• About us
  • Contact us
  • Disclaimer
Friday, May 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

Coastal Times by Coastal Times
May 1, 2026
in ಕ್ರೈಮ್ ನ್ಯೂಸ್
ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ
1
VIEWS
WhatsappTelegramShare on FacebookShare on Twitter

ಉತ್ತರ ಪ್ರದೇಶದ ನೊಯ್ಡಾ, ಮೇ 1: ಕಾನೂನು ಜಾರಿ ಅಧಿಕಾರಿಗಳಂತೆ ನಟಿಸಿ ಸೈಬರ್ ವಂಚಕರು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ 28 ವರ್ಷದ ಮಹಿಳೆಯನ್ನು ಕಿರುಕುಳ, ಬ್ಲ್ಯಾಕ್‌ಮೇಲ್ ಮತ್ತು ಡಿಜಿಟಲ್ ಬಂಧನದ ಬೆದರಿಕೆ ಹಾಕಿದ್ದರು. ಆಕೆ ಇದಾದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಕೆಯ ಅಂತ್ಯಕ್ರಿಯೆಯ ಸಿದ್ಧತೆಗಳ ಸಮಯದಲ್ಲಿ ಅವರ ಫೋನ್‌ಗೆ ಪದೇ ಪದೇ ವಾಟ್ಸಾಪ್ ಕರೆಗಳು ಬಂದಾಗ ಈ ವಂಚನೆ ಬೆಳಕಿಗೆ ಬಂದಿತು ಎಂದು ಪೊಲೀಸರು ತಿಳಿಸಿದ್ದಾರೆ.

ಫರೀದ್‌ಪುರ ಭೋಗಿ ಗ್ರಾಮದ ನಿವಾಸಿ ಮೋನಿಕಾ ದೇವಿ ಸೋಮವಾರ ರಾತ್ರಿ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, 9 ಮತ್ತು 11 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳು ಅವರ ಹತ್ತಿರದಲ್ಲಿಯೇ ಮಲಗಿದ್ದರು. ಮರುದಿನ ಅವರು ಎದ್ದಾಗ ಅಮ್ಮ ನೇಣು ಹಾಕಿಕೊಂಡಿರುವುದನ್ನು ನೋಡಿ ಮಕ್ಕಳು ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದರು.

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ಸೈಬರ್ ಅಪರಾಧದ ಈ ಭಯಾನಕ ಪ್ರಕರಣ ಬೆಳಕಿಗೆ ಬಂದಿದೆ. ಅಲ್ಲಿ ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗಲೂ ಆಕೆಯ ಫೋನ್ ರಿಂಗಣಿಸುತ್ತಲೇ ಇತ್ತು. ಮೋನಿಕಾ ಪ್ರಕರಣವು ಬೆದರಿಕೆ, ಕಿರುಕುಳ, ಆನ್‌ಲೈನ್ ವಂಚನೆ ಮತ್ತು ತಿಂಗಳುಗಳ ಡಿಜಿಟಲ್ ಬಂಧನದ ಗೊಂದಲದ ಹಾದಿಯನ್ನು ಬಹಿರಂಗಪಡಿಸಿದೆ.

ಏಪ್ರಿಲ್ 27 ಮತ್ತು 28ರ ಮಧ್ಯರಾತ್ರಿ ಮೋನಿಕಾ ಆತ್ಮಹತ್ಯೆ ಮಾಡಿಕೊಂಡರು. 8 ಮತ್ತು 11 ವರ್ಷ ವಯಸ್ಸಿನ ಇಬ್ಬರು ಹೆಣ್ಣುಮಕ್ಕಳು ಪಕ್ಕದಲ್ಲಿ ಮಲಗಿದ್ದಾಗ ಅವರು ತಮ್ಮ ಮನೆಯ ಕೋಣೆಯಲ್ಲಿ ದುಪಟ್ಟಾ ಬಳಸಿ ನೇಣು ಬಿಗಿದುಕೊಂಡಿದ್ದರು. ಮರುದಿನ ಬೆಳಿಗ್ಗೆ, ಅವರ ಮಕ್ಕಳು ಎಚ್ಚರವಾದಾಗ ಅವರ ತಾಯಿ ನೇಣು ಬಿಗಿದುಕೊಂಡಿರುವುದನ್ನು ಕಂಡರು. ಆದರೆ, ಬಿಜ್ನೋರ್‌ನ ಫರೀದ್‌ಪುರ ಭೋಗಿ ಗ್ರಾಮದಲ್ಲಿ 28 ವರ್ಷದ ಮಹಿಳೆಯ ಆತ್ಮಹತ್ಯೆಯನ್ನು ಪೊಲೀಸರಿಗೆ ತಿಳಿಸಿರಲಿಲ್ಲ.

ಆಕೆಯ ಅಂತ್ಯಕ್ರಿಯೆಯ ಸಮಯದಲ್ಲಿ ಮೋನಿಕಾ ಅವರ ಫೋನ್ ರಿಂಗ್ ಆಗಿತ್ತು. ಇದಾದ ನಂತರ ಅವರ ಕುಟುಂಬದ ಸದಸ್ಯರಿಗೆ ಮೋನಿಕಾ ಅವರನ್ನು ಬಲವಂತವಾಗಿ ಸಾಯಿಸಲಾಗಿದೆ ಮತ್ತು ಮಹಿಳೆಗೆ ಕರೆ ಮಾಡುತ್ತಲೇ ಇದ್ದ ವ್ಯಕ್ತಿಯೊಬ್ಬರು ಅವರನ್ನು ಡಿಜಿಟಲ್ ರೂಪದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮೋನಿಕಾ ಆತ್ಮಹತ್ಯೆಯ ನಂತರ, ಅವರ ಕುಟುಂಬವು ಏನೋ ಅಸಾಮಾನ್ಯವಾದುದನ್ನು ಅನುಮಾನಿಸಿತ್ತು. ಆದರೂ ಅದನ್ನು ಎಲ್ಲೂ ಹೇಳಲಾಗದೆ ಕುಟುಂಬವು ಮೋನಿಕಾ ಅವರ ಅಂತ್ಯಕ್ರಿಯೆಯೊಂದಿಗೆ ಮುಂದಾಯಿತು. ಪೊಲೀಸರಿಗೆ ಸಹ ಮಾಹಿತಿ ನೀಡಿರಲಿಲ್ಲ. ಆದರೆ, ಅಂತ್ಯಕ್ರಿಯೆಯ ಸಮಯದಲ್ಲಿ ಮೋನಿಕಾ ಅವರ ಮೊಬೈಲ್ ಫೋನ್ ಪದೇ ಪದೇ ರಿಂಗ್ ಆದ ನಂತರ ಹೊಸ ನಿಗೂಢ ವಿವರಗಳು ಹೊರಬಿದ್ದವು.

ಮೋನಿಕಾ ಸಾವಿನ ಬಳಿಕವೂ ವಾಟ್ಸಾಪ್​ನಲ್ಲಿ ಫೋನ್ ಬಂದ ನಂತರ ಮೋನಿಕಾ ಅವರ ಸೋದರಳಿಯ ಸನ್ಯೋಗ್ ಒಂದು ಕಾಲ್ ಎತ್ತಿದ್ದರು. ಆಗ ಪೊಲೀಸ್ ಯೂನಿಫಾರಂ ಧರಿಸಿದ ಒಬ್ಬ ವ್ಯಕ್ತಿ ವಿಡಿಯೋ ಕಾಲ್ ಮಾಡಿದ್ದ. ಆತ ತಾನು ಕ್ರೈಮ್ ಬ್ರಾಂಚ್ ಅಧಿಕಾರಿ ಎಂದು ಹೇಳಿಕೊಂಡು, ಮೋನಿಕಾ ಅವರೊಂದಿಗೆ ಮಾತನಾಡಬೇಕು ಎಂದಿದ್ದ. ಆಕೆ ಇಲ್ಲ ಎಂದು ಹೇಳಿದಾಗ ಬೆದರಿಕೆ ಹಾಕಿದ್ದ. ಮೋನಿಕಾ ಸಾವನ್ನಪ್ಪಿದ್ದಾಳೆ ಎಂದು ಆ ವ್ಯಕ್ತಿಗೆ ತಿಳಿಸಿದ ನಂತರ ನಂತರ, ಆ ವ್ಯಕ್ತಿ ಮೋನಿಕಾ ಅವರ ಪತಿಗೆ ಬೆದರಿಕೆ ಹಾಕಿದ್ದ. ಇದು ಅನುಮಾನ ಹುಟ್ಟುಹಾಕಿತ್ತು. ಬಳಿಕ ಪೊಲೀಸರು ತನಿಖೆ ನಡೆಸತೊಡಗಿದರು.

ಆಗ ಮೋನಿಕಾ ತಮ್ಮ ಡೈರಿಯಲ್ಲಿ ಬರೆದ ಸೂಸೈಡ್ ನೋಟ್​​​ನಲ್ಲಿ ತಮ್ಮನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮತ್ತು ಬೆದರಿಕೆ ಹಾಕುತ್ತಿದ್ದ ಅಪರಿಚಿತರಿಂದ ಆಗುತ್ತಿದ್ದ ನಿರಂತರ ಕಿರುಕುಳದ ಬಗ್ಗೆ ಮೋನಿಕಾ ಬರೆದಿದ್ದರು. ಆ ಕುಟುಂಬವು ಮೋನಿಕಾಳ ಫೋನ್ ಅನ್ನು ಸ್ಕ್ಯಾನ್ ಮಾಡಿದಾಗ ಹಲವಾರು ವಾಟ್ಸಾಪ್ ಕರೆಗಳು, ಮೆಸೇಜ್​ಗಳು ಮತ್ತು ಆಡಿಯೊ ಕ್ಲಿಪ್‌ಗಳು ಹೊರಬಂದವು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

Related Posts

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್
ಕ್ರೈಮ್ ನ್ಯೂಸ್

ಮಂಗಳೂರು: ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏಟಿಗೆ ಕುಸಿದು ಬಿದ್ದು ವ್ಯಕ್ತಿ ಸಾವು, ಕೊಲೆ ಕೇಸಿನಲ್ಲಿ ಜೈಲು ಪಾಲಾದ ವಾಚ್ ಮನ್

April 29, 2026
298
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!
ಕ್ರೈಮ್ ನ್ಯೂಸ್

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
173

Discussion about this post

Recent News

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
1
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

ಮಹಿಳೆಯ ಅಂತ್ಯಕ್ರಿಯೆ ನಡೆಯುತ್ತಿದ್ದಾಗ ಬಂದ ಫೋನ್​ನಿಂದ ಬಯಲಾಯ್ತು ಸಾವಿನ ರಹಸ್ಯ

May 1, 2026
ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು ದಿಢೀರ್ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಸಾವು, 5 ಲಕ್ಷ ಪರಿಹಾರ ಘೋಷಣೆ

April 30, 2026
ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

ಬೈಕ್ – ಲಾರಿ ಮುಖಾಮುಖಿ ಡಿಕ್ಕಿ ; ಉಪ್ಪಿನಂಗಡಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು, ಗೆಳತಿ ಗಂಭೀರ

April 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d