• About us
  • Contact us
  • Disclaimer
Sunday, June 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: 7 ವರ್ಷದಲ್ಲೇ ತುಕ್ಕು ಹಿಡಿದ ಕಸ ಸಂಗ್ರಹ ವಾಹನಗಳು, ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ

Coastal Times by Coastal Times
December 1, 2023
in ಕರಾವಳಿ
ಉಳ್ಳಾಲ: 7 ವರ್ಷದಲ್ಲೇ ತುಕ್ಕು ಹಿಡಿದ ಕಸ ಸಂಗ್ರಹ ವಾಹನಗಳು, ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ
34
VIEWS
WhatsappTelegramShare on FacebookShare on Twitter

ಉಳ್ಳಾಲ, ಡಿ.1: ಡಕೋಟಾ ವಾಹನಗಳನ್ನು ನೋಡಬೇಕಾದರೆ ದೂರದ ಆಫ್ರೀಕಾಗೆ ಹೋಗಬೇಕಾಗಿಲ್ಲ. ಮಂಗಳೂರಿನ ಉಳ್ಳಾಲದಲ್ಲೇ ಡಕೋಟಾ ವಾಹನಗಳಿವೆ. ಬಾಗಿಲನ್ನು ಹಗ್ಗದಿಂದ ಕಟ್ಟಿ, ಚಾಲಕ ಕಿಟಕಿ ಮೂಲಕ ನುಸುಳಿ ವಾಹನಕ್ಕೆ ಹೋಗುತ್ತಾನೆ. ಹೀಗೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಉಳ್ಳಾಲ ನಗರದಾದ್ಯಂತ ಕಸ ಸಂಗ್ರಹ ಮಾಡುವ ಡಕೋಟ ವಾಹನದ ವೀಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು ಉಳ್ಳಾಲ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಗರಂ ಆಗಿದ್ದಾರೆ.

ನ.29ರಂದು ಉಳ್ಳಾಲ ನಗರಸಭೆಯ ವಾರ್ಡ್‌ ಸಂಖ್ಯೆ 15 ಹಿದಾಯತ್ ನಗರದ ಕಲ್ಲಾಪು ಪರಿಸರದಲ್ಲಿ ವಾಹನ ಕಸ ಸಂಗ್ರಹಕ್ಕೆ ಬಂದಾಗ ಚಾಲಕ, ವಾಹನ ಚಲಾಯಿಸಲು ವಾಹನದ ಒಳಗಡೆ ಹೋಗಬೇಕಾದರೆ ವಾಹನದ ಬಾಗಿಲನ್ನು ತೆರೆದು ಹೋಗುವ ಬದಲು, ಕಿಟಕಿಯ ಮೂಲಕ ಹೋಗಿದ್ದರು. ಈ ದೃಶ್ಯವನ್ನು ವೆಲ್‌ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಘಟಕದ ರಾಜ್ಯ ಘಟಕದ ಕೋಶಾಧಿಕಾರಿ ಅಬ್ದುಸ್ಸಲಾಂ ಸಿ.ಎಚ್. ಎಂಬುವವರು ಸೆರೆ ಹಿಡಿದು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದರು.

ಉಳ್ಳಾಲ ನಗರಸಭೆ ಅಂದರೆ ಅದು ಭ್ರಷ್ಟಾಚಾರದ ಕೂಪ ಇದ್ದಂತೆ. ಇಲ್ಲಿ ತ್ಯಾಜ್ಯ ಸಂಗ್ರಹಕ್ಕೆ ತುಕ್ಕು ಹಿಡಿದು ನಲುಗಿದ ವಾಹನವನ್ನ ಬಳಸುತ್ತಿದ್ದು ಅದರ ಎರಡೂ ಬಾಗಿಲುಗಳು ಜೋತು ಬಿದ್ದು ಓಪನ್ ಮಾಡಲೂ ಆಗುತ್ತಿಲ್ಲ. ಈ ವಾಹನವನ್ನ ಚಲಾಯಿಸುವ ಚಾಲಕ ಪ್ರಾಣ ಒತ್ತೆ ಇಟ್ಟು ದುಡಿಯುವ ಅನಿವಾರ್ಯತೆ. ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಪ್ರತಿನಿಧಿಸುವ ಕ್ಷೇತ್ರದ ಉಳ್ಳಾಲ ನಗರಸಭೆಗೆ ಕನಿಷ್ಟ ಕಸ ಸಂಗ್ರಹಕ್ಕೂ ಸರಿಯಾದ ವಾಹನ ಒದಗಿಸಲು ಸಾಧ್ಯವಿಲ್ಲವೇ.?ವಾಹನ ಚಾಲಕನಿಗೂ ಸಂಸಾರ ಇಲ್ಲವೇ.. ಈ ವಾಹನದಲ್ಲಿ ಅವಘಡ ಆದರೆ ಅವರ ಪಾಡೇನು ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ಬಗ್ಗೆ ಉಳ್ಳಾಲ ನಗರಸಭೆಯ ಪ್ರಭಾರ ಪೌರಾಯುಕ್ತೆ ವಾಣಿ ವಿ ಆಳ್ವ ಪ್ರತಿಕ್ರಿಯೆ ನೀಡಿದ್ದು, ಈ ವಾಹನ ಏಳು ವರ್ಷ ಹಳೆಯದ್ದಾಗಿದ್ದು, ದುರಸ್ಥಿ ಮಾಡಲು ಅಸಾಧ್ಯವಾಗಿದೆ. ಹೊಸ ಆಟೋ ಟಿಪ್ಪರ್ ವಾಹನ ಖರೀದಿಗೆ ಟೆಂಡರ್ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಬಗ್ಗೆ ಶಾಸಕ ಖಾದರ್ ಗಮನಕ್ಕೂ ತರಲಾಗಿದೆ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ವಿಧಾನಸಭೆಯ ಸಭಾಧ್ಯಕ್ಷರ ತವರು ಕ್ಷೇತ್ರದಲ್ಲೇ ಆಡಳಿತ ವ್ಯವಸ್ಥೆ ಅವ್ಯವಸ್ಥೆಯ ಗೂಡಾಗಿದ್ದು, ಜನ ಛೀಮಾರಿ ಹಾಕುತ್ತಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕಸ್ಟಮ್ಸ್ ಅಧಿಕಾರಿಗಳಿಂದ ಗುದನಾಳದಲ್ಲಿದ್ದ 35 ಲಕ್ಷ ರೂ. ಮೌಲ್ಯದ ಚಿನ್ನ ವಶ

Next Post

ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅವಶ್ಯ: ಸಚಿವ ದಿನೇಶ್ ಗುಂಡೂರಾವ್

Related Posts

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್
ಕರಾವಳಿ

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
40
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ
ಕರಾವಳಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
137
Next Post
ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅವಶ್ಯ: ಸಚಿವ ದಿನೇಶ್ ಗುಂಡೂರಾವ್

ಭ್ರೂಣ ಹತ್ಯೆ ತಡೆಗೆ ಕಠಿಣ ಕಾನೂನು ಅವಶ್ಯ: ಸಚಿವ ದಿನೇಶ್ ಗುಂಡೂರಾವ್

Discussion about this post

Recent News

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
40
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
137
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

ಮಂಗಳೂರು: ಆರೋಪಿಗಳಿಗೆ ಆಶ್ರಯ, ಸಹಕಾರ ನೀಡುವವರಿಗೆ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್​ ವಾರ್ನಿಂಗ್

June 1, 2025
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ  ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ( ರಿ,) ಮೆಸ್ಕಾಂ ಉಪಾಧ್ಯಕ್ಷ ಶ್ರೀ ಹೆಚ್. ಎಸ್. ಗುರುಮೂರ್ತಿಯವರಿಗೆ ಬೀಳ್ಕೊಡುಗೆ

May 30, 2025
ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

ಉಳ್ಳಾಲದ ಮಂಜನಾಡಿ ಗ್ರಾಮದ ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ‌-ಇಬ್ಬರು ಮೊಮ್ಮಕ್ಕಳು ಸಾವು, ನಾಲ್ವರ ರಕ್ಷಣೆ

May 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d