ಕೊಡಗು: ಕೊಡಗು ಜಿಲ್ಲೆಯ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.31 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಸಹೋದರಿಯರಾಗಿದ್ದು ದಮಯಂತಿ(20) ಹರ್ಷಿತಾ(18) ಎಂದು ಗುರುತಿಸಲಾಗಿದೆ.
ಅದೇ ಗ್ರಾಮದ ನಾಮೇರ ಉದಯ ಎಂಬವರ ಪುತ್ರಿಯರಾಗಿದ್ದು ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ .ಹಳ್ಳಿಗಟ್ಟು ಸಿಇಟಿ ಕಾಲೇಜು ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿನಿ ದಮಯಂತಿ ಹಾಗೂ ಕಾವೇರಿ ಕಾಲೇಜಿನಲ್ಲಿ ಪ್ರಥಮ ಬಿಎ ಮಾಡಿಕೊಂಡಿರುವ ಹರ್ಷಿತಾ ಮೃತ ದುರ್ದೈವಿಗಳು.
ಅಕ್ಕ ತಂಗಿ ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.
Discover more from Coastal Times Kannada
Subscribe to get the latest posts sent to your email.
Discussion about this post