ಬ್ರಹ್ಮಾವರ, ಅ.31: ಬಟ್ಟೆ ಅಂಗಡಿ ಹಾಕಿಸಿಕೊಡುವುದಾಗಿ ನಂಬಿಸಿ ಐದು ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ಬಾಡಿ ವಾರೆಂಟ್ ಮೂಲಕ ಕುಂದಾಪುರ ಮೂಲದ ಚೈತ್ರಾಳನ್ನು ವಿಚಾರಣೆಗಾಗಿ ಪೊಲೀಸರು ಮಂಗಳವಾರ ಬ್ರಹ್ಮಾವರ ನ್ಯಾಯಾಲಯಕ್ಕೆ ಹಾಜರುಪಡಿಸಿ, ವಿಚಾರಣೆ ನಡೆಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿರುವ ಸಚಿವರು, ಮಂತ್ರಿಗಳ, ಶಾಸಕರ ನಿಕಟ ಸಂಪರ್ಕವಿದೆ ಎಂದು ಸುಧೀನ್ ನಂಬಿಸಿದ್ದ ಚೈತ್ರಾ, 2018-2023 ರ ಅವಧಿಯಲ್ಲಿ ಅಂಗಡಿ ನಿರ್ಮಾಣಕ್ಕೆ ಐದು ಲಕ್ಷ ಹಣವನ್ನು ಹಂತ ಹಂತವಾಗಿ ಪಡೆದಿದ್ದು, ಮೂರು ಲಕ್ಷವನ್ನ ಚೈತ್ರಾ ಖಾತೆಗೆ ವರ್ಗಾಯಿಸಿದ್ದ ಸುಧೀನ್ , ಉಳಿದ ಎರಡು ಲಕ್ಷ ಹಣವನ್ನ ನಗದು ರೂಪದಲ್ಲಿ ನೀಡಿರುವುದಾಗಿ ದೂರು ದಾಖಲಿಸಿದ್ದರು.
ಬಳಿಕ ಬ್ರಹ್ಮಾವರ ಸಿಪಿಐ ದಿವಾಕರ್ ಪಿಎಂ ನೇತೃತ್ವದಲ್ಲಿ ಕೋಟ ಪಿಎಸ್ಐ ಶಂಭುಲಿಂಗಯ್ಯ ತಂಡ ಆಕೆಯನ್ನು ವಿಚಾರಣೆ ನಡೆಸಿ, ಹೇಳಿಕೆಯನ್ನು ಪಡೆದುಕೊಂಡಿತು. ಕೋಟ ಠಾಣೆಯಲ್ಲಿ ಈ ಹಿಂದೆ ಸುಧೀನ ಎಂಬವರು ನೀಡಿದ ದೂರಿನ ಕುರಿತಂತೆ ವಿಚಾರಣೆ ನಡೆಸಲಾಯಿತು.
ವಿಚಾರಣೆ ಪೂರ್ಣಗೊಂಡ ಬಳಿಕ ಚೈತ್ರಾಳನ್ನು ಬ್ರಹ್ಮಾವರ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ನ್ಯಾಯಾಲಯ ಸಂಚಾರಿಪೀಠ ಎದುರು ಪೊಲೀಸರು ಹಾಜರುಪಡಿಸಿದರು. ನ್ಯಾಯಾಲಯದ ಕಾನೂನು ಪ್ರಕ್ರಿಯೆಗಳನ್ನು ಮುಗಿದ ಬಳಿಕ ಪೊಲೀಸರು, ಚೈತ್ರಾಳನ್ನು ಮಂಗಳೂರಿನ ಜೈಲಿಗೆ ಕರೆದುಕೊಂಡು ಹೋದರು. ಅಲ್ಲಿಂದ ನಾಳೆ ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಆಕೆಯನ್ನು ಕಳುಹಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿದೆ.
Discover more from Coastal Times Kannada
Subscribe to get the latest posts sent to your email.
Discussion about this post