ದಾವಣಗೆರೆ: ಜಿಲ್ಲೆಯ ರಾಣೇಬೆನ್ನೂರು ಸಮೀಪದ ಚಳಗೇರಿ ಬಳಿ ಬುಧವಾರ ರಾತ್ರಿ ಇಬ್ಬರು ಬುದ್ದಿಮಾಂದ್ಯ ಮಕ್ಕಳನ್ನು ತಂದೆಯೇ ಕೊಲೆ ಮಾಡಿದ್ದಾರೆ. ನಗರದ ಆಂಜನೇಯ ಬಡಾವಣೆಯ ನಿವಾಸಿ ಅಮರ್ ಕೊಲೆ ಮಾಡಿದ ವ್ಯಕ್ತಿ. ನಾಲ್ಕೂವರೆ ವರ್ಷದ ಅವಳಿ ಮಕ್ಕಳಾದ ಅದ್ವೈತ್ ಹಾಗೂ ಅನ್ವಿತ್ ಕೊಲೆಯಾದವರು.
ಗೋಕಾಕ್ ಮೂಲದ ಅಮರ್ ಹರಿಹರದ ಸಮೀಪದ ಕಾರ್ಗಿಲ್ ಫ್ಯಾಕ್ಟರಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ಕೆಲಸ ಮಾಡುತ್ತಿರುವ ಆರೋಪಿ ಅಮರ್, ಇಲ್ಲಿನ ಆಂಜನೇಯ ಬಡಾವಣೆಯಲ್ಲಿ ತನ್ನ ಪತ್ನಿ ಜಯಲಕ್ಷ್ಮಿ, ಮಕ್ಕಳು ಮತ್ತು ತಾಯಿ ಸಾವಿತ್ರಮ್ಮ ಅವರೊಂದಿಗೆ ವಾಸಿಸುತ್ತಿದ್ದ. ದಂಪತಿಯ ನಡುವೆ ಉಂಟಾಗಿದ್ದ ವೈಮನಸ್ಸಿನಿಂದ ಪತ್ನಿ ಜಯಲಕ್ಷ್ಮೀ ಮಕ್ಕಳನ್ನು ಇಲ್ಲಿಯೇ ಬಿಟ್ಟು ತನ್ನ ತವರಾದ ವಿಜಯಪುರಕ್ಕೆ ತೆರಳಿದ್ದರು.
ಅಜ್ಜಿ ಸಾವಿತ್ರಮ್ಮ ಅವರ ಜೊತೆಯಲ್ಲಿ ಮಲಗಿದ್ದ ಇಬ್ಬರೂ ಮಕ್ಕಳನ್ನು ರಾತ್ರಿ ಕಾರ್ನಲ್ಲಿ ಹಾವೇರಿ ಜಿಲ್ಲೆಯ ಚಳಗೇರಿ ಸಮೀಪದ ಟೋಲ್ ಹತ್ತಿರ ಕರೆದುಕೊಂಡು ಹೋದ ಅಮರ್, ಅಲ್ಲಿನ ಸರ್ವೀಸ್ ರಸ್ತೆಯಲ್ಲಿ ವಾಹನ ನಿಲ್ಲಿಸಿ ಮಕ್ಕಳ ಬಾಯಿಗೆ ಟೇಪ್ ಸುತ್ತಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ‘ಬುದ್ದಿಮಾಂದ್ಯರಾದ ಮಕ್ಕಳಿಗೆ ಸರಿಯಾಗಿ ಮಾತನಾಡಲು ಬರುತ್ತಿರಲಿಲ್ಲ. ಎಲ್ಲದಕ್ಕೂ ಹಠ ಮಾಡುತ್ತಿದ್ದರು. ಇದರಿಂದ ಬೇಸತ್ತು ಕೊಲೆ ಮಾಡಿದ್ದೇನೆ’ ಎಂದು ಆರೋಪಿ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post