• About us
  • Contact us
  • Disclaimer
Wednesday, February 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಪೊಲೀಸ್ ಕಮಿಷನರ್‌ ಕಂಠದಲ್ಲಿ ಬಂದ ಟಗರು ಹಾಡಿಗೆ ನಟ ಶಿವರಾಜ್‌ಕುಮಾರ್‌ ಅವರು ಪೊಲೀಸರೊಂದಿಗೆ ಹೆಜ್ಜೆ ಹಾಕಿದ ಕ್ಷಣ.

Coastal Times by Coastal Times
May 2, 2022
in ಕರಾವಳಿ
ಮಂಗಳೂರು: ಪೊಲೀಸ್ ಕಮಿಷನರ್‌ ಕಂಠದಲ್ಲಿ ಬಂದ ಟಗರು ಹಾಡಿಗೆ ನಟ ಶಿವರಾಜ್‌ಕುಮಾರ್‌ ಅವರು ಪೊಲೀಸರೊಂದಿಗೆ ಹೆಜ್ಜೆ ಹಾಕಿದ ಕ್ಷಣ.
254
VIEWS
WhatsappTelegramShare on FacebookShare on Twitter

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವತಿಯಿಂದ ಮಂಗಳೂರಿನಲ್ಲಿ ಆಯೋಜಿಸಿದ್ದ ಪುನೀತ್‌ ರಾಜಕುಮಾರ್ ಸ್ಮರಣೆ ಕಾರ್ಯಕ್ರಮದಲ್ಲಿ ಚಿತ್ರನಟ ಶಿವರಾಜ್‌ಕುಮಾರ್ ಮತ್ತು ಗೀತಾ ದಂಪತಿ ಭಾಗವಹಿಸಿದರು. ‘ಅಪ್ಪುವನ್ನು ಕಳೆದುಕೊಂಡಿದ್ದು ಅದು ನಮ್ಮ ಕುಟುಂಬಕ್ಕೆ ಮಾತ್ರವಲ್ಲ, ಇಡೀ ರಾಜ್ಯದ ಜನರಿಗೆ ಮರೆಯಲಾಗದ ನೋವು. ಅಪ್ಪು ಇಲ್ಲ ಎಂದು ಕೊರಗುವುದಕ್ಕಿಂತ, ಆತ ನಮ್ಮೊಡನೆ ಇದ್ದಾನೆ ಎಂತಲೇ ನಾವು ಸಂಭ್ರಮಿಸಬೇಕು. ಆ ಮೂಲಕ ನಮ್ಮೊಳಗೆ ಸಮಾಧಾನ ಕಂಡುಕೊಳ್ಳಬೇಕು’ ಎಂದು ಶಿವರಾಜ್‌ಕುಮಾರ್ ಹೇಳಿದರು.

‘ಚಿಕ್ಕಂದಿನಲ್ಲೇ ‘ಪ್ರೇಮದ ಕಾಣಿಕೆ’ ಚಿತ್ರ ಮಾಡಿದ್ದ ಪುನೀತ್ ಸೂಪರ್ ಸ್ಟಾರ್ ಆಗಿದ್ದ.  ಆರು ತಿಂಗಳಾದರೂ ಆತ ನಮ್ಮಿಂದ ದೂರವಾದ ನೋವು ಮರೆಯಲು ಸಾಧ್ಯವಾಗಿಲ್ಲ. ಮಾನವೀಯತೆ ಎನ್ನುವ ಪದಕ್ಕೆ ಆತ ಉದಾಹರಣೆ. ನಾವಿಬ್ಬರೂ ಸಿಕ್ಕಾಗ ಚಿತ್ರಗಳ ಬಗ್ಗೆ ಮಾತ್ರ ಚರ್ಚಿಸುತ್ತಿದ್ದೆವು. ಆತ ಮಾಡಿದ ಮಾನವೀಯ ಕಾರ್ಯಗಳ ಬಗ್ಗೆ ನನಗೇ ಗೊತ್ತಿರಲಿಲ್ಲ. ಆತನ ಕಾಲಾನಂತರವೇ ಅದು ತಿಳಿದಿದ್ದು’ ಎಂದರು. ಅಪ್ಪು ಸಂಭ್ರಮ ಮಂಗಳೂರಿನಲ್ಲಿ ಮಾಡೋಣ: ‘ಮಂಗಳೂರು ನನಗೆ ಇಷ್ಟವಾದ ಊರು. ಅಪ್ಪಾಜಿಯನ್ನು ಬಿಟ್ಟರೆ ನಮ್ಮ ಕುಟುಂಬದಲ್ಲಿ ನಾನು ನಟಿಸಿರುವ ಹೆಚ್ಚಿನ ಸಿನಿಮಾಗಳ ಶೂಟಿಂಗ್ ಇಲ್ಲಿ ನಡೆದಿದೆ. ನನಗೂ, ಪೊಲೀಸ್ ಇಲಾಖೆಗೂ ನಿಕಟ ಸಂಬಂಧ. ನಾನು ಪೊಲೀಸ್ ಪಾತ್ರದಲ್ಲಿ ನಟಿಸಿದ ಚಿತ್ರಗಳು ಯಶಸ್ಸು ಪಡೆದಿವೆ.ಮುಂದಿನ ಬಾರಿ ಮಂಗಳೂರಿನಲ್ಲಿ ‘ಅಪ್ಪು ಸೆಲೆಬ್ರೇಷನ್’ ಮಾಡೋಣ’ ಎಂದಾಗ ಸಭೆಯಲ್ಲಿ ಚಪ್ಪಾಳೆಯ ಸುರಿಮಳೆ.

ಇಲಾಖೆ ವತಿಯಿಂದ ಶಿವರಾಜ್‌ಕುಮಾರ್ –ಗೀತಾ ದಂಪತಿಯನ್ನು ಸನ್ಮಾನಿಸಲಾಯಿತು. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ವಾಗತಿಸಿದರು. ಡಿಸಿಪಿ ಹರಿರಾಂ ಶಂಕರ್, ಚಿತ್ರ ನಿರ್ಮಾಪಕ ರಾಜೇಶ್ ಭಟ್, ಮೇಘರಾಜ್ ರಾಜೇಂದ್ರಕುಮಾರ್ ಇದ್ದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಪೊಲೀಸರಿಗಾಗಿ ಬಾಲಿವುಡ್‌ನವರು ಕಾರ್ಯಕ್ರಮ ಮಾಡಿದಂತೆ ಅಪ್ಪಾಜಿಯವರು ಪೊಲೀಸ್‌ ಇಲಾಖೆಗೆ ಕಾರ್ಯಕ್ರಮ ಮಾಡಿದ್ದರು. ದೆಹಲಿಗೆ ಹೋಗಿಯೂ ಕಾರ್ಯಕ್ರಮ ಮಾಡಿದ್ದರು. ಕನ್ನಡ ಸಿನಿಮಾ‌ ಇಂಡಸ್ಟ್ರಿಯಿಂದಲೂ ಮುಂದೆ ಕಾರ್ಯಕ್ರಮ ಮಾಡಲಾಗುವುದು ಎಂದರು. ‘ಬೈರಾಗಿ ಚಿತ್ರ ಶೀಘ್ರದಲ್ಲೇ ಬಿಡುಗಡೆ ಆಗಲಿದೆ. ‘ವೇದ’ ಶೂಟಿಂಗ್ ನಡೆಯುತ್ತಿದೆ. ನಾನು ಮತ್ತು ಪ್ರಭುದೇವ್ ನಟಿಸಲಿರುವ ಯೋಗರಾಜ್ ಭಟ್ ಅವರ ಚಿತ್ರದ ಶೂಟಿಂಗ್ ಆರಂಭವಾಗಲಿದೆ’ ಎಂದರು. ‘ಟಾಕೀಸ್, ಆ್ಯಪ್ ಚಿತ್ರರಂಗಕ್ಕೆ ಅನುಕೂಲವಾಗಿದೆ. ಅವಕಾಶಗಳು ಸಿಗದಿರುವವರಿಗೆ ಶೇ 100 ಅವಕಾಶ ಸಿಗಲಿದೆ. ತುಳುವಿನ ಜತೆಗೆ ಕನ್ನಡಕ್ಕೂ ಇದು ಪ್ರಯೋಜನವಾಗಲಿದೆ. ತುಳುವನ್ನು ಪ್ರಧಾನವಾಗಿಟ್ಟುಕೊಂಡು ಕನ್ನಡದಲ್ಲಿಯೂ ಈ ಆ್ಯಪ್ ಮಾಡುತ್ತಿರುವುದು ಸಂತಸದ ವಿಚಾರ’ ಎಂದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕಾಸರಗೋಡು : ಕೊಳೆತ ಶವರ್ಮ ತಿಂದ ಹದಿಹರೆಯದ ಬಾಲಕಿ ಸಾವು, 46 ಮಂದಿ ಆಸ್ಪತ್ರೆಗೆ ದಾಖಲು,ಇಬ್ಬರ ಬಂಧನ

Next Post

ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ, ಅಡ್ಡಪರಿಣಾಮಗಳನ್ನು ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್

Related Posts

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್
ಕರಾವಳಿ

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
12
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು
ಕರಾವಳಿ

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
44
Next Post
ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ, ಅಡ್ಡಪರಿಣಾಮಗಳನ್ನು ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್

ಕೋವಿಡ್-19 ಲಸಿಕೆ ಪಡೆಯಲು ಯಾರನ್ನೂ ಒತ್ತಾಯಿಸುವಂತಿಲ್ಲ, ಅಡ್ಡಪರಿಣಾಮಗಳನ್ನು ಸಾರ್ವಜನಿಕಗೊಳಿಸಿ: ಸುಪ್ರೀಂ ಕೋರ್ಟ್

Discussion about this post

Recent News

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
12
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
44
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್‌ ಚಿನ್ನು ಪಾಪು ಆತ್ಮಹತ್ಯೆಯ ಬಳಿಕ ಪ್ರಿಯಕರನೂ ಸಾವಿಗೆ ಶರಣು; ಕಾರಣ ನಿಗೂಢ

February 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d