• About us
  • Contact us
  • Disclaimer
Friday, July 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಿಂದೊಬ್ಬಳು ಮುಂದೊಬ್ಬಳನ್ನು ಕೂರಿಸಿಕೊಂಡು ಬೈಕ್ ನಲ್ಲಿ ವ್ಹೀಲಿಂಗ್ – ಯುವತಿಯರು ಹಾಗೂ ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲು

Coastal Times by Coastal Times
April 2, 2023
in ರಾಷ್ಟ್ರೀಯ ಸುದ್ದಿ
ಹಿಂದೊಬ್ಬಳು ಮುಂದೊಬ್ಬಳನ್ನು ಕೂರಿಸಿಕೊಂಡು ಬೈಕ್ ನಲ್ಲಿ ವ್ಹೀಲಿಂಗ್ – ಯುವತಿಯರು ಹಾಗೂ ಬೈಕ್ ಸವಾರನ ವಿರುದ್ಧ ಪ್ರಕರಣ ದಾಖಲು
156
VIEWS
WhatsappTelegramShare on FacebookShare on Twitter

ಮುಂಬಯಿ: ಮಹಾರಾಷ್ಟ್ರ ರಾಜಧಾನಿಯಲ್ಲಿ ಬೈಕ್‌ನಲ್ಲಿ ಒಬ್ಬ ಯುವತಿಯನ್ನು ಹಿಂಬದಿ ಸೀಟಿನಲ್ಲಿ ಹಾಗೂ ಮತ್ತೊಬ್ಬಳನ್ನು ಮುಂದಿನ ಟ್ಯಾಂಕ್‌ ಮೇಲೆ ಕೂರಿಸಿಕೊಂಡು ಯುವಕನೊಬ್ಬ ಅಪಾಯಕಾರಿ ವ್ಹೀಲಿಂಗ್ (Bike Wheeling) ಮಾಡಿರುವ ಘಟನೆಯ ವಿಡಿಯೋ ಹಾಗೂ ಫೋಟೊಗಳು ವೈರಲ್‌ ಆಗಿವೆ. ಅಪಾಯಕಾರಿಯಾಗಿ ಸ್ಟಂಟ್‌ ಮಾಡುತ್ತಾ ಸಾಗುತ್ತಿರುವ 13 ಸೆಕೆಂಡುಗಳ ವಿಡಿಯೋ ವೀಕ್ಷಿಸಿದ ಸಾಮಾಜಿಕ ಜಾಲತಾಣದ ಅನೇಕ ಬಳಕೆದಾರರು ಕೂಡಲೇ ಮುಂಬಯಿ ಪೊಲೀಸರ ಗಮನಕ್ಕೆ ತಂದಿದ್ದಾರೆ.

ಇಂಥ ವಿಡಿಯೊಗಳನ್ನು ಹಂಚಿಕೆ ಮಾಡುವ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ಮೂಲದ ಬೆನ್ನತ್ತಿದ ಮುಂಬಯಿ ಪೊಲೀಸರು ಬೈಕ್‌ ಸವಾರನನ್ನು ಪತ್ತೆ ಮಾಡಿ , ಆತನ ಹಾಗೂ ಇಬ್ಬರು ಯುವತಿಯರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ. ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

A case has been registered with BKC Police Station. Investigation into identifying the accused is underway.

If anyone has any information about persons in this video, you can DM us directly. https://t.co/CWGoqzSuaP

— Mumbai Traffic Police (@MTPHereToHelp) March 31, 2023

ಟ್ಯಾಂಕ್ ಮೇಲೆ ಕುಳಿತಿದ್ದ ಯುವತಿ, ಬೈಕ್ ಸವಾರನನ್ನು ಮುಂದಿನಿಂದ ಅಪ್ಪಿಕೊಂಡಿದ್ದರೆ, ಹಿಂದಿನಿಂದ ಮತ್ತೊಬ್ಬ ಯುವತಿ ಅಪ್ಪಿಕೊಂಡು ಕುಳಿತಿದ್ದಳು. ಬೈಕ್ ಸವಾರ ಏಕಾಏಕಿ ಮುಂದಿನ ಚಕ್ರ ಎತ್ತಿ ವ್ಹೀಲಿಂಗ್ ಮಾಡುತ್ತಾ ಹಲವು ಮೀಟರ್‌ಗಳಷ್ಟು ದೂರ ಸಾಗಿದ್ದಾನೆ. ಆ ಇಬ್ಬರೂ ಯುವತಿಯರು ಖುಷಿಯಿಂದ ಕೂಗುತ್ತಾ, ನಕ್ಕಿದ್ದಾರೆ. ಟ್ಯಾಂಕ್ ಮೇಲೆ ಕುಳಿತಿದ್ದ ಯುವತಿ ರಸ್ತೆಯಲ್ಲಿ ಹಿಂದೆ ಬರುತ್ತಿದ್ದ ವಾಹನಗಳ ಕಡೆ ಕೈಬೀಸಿದ್ದಾಳೆ. 13 ಸೆಕೆಂಡುಗಳ ಈ ವಿಡಿಯೋವನ್ನು ‘ಪಾತ್‌ಹೋಲ್ ವಾರಿಯರ್ಸ್ ಫೌಂಡೇಷನ್ #ರೋಡ್‌ಸೇಫ್ಟಿ ಎಂಬ ಟ್ವಿಟ್ಟರ್ ಖಾತೆ ಪೋಸ್ಟ್ ಮಾಡಿದ್ದು, ಅದನ್ನು ಸಾವಿರಾರು ಮಂದಿ ರೀಟ್ವೀಟ್ ಮಾಡಿದ್ದಾರೆ

ವಾಹನ ಸವಾರಿಯ ಕಾನೂನು ಸುರಕ್ಷತಾ ನಿಯಮಗಳನ್ನು ಮೀರಿ ಮೂವರು ಬೈಕ್‌ ಸ್ಟಂಟ್‌ನಲ್ಲಿ ಮಾಡಿದ್ದಾರೆ. ಅಲ್ಲದೆ ಹೆಲ್ಮೆಟ್‌ ಕೂಡ ಧರಿಸಿಲ್ಲ. ಅಪಾಯಕಾರಿಯಾಗಿ ವ್ಹೀಲಿಂಗ್ ಸ್ಟಂಟ್ಸ್ ಮಾಡುವಾಗ ಸ್ವಲ್ಪ ಎಡವಿದರೂ ಪ್ರಾಣಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಇಂಥ ಸಾಹಸಕ್ಕೆ ಯಾರೂ ಮುಂದಾಗಬಾರದು ಎಂದು ಪೊಲೀಸರು ಎಚ್ಚರಿಕೆ ಕೊಟ್ಟಿದ್ದಾರೆ.

ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸರು ಐಪಿಸಿ ಸೆಕ್ಷನ್‌ಗಳಾದ 279 (ಅಜಾಗರೂಕತೆಯ ಚಾಲನೆ), 336 (ಜೀವಗಳಿಗೆ ಅಪಾಯ ಉಂಟುಮಾಡುವುದು) ಹಾಗೂ ಮೋಟಾರು ವಾಹನ ಕಾಯ್ದೆ ಅಡಿ ಮೂವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಜಿಲ್ಲಾ ಕಾರಾಗೃಹ: ಭಾರೀ ಸಂಖ್ಯೆಯ ಪೊಲೀಸರಿಂದ ದಿಢೀರ್ ತಪಾಸಣೆ

Next Post

ಸಲಿಂಗಕಾಮಿಯ ಹತ್ಯೆ : ಹಣ ಕೊಡದ ಕಾರಣಕ್ಕೆ ಕೊಲೆ, ಆರೋಪಿಗೆ ನ್ಯಾಯಾಲಯದಿಂದ ಜಾಮೀನು

Related Posts

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ
ರಾಷ್ಟ್ರೀಯ ಸುದ್ದಿ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
15
ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು
ರಾಷ್ಟ್ರೀಯ ಸುದ್ದಿ

ಉಕ್ರೇನ್‌ನ ಒಡೆಸಾದಲ್ಲಿ ವಾಣಿಜ್ಯ ನೌಕೆ ಮೇಲೆ ಕ್ಷಿಪಣಿ ದಾಳಿ; ಕೇರಳದ ಕಾಸರಗೋಡಿನ ಯುವಕ ಸೇರಿ ನಾಲ್ವರು ಭಾರತೀಯರು ಸಾವು

July 21, 2026
53
Next Post
ಸಲಿಂಗಕಾಮಿಯ ಹತ್ಯೆ : ಹಣ ಕೊಡದ ಕಾರಣಕ್ಕೆ ಕೊಲೆ, ಆರೋಪಿಗೆ ನ್ಯಾಯಾಲಯದಿಂದ ಜಾಮೀನು

ಸಲಿಂಗಕಾಮಿಯ ಹತ್ಯೆ : ಹಣ ಕೊಡದ ಕಾರಣಕ್ಕೆ ಕೊಲೆ, ಆರೋಪಿಗೆ ನ್ಯಾಯಾಲಯದಿಂದ ಜಾಮೀನು

Discussion about this post

Recent News

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
1
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
15
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಕಡಬದ ಯುವಕ ಸೆರೆ

July 24, 2026
ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

July 24, 2026
ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d