• About us
  • Contact us
  • Disclaimer
Tuesday, February 3, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಜನವರಿ 05 ಕಲಾಂಗಣದಲ್ಲಿ ಆಲನಿ ಮೆಲೊಡಿ ನೈಟ್

Coastal Times by Coastal Times
January 2, 2025
in ಕರಾವಳಿ
ಮಂಗಳೂರು: ಜನವರಿ 05 ಕಲಾಂಗಣದಲ್ಲಿ ಆಲನಿ ಮೆಲೊಡಿ ನೈಟ್
26
VIEWS
WhatsappTelegramShare on FacebookShare on Twitter

ಮಂಗಳೂರು, ಜ.2: ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277 ನೇ ಕಾರ್ಯಕ್ರಮವು ಜನವರಿ 05 ರಂದು ಶಕ್ತಿನಗರದ ಕಲಾಂಗಣದಲ್ಲಿ 6.30 ಗಂಟೆಗೆ ನಡೆಯಲಿದೆ. ಒಂಬತ್ತು ವರ್ಷ ಪ್ರಾಯದ ಮೂಡಬಿದ್ರೆ ತಾಕೊಡೆಯ ಆಲನಿ ಲಿಯೊರಾ ಡಿಸೋಜ ಈ ಕಾರ್ಯಕ್ರಮ ನೀಡಲಿದ್ದು, ಆಕೆ ತಿಂಗಳ ವೇದಿಕೆ ಮುನ್ನಡೆಸುವ ಅತೀ ಚಿಕ್ಕ ವಯಸ್ಸಿನ ಕಲಾವಿದೆಯಾಗಲಿದ್ದಾಳೆ.

ಮೂಡಬಿದ್ರೆಯ ಕಾರ್ಮೆಲ್ ಶಾಲೆಯ ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಬಹುಮುಖಿ ಪ್ರತಿಭಾವಂತೆ ಆಲನಿ ಕಲಿಕೆಯಲ್ಲಿ ಮುಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಹಾಡುಗಾರಿಕೆಯ ಮೂಲಕ ಜನಮೆಚ್ಚುಗೆ ಗಳಿಸಿದ್ದಾಳೆ. ಪಿಯಾನೊ, ವಯೊಲಿನ್, ಗಿಟಾರ್, ಕೀಬೋರ್ಡ್, ಶಾಸ್ತ್ರೀಯ ಗಾಯನ ಹೀಗೆ ಹಲವು ಸ್ತರಗಳಲ್ಲಿ ತರಬೇತಿ ಪಡೆಯುತ್ತಿದ್ದಾಳೆ. ದಾಯ್ಜಿವರ್ಲ್ಡ್ ವಾಹಿನಿಯ `ಗಾಯಾನ್ ಆನಿ ಗಜಾಲಿ’, 286ನೇ ವಿಲ್ಫಿ ನೈಟ್, ನಿಹಾಲ್ ತಾವ್ರೊ ಸಂಗೀತ ರಸಮಂಜರಿ ಇತ್ಯಾದಿ ಕಾರ್ಯಕ್ರಮಗಳಲ್ಲಿ ತನ್ನ ಗಾಯನ ಪ್ರತಿಭೆಯನ್ನು ತೋರಿಸಿದ್ದಾಳೆ. ಅವಳ ಪ್ರತಿಭೆಯನ್ನು ಗುರುತಿಸಿ ಮಾಂಡ್ ಸೊಭಾಣ್ ಇಂತಹ ಬಹುದೊಡ್ಡ ಅವಕಾಶ ನೀಡಿದೆ.
ಕಾರ್ಯಕ್ರಮದಲ್ಲಿ ಆಕೆ ಚಾಫ್ರಾ ಡಿಕೋಸ್ತಾ, ವಿಲ್ಫಿ ರೆಬಿಂಬಸ್, ಕ್ಲೊಡ್ ಡಿಸೋಜ, ಕ್ರಿಸ್ ಪೆರಿ, ಎರಿಕ್ ಒಝೇರಿಯೊ, ಮೆಲ್ವಿನ್ ಪೆರಿಸ್ ಮತ್ತು ಲಾಯ್ಡ್ ರೇಗೊ ಹೀಗೆ ಕೊಂಕಣಿಯ ಮೇರು ಕವಿಗಳು ಹಾಗೂ ಸಂಗೀತಗಾರರ ರಚನೆಗಳನ್ನು ಹಾಡಲಿದ್ದಾಳೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವಾ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ, ಕಲಾಂಗಣ್ ಚೇರ್’ಮ್ಯಾನ್ ರೊನಾಲ್ಡ್ ಮೆಂಡೊನ್ಸಾ ಮುಂಬಯಿ ಮತ್ತು ವಿಜಯ್ ಡಿಸೋಜ ದುಬಾಯಿ ಇವರು ಗೌರವ ಅತಿಥಿಗಳಾಗಿ ಹಾಗೂ ಮಾಂಡ್ ಸೊಭಾಣ್ ಸಂಸ್ಥೆಯ ಪರವಾಗಿ ಗುರಿಕಾರ ಎರಿಕ್ ಒಝೇರಿಯೊ ಮತ್ತು ಅಧ್ಯಕ್ಷ ಲುವಿ ಪಿಂಟೊ ಉಪಸ್ಥಿತರಿರುವರು.
ಯುವ ಸಂಗೀತಗಾರ ಮೇವಿಶ್ ಇವರ ಸಂಗೀತ ನಿರ್ದೇಶನದಲ್ಲಿ ಸಚಿನ್ ಸಿಕ್ವೇರಾ (ಡ್ರಮ್ಸ್), ಜೇಸನ್ ಡಿಸೋಜ (ಲೀಡ್ ಗಿಟಾರ್), ಆಶ್ವಿನ್ ಕೊರೆಯಾ (ಬೇಸ್ ಗಿಟಾರ್), ಶೊನ್ ಬ್ರಾಸ್ಲಿನ್ (ವಯೊಲಿನ್), ಅಶ್ವಿಲ್ ಕುಲಾಸೊ (ಕೀಬೋರ್ಡ್) ಸಂಗೀತ ನೀಡಲಿದ್ದಾರೆ.

ಖ್ಯಾತ ಹಿಂದೂಸ್ತಾನಿ ಗಾಯನ ತರಬೇತುದಾರರಾದ ಶಿಲ್ಪಾ ಕುಟಿನ್ಹಾ ಇವರು ತರಬೇತಿ ನೀಡಿದ್ದು, ಬ್ಲೂ ಏಂಜಲ್ಸ್ ಕೊಯರ್ ತಂಡ ಮತ್ತು ಆರ್ವಿನ್ ಡಿಕುನ್ಹಾ ಹಿನ್ನೆಲೆಯಲ್ಲಿ ಸಹಕರಿಸಲಿದ್ದಾರೆ. ಕಾರ್ಯಕ್ರಮ ನಿರೂಪಣೆಯಲ್ಲಿ ರೋಶನ್ ಕುಲ್ಶೇಕರ್ ಇವರೊಡನೆ ಎಳೆಯರಾದ ಸಂಜನಾ ರಿವಾ ಮತಾಯಸ್, ಏಂಜಲ್ ಮೇಘನ್ ಕುಟಿನ್ಹಾ, ಅನಿಕಾ ಡಿಸೋಜ ಮತ್ತು ಶನನ್ ಡಿಕೋಸ್ತಾ ಸಹಕರಿಸುವರು.
ಆಲನಿಯ ಗಾಯನಕ್ಕಾಗಿ ಪ್ರಪ್ರಥಮವಾಗಿ ಪಾರಿತೋಷಕ ನೀಡಿ ಪ್ರೋತ್ಸಾಹಿಸಿದ ನೋರಿನ್ ಮೆಂಡೊನ್ಸಾ ಇವರ ಸ್ಮರಣಾರ್ಥ ಈ ಸಂಗೀತ ಸಂಜೆ ಆಯೋಜಿಸಲಾಗಿದೆ. ಕೊಂಕಣಿ ಪ್ರದರ್ಶನ ಕಲೆಗಳಿಗೆ ವೇದಿಕೆ ನೀಡುವ ಉದ್ದೇಶದಿಂದ 2002 ಜನವರಿ 06 ರಿಂದ ಆರಂಭವಾದ ತಿಂಗಳ ವೇದಿಕೆಯಲ್ಲಿ, ಕಳೆದ 23 ವರ್ಷಗಳಲ್ಲಿ ಕೊಂಕಣಿ ಸಂಗೀತ, ಗಾಯನ, ನಾಟಕ, ನೃತ್ಯ, ಯಕ್ಷಗಾನ, ಹಾಸ್ಯ ಮತ್ತು ವಿವಿಧ ಜನಪದ ಕಲೆಗಳು ಹೀಗೆ ಎಲ್ಲಾ ರೀತಿಯ ಕಲಾವಿದರಿಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತಿಕಾಗೋಷ್ಠಿಯಲ್ಲಿ : ಆಲನಿ ಲಿಯೊರಾ ಡಿಸೋಜ – ಕಲಾವಿದೆ, ಲುವಿ ಜೆ ಪಿಂಟೊ – ಅಧ್ಯಕ್ಷರು, ಮಾಂಡ್ ಸೊಭಾಣ್, ಶಿಲ್ಪಾ ಕುಟಿನ್ಹಾ – ತರಬೇತುದಾರರು, ಮೇವಿಶ್ – ಸಂಗೀತ ನಿರ್ದೇಶಕ ,ಅಜಯ್ ಡಿಸೋಜ – ಕಾರ್ಯಕ್ರಮ ವ್ಯವಸ್ಥಾಪಕರು ಹಾಗೂ ಆಲನಿಯ ತಂದೆ

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಜ.14-15: ಬಿಕರ್ನಕಟ್ಟೆಯ ಬಾಲ ಯೇಸುವಿನ ವಾರ್ಷಿಕ ಮಹೋತ್ಸವ

Next Post

ಮಂಗಳೂರು: ಪಿಲಿಕುಳದ ಬಳಿ ಗಾಂಜಾ ಮಾರಾಟ; ಇಬ್ಬರು ಆರೋಪಿಗಳ ಬಂಧನ

Related Posts

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ
ಕರಾವಳಿ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
125
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ
ಕರಾವಳಿ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
25
Next Post
ಮಂಗಳೂರು: ಪಿಲಿಕುಳದ ಬಳಿ ಗಾಂಜಾ ಮಾರಾಟ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಪಿಲಿಕುಳದ ಬಳಿ ಗಾಂಜಾ ಮಾರಾಟ; ಇಬ್ಬರು ಆರೋಪಿಗಳ ಬಂಧನ

Discussion about this post

Recent News

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
96
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
40
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d