• About us
  • Contact us
  • Disclaimer
Monday, March 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಲಾಕ್‌ಡೌನ್ ‘ಮಕ್ಕಳ ಮೇಲಿನ ದೌರ್ಜನ್ಯ’ ಮಕ್ಕಳ ಸಹಾಯವಾಣಿ ಸಜ್ಜಾಗಿದೆ

Coastal Times by Coastal Times
September 1, 2021
in ತಾಜಾ ಸುದ್ದಿ, ರಾಜ್ಯ
ಲಾಕ್‌ಡೌನ್  ‘ಮಕ್ಕಳ ಮೇಲಿನ ದೌರ್ಜನ್ಯ’  ಮಕ್ಕಳ ಸಹಾಯವಾಣಿ ಸಜ್ಜಾಗಿದೆ
15
VIEWS
WhatsappTelegramShare on FacebookShare on Twitter

ಮಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ಮುಚ್ಚಿ ಹೋಗಿದ್ದ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಹೊರ ತೆಗೆಯಲು ಮಕ್ಕಳ ಸಹಾಯವಾಣಿ ಸಜ್ಜಾಗಿದ್ದು, ಭೌತಿಕ ತರಗತಿಗಳ ಆರಂಭದ ಬಳಿಕ ಜಾಗೃತಿ ಹಾಗೂ ಕೌನ್ಸೆಲಿಂಗ್ ಆರಂಭಗೊಳ್ಳಲಿವೆ.
ಮಕ್ಕಳ ಹಕ್ಕುಗಳ ರಕ್ಷಣೆಯ ಕಾರ್ಯಕರ್ತರ ಪ್ರಕಾರ ಲಾಕ್‌ಡೌನ್‌ ಅವಧಿಯಲ್ಲಿ ಬಹುತೇಕ ದೌರ್ಜನ್ಯ ಪ್ರಕರಣಗಳು ವರದಿಯಾಗಿಲ್ಲ. ಈ ಪೈಕಿ ಕೌಟುಂಬಿಕ ದೌರ್ಜನ್ಯಗಳೇ ಹೆಚ್ಚಾಗಿವೆ. ಶಾಲೆಗಳು ಆರಂಭವಾಗದ ಕಾರಣ ಹಿಂಸೆಗಳನ್ನು ಅನುಭವಿಸಿದ ಮಕ್ಕಳೂ ಮೌನವಾಗಿದ್ದಾರೆ.

ಮಕ್ಕಳ ಸಹಾಯವಾಣಿ ಪ್ರಕಾರ, ಪ್ರತಿ ವರ್ಷ ಮಕ್ಕಳ ಮೇಲಿನ ದೌರ್ಜನ್ಯ ಕುರಿತ ದೂರುಗಳ ಸಂಖ್ಯೆ ಹೆಚ್ಚುತ್ತಾ ಹೋಗಿವೆ. ಆದರೆ, 2020–21ರಲ್ಲಿ ಆರೋಪಗಳು ಕೇಳಿಬಂದಿದ್ದರೂ, ಜಾಗೃತಿ ಹಾಗೂ ಅಭಿವ್ಯಕ್ತಿಸಲು ವೇದಿಕೆ ಸಿಗದ ಕಾರಣ ದೂರುಗಳ ಸಂಖ್ಯೆ ಕಡಿಮೆಯಾಗಿವೆ.

‘ಕಳೆದ ವರ್ಷದ ಲಾಕ್‌ಡೌನ್‌ ಬಳಿಕ (2021ರ ಜನವರಿ) ಮಕ್ಕಳಿಗೆ ಕೌನ್ಸೆಲಿಂಗ್ ಮಾಡಲಾಗಿತ್ತು. ಆಗ ಸಾಕಷ್ಟು ಪ್ರಕರಣಗಳು ಬೆಳಕಿಗೆ ಬಂದಿದ್ದವು. ಶಾಲೆಗಳು ನಡೆಯದ ಕಾರಣ ಎಲ್ಲ ಮಕ್ಕಳನ್ನು ತಲುಪಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಪ್ರಕರಣಗಳ ಸಂಖ್ಯೆ ಕಡಿಮೆ’ ಎಂದು ಮಕ್ಕಳ ಸಹಾಯವಾಣಿಯ ಕೇಂದ್ರ ಸಂಯೋಜಕ ದೀಕ್ಷಿತ್‌ ಅಚ್ರಪ್ಪಾಡಿ ತಿಳಿಸಿದರು.

‘ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಹೆಚ್ಚಿನ ಅಸ್ಥೆ ವಹಿಸಲು ಜಿಲ್ಲಾಧಿಕಾರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೂಚಿಸಿದ್ದಾರೆ. ಭೌತಿಕ ತರಗತಿಗಳು ಆರಂಭಗೊಂಡ ಬಳಿಕ ಪ್ರತಿ ಶನಿವಾರ ಶಾಲೆಗಳಿಗೆ ತೆರಳಿ ಮಕ್ಕಳೊಂದಿಗೆ ಸಂವಾದ ನಡೆಸಲಾಗುವುದು. ಆನ್‌ಲೈನ್ ತರಗತಿಗಳಲ್ಲೂ ಮಕ್ಕಳ ಸಹಾಯವಾಣಿ (1098) ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ನಿರ್ದೇಶಿಸಿದ್ದಾರೆ’ ಎಂದರು.

ಜಿಲ್ಲೆಯಲ್ಲಿ 1ರಿಂದ 10ನೇ ತರಗತಿ ತನಕ ಸರ್ಕಾರಿ, ಅನುದಾನಿತ, ಅನುದಾನ ರಹಿತ ಸೇರಿದಂತೆ ಒಟ್ಟು 2,214 ಶಾಲೆಗಳಲ್ಲಿ ಸುಮಾರು 3,18,436 ಮಕ್ಕಳು ಇದ್ದಾರೆ.

‘ಲಾಕ್‌ಡೌನ್‌ ಅವಧಿಯಲ್ಲಿ ಶಾಲೆಗಳು ನಡೆಯದ ಕಾರಣ ಮಕ್ಕಳಿಗೆ ಹೇಳಿಕೊಳ್ಳಲೂ ತಿಳಿಯದಾಗಿದೆ. ಇದರಿಂದಾಗಿ ಸಾಕಷ್ಟು ಪ್ರಕರಣಗಳು ಹೊರಬಂದಿಲ್ಲ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರೆನ್ನಿ ಪೀಟರ್ ಡಿಸೋಜ ತಿಳಿಸಿದರು.

ಕುಟುಂಬದೊಳಗಿನ ದೌರ್ಜನ್ಯವೇ ಹೆಚ್ಚು: ‘ತಂದೆ ಅಥವಾ ತಾಯಿಯಿಂದ ಹಲ್ಲೆ, ಸಂಬಂಧಿಗಳಿಂದ ದೌರ್ಜನ್ಯದ ಆರೋಪಗಳು ಹೆಚ್ಚಿವೆ. ಕೆಲಸವಿಲ್ಲದೇ ಸಮಸ್ಯೆಗೆ ಸಿಲುಕಿದ ಪೋಷಕರು ಮಕ್ಕಳ ಮೇಲೆ ದರ್ಪ ತೋರುತ್ತಿರುವ ಬಗ್ಗೆ ದೂರುಗಳಿವೆ. ಈ ರೀತಿಯಾಗಿ ಕುಟುಂಬದೊಳಗೆ ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ’ ಎನ್ನುತ್ತಾರೆ ಮಕ್ಕಳ ಸಹಾಯವಾಣಿಯ ಕೇಂದ್ರ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2012ರಿಂದ 2020ರ ತನಕ ಪೊಲೀಸ್ ಠಾಣೆಯಲ್ಲಿ 731 ಫೋಕ್ಸೊ ಪ್ರಕರಣಗಳು ದಾಖಲಾಗಿದ್ದವು. ಆದರೆ, 2021ರ ಜನವರಿ ಮತ್ತು ಫೆಬ್ರುವರಿಯಲ್ಲಿ 66 ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಹಿಂದೆ ತಿಂಗಳಿಗೆ ಸರಾಸರಿ 8ರಷ್ಟು ಇದ್ದ ಪ್ರಕರಣಗಳ ಸಂಖ್ಯೆಯು ಲಾಕ್‌ಡೌನ್ ಬಳಿಕ 33ಕ್ಕೆ ಆಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದುಬೈನಲ್ಲಿದೆ 22 ಕ್ಯಾರೆಟ್ ಗೋಲ್ಡ್ ಲೇಯರ್ಡ್ ವಡಾ ಪಾವ್..!

Next Post

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
67
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d