ಬೆಳ್ತಂಗಡಿ: ಸಮೀಪದ ಪಿಲ್ಯದಲ್ಲಿ ಭಾನು ವಾರ ರಾತ್ರಿ ಹೊಸ ವರ್ಷಾಚರಣೆಯಲ್ಲಿ ನಿರತರಾಗಿದ್ದ ಇಬ್ಬರು ಯುವಕರ ನಡುವೆ ಗಲಾಟೆ ನಡೆದಿದ್ದು, ಯುವಕನೊಬ್ಬನ ಮೂಗನ್ನು ಆತನ ಗೆಳೆಯ ಕಚ್ಚಿ ತುಂಡರಿಸಿದ್ದಾನೆ. ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28) ಮೂಗಿಗೆ ಗಾಯವಾಗಿದೆ. ಆತನ ಗೆಳೆಯ, ಮೂಡಿಗೆರೆ ತಾಲ್ಲೂಕಿನ ರಾಕೇಶ್ ಮೂಗು ಕಚ್ಚಿ ಗಾಯಗೊಳಿಸಿದ ಆರೋಪಿ. ಆರೋಪಿಯು ಪಿಲ್ಯ ಗ್ರಾಮದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಸಂಬಂಧಿಕರ ಮನೆಯಲ್ಲಿ ವಾಸವಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಕೆಲ ಯುವಕರು ಸೇರಿ ಅಳದಂಗಡಿ ಯಲ್ಲಿ ಹೊಸ ವರ್ಷಾಚರಣೆ ನಡೆಸಿದ್ದರು. ಬಳಿಕ ವೈನ್ಶಾಪ್ ಒಂದರಲ್ಲಿ ಮದ್ಯ ಪಾನ ಮಾಡಿದ್ದರು. ಅಲ್ಲಿಂದ ಮನೆಗೆ ಮರಳುವಾಗ ದೀಕ್ಷಿತ್ ಮತ್ತು ರಾಕೇಶ್ ನಡುವೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದಿತ್ತು. ಇಬ್ಬರ ನಡುವೆ ಆರಂಭವಾದ ಜಗಳ ವಿಕೋಪಕ್ಕೆ ತಿರುಗಿದಾಗ ರಾಕೇಶ್ ದೀಕ್ಷಿತ್ನ ಮೂಗನ್ನು ಕಚ್ಚಿ ಅರ್ಧ ಭಾಗವನ್ನೇ ಕಿತ್ತು ಹಾಕಿದ್ದಾನೆ. ಗಾಯಾಳು ದೀಕ್ಷಿತ್ನನ್ನು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
Discussion about this post