಲಿ ರಿಯಾದ್, ದುಬೈ ಮತ್ತು ದಮ್ಮಾಮ್‌ಗೆ ಹೋಗುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳು ಹಾಗೂ ಜೆಡ್ಡಾ, ರಿಯಾದ್ ಮತ್ತು ದುಬೈಗೆ ಹೋಗುವ ಇಂಡಿಗೋ ವಿಮಾನಗಳು ಸೇರಿವೆ. ವಾಯು ಕಾರಿಡಾರ್‌ಗಳನ್ನು ಸುರಕ್ಷಿತವಾಗಿ ಪುನಃ ತೆರೆಯುವವರೆಗೆ ಪರಿಸ್ಥಿತಿ ಹೀಗೆ ಇರುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಗಲ್ಫ್‌ನಲ್ಲಿ ವಾತಾವರಣವು ಉದ್ವಿಗ್ನವಾಗಿದೆ. ದೇಶದ ಹಲವಾರು ಭಾಗಗಳಲ್ಲಿ ಸೈರನ್‌ಗಳು ನಿರಂತರವಾಗಿ ಮೊಳಗುತ್ತಿವೆ ಮತ್ತು ಕ್ಷಿಪಣಿಗಳನ್ನು ತಡೆದು ಗಾಳಿಯಲ್ಲಿ ತಟಸ್ಥಗೊಳಿಸಲಾಗುತ್ತಿದೆ. ಅಬುಧಾಬಿಯಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಗಳ ಬಳಿ ವಾಸಿಸುವವರು ಬೃಹತ್ ಸ್ಫೋಟಗಳು ಮತ್ತು ದಟ್ಟವಾದ ಹೊಗೆಯನ್ನು ನೋಡುತ್ತಿರುವುದಾಗಿ ಎಂದು ಕುವೈತ್​​ನಲ್ಲಿರುವ ಕೇರಳದ ವಲಸಿಗರು ಈಟಿವಿ ಭಾರತ್‌ಗೆ ಮಾಹಿತಿ ನೀಡಿದ್ದಾರೆ.

ವಲಸಿಗರು ಅಥವಾ ಅವರ ಸಂಬಂಧಿಕರು +91-8802012345 (ಅಂತಾರಾಷ್ಟ್ರೀಯ ಮಿಸ್ಡ್ ಕಾಲ್)ನಲ್ಲಿ NORKA ಜಾಗತಿಕ ಸಂಪರ್ಕ ಕೇಂದ್ರದ ಮೂಲಕ ಅಥವಾ ಟೋಲ್-ಫ್ರೀ ಸಂಖ್ಯೆ 18004253939 (ಭಾರತದೊಳಗೆ) ಮೂಲಕ ನೋಂದಾಯಿಸಿಕೊಳ್ಳಬಹುದು ಮತ್ತು ಸಹಾಯ ಪಡೆಯಬಹುದು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

Next Post

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

Related Posts

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ
ರಾಷ್ಟ್ರೀಯ ಸುದ್ದಿ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
22
ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ
ಕರಾವಳಿ

ಗ್ಲೋಬಲ್ ಬಿಸಿನೆಸ್ ಫೆಲೋಶಿಪ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷರಾಗಿ ಮಂಗಳೂರಿನ ಯುವ ನಾಯಕ ಡೆನಿಸ್ ಡಿಸಿಲ್ವಾ ಆಯ್ಕೆ

May 27, 2026
39
Next Post
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

Discussion about this post

Recent News

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
22
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ, 1ಕೆಜಿ 600 ಗ್ರಾಮ್ ತೂಕದ ಬೆಳ್ಳಿಯ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್

June 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d