• About us
  • Contact us
  • Disclaimer
Tuesday, March 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಣಿಪಾಲದ ಪೈ ಕುಟುಂಬದ ಹಿರಿಯರಾದ, ‘ಉದಯವಾಣಿ’ ಸಂಸ್ಥಾಪಕ ಟಿ.ಮೋಹನದಾಸ್ ಪೈ ನಿಧನ

Coastal Times by Coastal Times
August 1, 2022
in ಕರಾವಳಿ
ಮಣಿಪಾಲದ ಪೈ ಕುಟುಂಬದ ಹಿರಿಯರಾದ, ‘ಉದಯವಾಣಿ’ ಸಂಸ್ಥಾಪಕ ಟಿ.ಮೋಹನದಾಸ್ ಪೈ ನಿಧನ
31
VIEWS
WhatsappTelegramShare on FacebookShare on Twitter

ಮಣಿಪಾಲ: ಮಣಿಪಾಲದ ಪೈ ಕುಟುಂಬದ ಹಿರಿಯರಾದ, ‘ಉದಯವಾಣಿ’ ಸಂಸ್ಥಾಪಕ, ವಿವಿಧ ಸಂಘಸಂಸ್ಥೆಗಳಲ್ಲಿ ತೆರೆಮರೆಯಲ್ಲಿದ್ದು ಮಾರ್ಗದರ್ಶನ ನೀಡಿ ಮುನ್ನಡೆಸುತ್ತಿದ್ದ ತೋನ್ಸೆ ಮೋಹನದಾಸ್ ಪೈ (89) ಅಸೌಖ್ಯದಿಂದ ಜು. 31ರಂದು ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.

ಪೈಯವರು ಆಡಳಿತ ಮತ್ತು ಹಣಕಾಸು ಯೋಜನೆಯ ಜವಾಬ್ದಾರಿಯನ್ನು ನೋಡಿಕೊಂಡಿದ್ದರೆ ಟಿ.ಸತೀಶ್ ಪೈಯವರು ಉತ್ಪಾದನೆಯ ಜವಾಬ್ದಾರಿಯನ್ನು ನೋಡಿಕೊಂಡಿರುತ್ತಿದ್ದರು. ಹೊಸ ರೀತಿ ಆಟೋಮೆಟಿಕ್ ಟೈಪ್‌ ಸೆಟ್ಟಿಂಗ್ ಮೆಶಿನ್ ಮತ್ತು ಮುದ್ರಣ ಯಂತ್ರವನ್ನು ಗುಣಮಟ್ಟದ ಮುದ್ರಣಕ್ಕಾಗಿ ಹೊರದೇಶದಿಂದ ತರಿಸಲಾಯಿತು. 1961ರಲ್ಲಿ ಪುಸ್ತಕದ ಗುಣಮಟ್ಟದ ಮುದ್ರಣಕ್ಕಾಗಿ ಪ್ರೆಸ್ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದರ ಬಳಿಕ ಹಲವು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳು ಮಣಿಪಾಲ್ ಪ್ರೆಸ್‌ಗೆ ಬಂದವು. ಅತ್ಯಾಧುನಿಕ ಆಫ್‌ಸೆಟ್ ಮೆಶಿನ್, ಫೋಟೋ ಕಂಪೋಸಿಂಗ್‌ನೊಂದಿಗೆ ಮುದ್ರಣ ಕ್ಷೇತ್ರದಲ್ಲಿ ದಾಪುಗಾಲು ಇರಿಸಿರುವುದರಲ್ಲಿ ಮೋಹನದಾಸ್ ಪೈಯವರ ಅಪಾರ ಕೊಡುಗೆ ಇದೆ. ಈ ಮೂಲಕ ಮಣಿಪಾಲ ಪ್ರೆಸ್ ದೇಶಮಟ್ಟದ ಮಾನ್ಯತೆಯನ್ನು ಪಡೆಯಿತು. ಮೈಸೂರು, ಕರ್ನಾಟಕ ವಿ.ವಿ.ಗಳ ಮತ್ತು ವಿವಿಧ ಪ್ರಕಾಶನ ಸಂಸ್ಥೆಗಳ ಪಠ್ಯ, ಪುಸ್ತಕಗಳನ್ನು ಮುದ್ರಿಸಿದ ಕೀರ್ತಿಯು ಈಗಲೂ ಮುನ್ನಡೆಯುತ್ತಿದೆ.

1970ರಲ್ಲಿ ಪೈಯವರ ಮುಂದಾಳತ್ವದಲ್ಲಿ ‘ಉದಯವಾಣಿ’ ದಿನ ಪತ್ರಿಕೆ ಆರಂಭವಾಗಿ ಅಲ್ಪಾವಧಿಯಲ್ಲಿಯೇ ಜನಪ್ರಿಯಗೊಂಡಿತು. ಮೋಹನದಾಸ್ ಪೈಯವರು ಆಡಳಿತ ನಿರ್ದೇಶಕರಾಗಿ, ಸತೀಶ್ ಪೈಯವರು ಜಂಟಿ ಆಡಳಿತ ನಿರ್ದೇಶಕರಾಗಿರುವ ಮಣಿಪಾಲ್ ಪ್ರಿಂಟರ್ಸ್ ಆ್ಯಂಡ್ ಪಬ್ಲಿಷರ್ಸ್‌ ಲಿ.ನಿಂದ ಉದಯವಾಣಿ ಆರಂಭಗೊಂಡಿತು. ವೆಬ್ ಆಫ್‌ಸೆಟ್ ಯಂತ್ರದಿಂದ ಮುದ್ರಣ ಕಾರ್ಯ ಆರಂಭಮಾಡಿದ ಅತಿ ಹಿರಿಯ ದಿನ ಪತ್ರಿಕೆಗಳಲ್ಲಿ ಉದಯವಾಣಿಯೂ ಒಂದು. ಪೈಯವರ ಸಮರ್ಥ ನಾಯಕತ್ವದಲ್ಲಿ ‘ಉದಯವಾಣಿ’ಯು ಗುಣಮಟ್ಟದ ಮುದ್ರಣಕ್ಕಾಗಿ ಹಲವು ವರ್ಷ ನಿರಂತರವಾಗಿ ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ಪಡೆದುಕೊಂಡಿತು.

1983ರಲ್ಲಿ ಆರಂಭಗೊಂಡ ‘ತರಂಗ’ ವಾರಪತ್ರಿಕೆಯೂ ಮೋಹನದಾಸ್ ಪೈಯವರ ಕನಸಿನ ಕೂಸು. ಆಧುನಿಕ ಮಣಿಪಾಲದ ಶಿಲ್ಪಿ ಡಾಟಿ.ಎಂ.ಎ.ಪೈಯವರ ಹೆಸರು ಹೊತ್ತ ಡಾಟಿಎಂಎ ಪೈ ಪ್ರತಿಷ್ಠಾನ, ಡಾ. ಟಿಎಂಎ ಪೈಯವರು ಸ್ಥಾಪಿಸಿದ ಮೊದಲ ಕಾಲೇಜು ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟ್‌, ಸಿಂಡಿಕೇಟ್ ಬ್ಯಾಂಕ್ ನ ಪೂರ್ವ ರೂಪ ಐಸಿಡಿಎಸ್ ಲಿ., ‘ಉದಯವಾಣಿ’ಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯ ನೆಟ್‌ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹೀಗೆ ಹಲವು ಸಂಸ್ಥೆಗಳ ಬೆಳವಣಿಗೆಗೆ ಕಾರಣರಾದವರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದಕ್ಷಿಣ ಕನ್ನಡದಲ್ಲಿ ಮತ್ತೆರಡು ದಿನ ರಾತ್ರಿ ನಿಷೇಧಾಜ್ಞೆ‌ ಮುಂದುವರಿಸಲಾಗಿದೆ: ಡಿಸಿ ಡಾ. ರಾಜೇಂದ್ರ

Next Post

ಹಂತಕರನ್ನು ಆ.​ 5ರೊಳಗೆ ಬಂಧಿಸದಿದ್ದಲ್ಲಿ ಸತ್ಯಾಗ್ರಹ, ಸರ್ಕಾರಕ್ಕೆ ಕುಮಾರಸ್ವಾಮಿ ಗಡುವು

Related Posts

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ
ಕರಾವಳಿ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
40
ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
Next Post
ಹಂತಕರನ್ನು ಆ.​ 5ರೊಳಗೆ ಬಂಧಿಸದಿದ್ದಲ್ಲಿ ಸತ್ಯಾಗ್ರಹ, ಸರ್ಕಾರಕ್ಕೆ ಕುಮಾರಸ್ವಾಮಿ ಗಡುವು

ಹಂತಕರನ್ನು ಆ.​ 5ರೊಳಗೆ ಬಂಧಿಸದಿದ್ದಲ್ಲಿ ಸತ್ಯಾಗ್ರಹ, ಸರ್ಕಾರಕ್ಕೆ ಕುಮಾರಸ್ವಾಮಿ ಗಡುವು

Discussion about this post

Recent News

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
40
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

ಪಾಂಡೇಶ್ವರ ಲೆವೆಲ್‌ ಕ್ರಾಸಿಂಗ್‌ ರಸ್ತೆ ಚತುಷ್ಪಥವಾಗಿ ಅಭಿವೃದ್ಧಿಪಡಿಸಲು ರೈಲ್ವೆ ಇಲಾಖೆ ಒಪ್ಪಿಗೆ

March 2, 2026
ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d