ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್, ಫಳ್ನೀರ್, ಮಂಗಳೂರು ಇದರ ಅಧೀನ ಕಾಲೇಜುಗಳು, ತಮ್ಮ ಪದವಿ ದಿನವನ್ನು 29 ಎಪ್ರಿಲ್ 2023, ಶನಿವಾರದಂದು ಬೆಳಿಗ್ಗೆ 10.00 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಹಾಲ್ನಲ್ಲಿ ಆಚರಿಸಿತು. ಅತಿಥಿಗಳು, ಪಾಲಕರು, ವಿದ್ಯಾರ್ಥಿಗಳು ಮತ್ತು ಅಧ್ಯಾಪಕರನ್ನು ಇಂದಿರಾ ನರ್ಸಿಂಗ್ ಫಳ್ನೀರ್ ಕಾಲೇಜಿನ ಉಪನ್ಯಾಸಕಿ ಇವಾನ್ಸಾರಾಲಿನ್ ವಾರ್ಜ್ ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ (ಮೌಲ್ಯಮಾಪನ) ಡಾ. ಎನ್. ರಾಮಕೃಷ್ಣ ರೆಡ್ಡಿ, ಗೌರವ ಅತಿಥಿಗಳಾಗಿ ಪ್ರೊ. ಡಾ. ಯು.ಟಿ. ಇಫಿಕರ್ ಅಲಿ, ಮಾಜಿ ಸಿಂಡಿಕೇಟ್ ಸದಸ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ. ಬೆಂಗಳೂರು ಇವರು ಆಗಿಮಿಸಿದ್ದರು.
ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೀತಾ ಜೋಸ್; ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎನ್. ಜಿಯೋವಿಯಾ ಜಾರ್ಜ್ (ಪಿಟಿ), ಅಲೈಡ್ ಹೆಲ್ತ್ ಸೈನ್ಸ್ ವಿಭಾಗದ ಪ್ರಾಂಶುಪಾಲರಾದ ಕೃತಿಕಾ, ಅರೆವೈದ್ಯಕೀಯ ವಿಜ್ಞಾನಗಳ ಉಸ್ತುವಾರಿ ಪ್ರಾಂಶುಪಾಲರಾದ ರಮೀಜಾ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾಲೇಜುಗಳ ವಾರ್ಷಿಕ ವರದಿಯನ್ನು ಕಾಲೇಜುಗಳ ಸಂಬಂಧಪಟ್ಟ ಪ್ರಾಂಶುಪಾಲರು ವಾಚಿಸಿದರು.
ಸಮಾರಂಭದ ಮುಖ್ಯ ಅತಿಥಿ ಡಾ. ಎನ್. ರಾಮಕೃಷ್ಣ ರೆಡ್ಡಿ, ಇವರು ಆರೋಗ್ಯ ವೃತ್ತಿಪರರ ಪ್ರಾಮುಖ್ಯತೆ ಮತ್ತು ವೃತ್ತಿಯ ಅಭಿವೃದ್ಧಿಗಾಗಿ ಡಾ. ಯು.ಟಿ. ಇಪ್ಟಿಕರ್ ಅಲಿ ಇವರು ನೀಡಿದ ಅಗಾಧ ಕೊಡುಗೆ ಕುರಿತು ತಮ್ಮ ವಿಚಾರವನ್ನು ಹಂಚಿಕೊಂಡರು. ಈ ದಿನವನ್ನು ಎಂಎಸ್ಸಿ ನರ್ಸಿಂಗ್, ಬಿಎಸ್ಸಿ ನರ್ಸಿಂಗ್, ಪೋಸ್ಟ್ ಬೇಸಿಕ್ ಬಿಎಸ್ಸಿ ನರ್ಸಿಂಗ್ ಮತ್ತು ಅಲೈಡ್ ಹೆಲ್ತ್ ಸೈನ್ಸಸ್ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಿದರು. ಅರೆವೈದ್ಯಕೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಡಿಪ್ಲೊಮಾ ಪ್ರಮಾಣ ಪತ್ರ ನೀಡಲಾಯಿತು. ಇಂದಿರಾ ನರ್ಸಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕರಾದ ಶ್ರೀಮತಿ ಸಿಜಿ ಆಗಸ್ಟಿನ್ ವಂದಿಸಿದರು. ರಾಷ್ಟ್ರಗೀತೆಯೊಂದಿಗೆ ಪದವಿ ಪ್ರದಾನ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.
Discover more from Coastal Times Kannada
Subscribe to get the latest posts sent to your email.








Discussion about this post