• About us
  • Contact us
  • Disclaimer
Friday, October 31, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದಾವಣಗೆರೆ ಎಸ್‌ಬಿಐ ಬ್ಯಾಂಕ್‌ನಲ್ಲಿ 12.95 ಕೋಟಿ ಹಣ, ಚಿನ್ನಾಭರಣ ಲೂಟಿ ; ಸಾಕ್ಷಿ ಸುಳಿವು ಸಿಗಬಾರದೆಂದು ಖಾರದ ಪುಡಿ ಎರಚಿದ ದುಷ್ಕರ್ಮಿಗಳು

Coastal Times by Coastal Times
November 1, 2024
in ಕ್ರೈಮ್ ನ್ಯೂಸ್
ದಾವಣಗೆರೆ ಎಸ್‌ಬಿಐ ಬ್ಯಾಂಕ್‌ನಲ್ಲಿ 12.95 ಕೋಟಿ ಹಣ, ಚಿನ್ನಾಭರಣ ಲೂಟಿ ; ಸಾಕ್ಷಿ ಸುಳಿವು ಸಿಗಬಾರದೆಂದು ಖಾರದ ಪುಡಿ ಎರಚಿದ ದುಷ್ಕರ್ಮಿಗಳು
37
VIEWS
WhatsappTelegramShare on FacebookShare on Twitter

ದಾವಣಗೆರೆ, ಅ​ 29: ನ್ಯಾಮತಿ ಪಟ್ಟಣದಲ್ಲಿನ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ SBI ಬ್ಯಾಂಕ್​ನಲ್ಲಿ ಸೋಮವಾರ (ಅ.28) ಕಳ್ಳತನವಾಗಿದೆ.‌ ಬ್ಯಾಂಕ್​ ಲಾಕರ್​​ನ 509 ಬ್ಯಾಗ್​ಗಳಲ್ಲಿ ಇದ್ದ 12.95 ಕೋಟಿ ರೂ. ಮೌಲ್ಯದ 17 ಕೆಜಿ 750 ಗ್ರಾಂ ಚಿನ್ನಾಭರಣ ಕಳ್ಳತನವಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಬೆರಳಚ್ಚು ತಜ್ಞ ಮತ್ತು ಡಾಗ್ ಸ್ಕ್ಯ್ವಾಡ್ ತಂಡ ತಪಾಸಣೆ ನಡೆಸಿತು. ಆದರೆ ಇದುವರೆಗೂ ಒಂದು ಸುಳಿವು ಸಿಕ್ಕಿಲ್ಲ. ಬ್ಯಾಂಕ್ ಹೊರಗೆ, ಒಳಗೆ ಎಲ್ಲ ಕಡೆ ತಡಕಾಡಿದರೂ ಕಳ್ಳರ ಹೆಜ್ಜೆ ಗುರುತು ಮಾತ್ರ ಪತ್ತೆಯಾಗಿಲ್ಲ.

ನ್ಯಾಮತಿ ಪಟ್ಟಣದ ನೆಹರೂ ರಸ್ತೆಯಲ್ಲಿರುವ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಶಾಖೆಯ ಎಡಭಾಗದ ಕಿಟಕಿಯ ಸರಳುಗಳನ್ನು ಮುರಿದು ಒಳನುಗ್ಗಿದ್ದ ದುಷ್ಕರ್ಮಿಗಳು, ಮೊದಲ ಲಾಕರ್‌ನಲ್ಲಿದ್ದ ಒಟ್ಟು12.95 ಕೋಟಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ ಎಂದು ಬ್ಯಾಂಕ್ ಸಿಬ್ಬಂದಿ ಸುನೀಲ್ ಕುಮಾರ್ ಯಾದವ್ ಅವರು ನ್ಯಾಮತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ‌ಈ ಘಟನೆ ಸೋಮವಾರ ಬೆಳಗ್ಗೆ ಸಿಬ್ಬಂದಿ ಬ್ಯಾಂಕ್ ಬಾಗಿಲು ತೆರೆದಾಗ ಪ್ರಕರಣ ಬೆಳಕಿಗೆ ಬಂದಿತ್ತು.

ಗ್ಯಾಸ್ ಕಟರ್ ಬಳಸಿ ಸೇಫ್ ಲಾಕರ್ ತೆಗೆದಿರುವ ಖದೀಮರು; ಒಂದಲ್ಲ, ಎರಡಲ್ಲ ಬರೋಬ್ಬರಿ 12.95 ಕೋಟಿ ಮೌಲ್ಯದ ಚಿನ್ನಾಭರಣವನ್ನು ಖದೀಮರು ದೋಚಿರುವುದು ಪೊಲೀಸರಿಗೆ ತಲೆಬಿಸಿಯಾಗಿ ಪರಿಣಮಿಸಿದೆ. ಇಷ್ಟೆಲ್ಲ ಕೃತ್ಯ ಎಸಗಲು ಕಳ್ಳರು ಬ್ಯಾಂಕ್ ಕಿಟಕಿಯ ಮೂಲಕ ಒಳಗೆ ಪ್ರವೇಶ ಮಾಡಿದ್ದು, ಗ್ಯಾಸ್ ಕಟರ್ ಸಹಾಯದಿಂದ ಭದ್ರತಾ ಕೋಣೆಯ ಬಾಗಿಲು ಮುರಿದಿದ್ದಾರೆ. ಬಳಿಕ ಬ್ಯಾಂಕ್ ನ ಮೂರು ಸೇಫ್ ಲಾಕರ್​ಗಳ ಪೈಕಿ ಚಿನ್ನಾಭರಣ ಇದ್ದ ಒಂದು ಲಾಕರ್ ನ್ನೇ ಗ್ಯಾಸ್ ಕಟರ್ ನಿಂದ ಮುರಿದು 12.95 ಕೋಟಿ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ. ಇನ್ನೆರಡು ಲಾಕರ್ ಮುರಿಯುವ ಪ್ರಯತ್ನ ಫಲ ನೀಡದೆ ಇದ್ದಾಗ ಅ ಎರಡು ಲಾಕರ್​ನಲ್ಲಿದ್ದ 30 ಲಕ್ಷ ಹಣ ಹಾಗೂ ಚಿನ್ನಾಭರಣ ಸೇಫ್ ಆಗಿದೆ ಎಂದು ಎಫ್ಐಆರ್ ಅಲ್ಲಿ ಉಲ್ಲೇಖಿಸಲಾಗಿದೆ.‌

ಸಿ.ಸಿ.ಟಿವಿ ಕ್ಯಾಮರಾದ ಡಿವಿಆರ್‌ ಕೂಡ ಹೊತ್ತೊಯ್ದ ಕಳ್ಳರು; ಚಿನ್ನಾಭರಣದ ಜೊತೆಜೊತೆಗೆ ಕಳ್ಳರು ಬ್ಯಾಂಕ್‌ನಲ್ಲಿದ್ದ ಸಿ.ಸಿ. ಟಿವಿ ಕ್ಯಾಮರಾದ ಡಿವಿಆರ್‌ ಕೂಡ ಹೊತ್ತೊಯ್ದಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಳೆದ ಶನಿವಾರ ಮತ್ತು ಭಾನುವಾರ ಎರಡು ದಿನ ಬ್ಯಾಂಕ್‌ಗೆ ರಜೆ ಇದ್ದ ಕಾರಣ ವಾರಾಂತ್ಯದಲ್ಲೇ ಕೃತ್ಯವೆಸಗಿದ್ದಾರೆ. ಬ್ಯಾಂಕ್‌ ಒಳಗೆ ನುಗ್ಗಿದ ತಕ್ಷಣ ಸಿ.ಸಿ.ಟಿ.ವಿ, ಸೈರನ್‌ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ. ಅಂದಾಜು 30 ಲಕ್ಷ ಹಣ ಹಾಗೂ ಚಿನ್ನಾಭರಣ ಇದ್ದ ಇನ್ನೆರಡು ಲಾಕರ್‌ಗಳನ್ನು ಕತ್ತರಿಸಲು ಪ್ರಯತ್ನಿಸಿದ್ದಾರೆ. ಗ್ಯಾಸ್‌ ಖಾಲಿಯಾಗಿ ಅಥವಾ ಸಮಯ ಮೀರಿದ್ದರಿಂದ ಪರಾರಿಯಾಗಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಸಾಕ್ಷಿ ಸುಳಿವು ಸಿಗಬಾರದೆಂದು ಖಾರದ ಪುಡಿ ಎರಚಿದ ದುಷ್ಕರ್ಮಿಗಳು; ದುಷ್ಕರ್ಮಿಗಳು ಈ ಕೃತ್ಯ ಎಸಗಿದ ಬಳಿಕ ಯಾವುದೇ ಸಾಕ್ಷಿ ಸಿಗದಂತೆ, ಬ್ಯಾಂಕ್ ತುಂಬಾ ಖಾರದ ಪುಡಿ ಎರಚಿದ್ದಾರೆ. ಶ್ವಾನದಳಕ್ಕೆ ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಈ ತಂತ್ರ ಅನುಸರಿಸಿದ್ದಾರೆ. ಬೆರಳಚ್ಚು ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಪರಿಶೀಲನೆ ನಡೆಸಿ ಸಾಕ್ಷ್ಯ ಸಂಗ್ರಹಕ್ಕೆ ಪ್ರಯತ್ನಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಶ್ವಾನದಳ ಸವಳಂಗ ರಸ್ತೆಯ ಸಾಲಬಾಳು ಗ್ರಾಮದವರೆಗೆ ತೆರಳಿವೆ. ಇದೇ ಮಾರ್ಗದಲ್ಲಿ ದುಷ್ಕರ್ಮಿಗಳು ಪರಾರಿಯಾಗಿರುವ ಸಾಧ್ಯತೆ ಇದೆ ಶಂಕೆ ಪೊಲೀಸರಿಗೆ ಮೂಡಿದೆ.

ಒಟ್ಟಾರೆ ಎಸ್​ಬಿಐ ಬ್ಯಾಂಕ್ ಕಳ್ಳತನ ಪ್ರಕರಣ ನಿಜಕ್ಕೂ ಅಲ್ಲಿನ ಗ್ರಾಹಕರ ನಿದ್ದೆಗೆಡಿಸಿದೆ. ನಮ್ಮ ಆಭರಣ ಮತ್ತು ದುಡ್ಡಿಗೆ ಭದ್ರತೆ ಯಾರು ಎಂಬ ಆತಂಕ ಗ್ರಾಹಕರಲ್ಲಿ ಮೂಡಿದೆ. ಆದಷ್ಟೂ ಬೇಗ ಕಳ್ಳರನ್ನು ಪೊಲೀಸರು ಪತ್ತೆ ಹಚ್ಚಲಿ ಎಂದು ಗ್ರಾಹಕರು ಒತ್ತಾಯಿಸುತ್ತಿದ್ದಾರೆ.

“ಬ್ಯಾಂಕ್‌ಗೆ ರಾತ್ರಿ ವೇಳೆ ಕಾವಲುಗಾರರನ್ನು ನೇಮಿಸಿಲ್ಲ. ಹಳೆಯ ಕಾಲದ ಸೈರನ್‌ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. ಬ್ಯಾಂಕ್‌ ಭದ್ರತಾ ಲೋಪದಿಂದ ಇದು ನಡೆದಿದೆ. ಪ್ರಕರಣದ ತನಿಖೆಗೆ ಐವರು ಪೊಲೀಸ್‌ ಇನ್‌ಸ್ಟೆಕ್ಟರ್‌ಗಳ ನೇತೃತ್ವದ 5 ತಂಡಗಳನ್ನು ರಚಿಸಲಾಗಿದೆ. 10 ಜನ ಪಿಎಸ್‌ಐಗಳು ಸೇರಿ ಹಲವು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ತನಿಖೆ ಆರಂಭವಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌ ಮಾಹಿತಿ ನೀಡಿದ್ದಾರೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನ.3ರಂದು ಕೆಥೋಲಿಕ್ ಉದ್ಯಮಿಗಳ ಸಾಧಕರ ಸಂಸ್ಥೆ ‘ರಚನಾ’ಗೆ ಬೆಳ್ಳಿಹಬ್ಬದ ಸಂಭ್ರಮ

Next Post

ಉಳ್ಳಾಲ ತೊಕ್ಕೊಟ್ಟು ಮೊಹಮ್ಮದ್‌ ಸೈಫ್ವಾನ್‌ ಕೊಲೆ ಆರೋಪಿಗಳು ಖುಲಾಸೆ

Related Posts

ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಗೆ ವಂಚನೆ, ಆರೋಪಿ ದಂಪತಿ ಬಂಧನ, 24 ಪಾಸ್ಪೋರ್ಟ್ ವಶಕ್ಕೆ
ಕ್ರೈಮ್ ನ್ಯೂಸ್

ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಗೆ ವಂಚನೆ, ಆರೋಪಿ ದಂಪತಿ ಬಂಧನ, 24 ಪಾಸ್ಪೋರ್ಟ್ ವಶಕ್ಕೆ

October 30, 2025
62
ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು
ಕ್ರೈಮ್ ನ್ಯೂಸ್

ಪುತ್ತೂರು: ವಿಷನ್ ಇಂಡಿಯಾ ಹೆಸರಲ್ಲಿ ದುಬಾರಿ ಗಿಫ್ಟ್ ನಕಲಿ ಲಕ್ಕಿ ಸ್ಕೀಮ್ ಮಂಗಳೂರಿನ ಇಬ್ಬರ ವಿರುದ್ಧ ಕೇಸು ದಾಖಲು

October 29, 2025
69
Next Post
ಉಳ್ಳಾಲ ತೊಕ್ಕೊಟ್ಟು ಮೊಹಮ್ಮದ್‌ ಸೈಫ್ವಾನ್‌ ಕೊಲೆ ಆರೋಪಿಗಳು ಖುಲಾಸೆ

ಉಳ್ಳಾಲ ತೊಕ್ಕೊಟ್ಟು ಮೊಹಮ್ಮದ್‌ ಸೈಫ್ವಾನ್‌ ಕೊಲೆ ಆರೋಪಿಗಳು ಖುಲಾಸೆ

Discussion about this post

Recent News

ಬಂಟ್ವಾಳ ಗಾಯಾಳುವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಸೈಡ್ ಕೊಡದೆ ಸತಾಯಿಸಿದ ಬೈಕ್ ಸವಾರ ಬಂಧನ

ಬಂಟ್ವಾಳ ಗಾಯಾಳುವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಸೈಡ್ ಕೊಡದೆ ಸತಾಯಿಸಿದ ಬೈಕ್ ಸವಾರ ಬಂಧನ

October 31, 2025
47
15 ದಿನದ ಒಳಗೆ ಏರ್‌ಪೋರ್ಟ್ ರಸ್ತೆ ದುರಸ್ತಿಯಾಗದಿದ್ದರೆ ತೀವ್ರ ಪ್ರತಿಭಟನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ

15 ದಿನದ ಒಳಗೆ ಏರ್‌ಪೋರ್ಟ್ ರಸ್ತೆ ದುರಸ್ತಿಯಾಗದಿದ್ದರೆ ತೀವ್ರ ಪ್ರತಿಭಟನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ

October 30, 2025
24
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬಂಟ್ವಾಳ ಗಾಯಾಳುವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಸೈಡ್ ಕೊಡದೆ ಸತಾಯಿಸಿದ ಬೈಕ್ ಸವಾರ ಬಂಧನ

ಬಂಟ್ವಾಳ ಗಾಯಾಳುವನ್ನು ಸಾಗಿಸುತ್ತಿದ್ದ ಅಂಬ್ಯುಲೆನ್ಸಿಗೆ ಸೈಡ್ ಕೊಡದೆ ಸತಾಯಿಸಿದ ಬೈಕ್ ಸವಾರ ಬಂಧನ

October 31, 2025
15 ದಿನದ ಒಳಗೆ ಏರ್‌ಪೋರ್ಟ್ ರಸ್ತೆ ದುರಸ್ತಿಯಾಗದಿದ್ದರೆ ತೀವ್ರ ಪ್ರತಿಭಟನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ

15 ದಿನದ ಒಳಗೆ ಏರ್‌ಪೋರ್ಟ್ ರಸ್ತೆ ದುರಸ್ತಿಯಾಗದಿದ್ದರೆ ತೀವ್ರ ಪ್ರತಿಭಟನೆ: ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪ ಬಣ

October 30, 2025
ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಗೆ ವಂಚನೆ, ಆರೋಪಿ ದಂಪತಿ ಬಂಧನ, 24 ಪಾಸ್ಪೋರ್ಟ್ ವಶಕ್ಕೆ

ಇಂಗ್ಲೆಂಡಿನಲ್ಲಿ ಉದ್ಯೋಗ ಕೊಡಿಸುವುದಾಗಿ ಮಂಗಳೂರು, ಉಡುಪಿ ಜಿಲ್ಲೆಯ ಹಲವಾರು ಮಂದಿಗೆ ವಂಚನೆ, ಆರೋಪಿ ದಂಪತಿ ಬಂಧನ, 24 ಪಾಸ್ಪೋರ್ಟ್ ವಶಕ್ಕೆ

October 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d