• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್‌ಗಿರಿ ಪ್ರಕರಣ, ಐವರು ಆರೋಪಿಗಳ ಬಂಧನ, ಠಾಣೆಗೆ ಬಿಜೆಪಿ-ಹಿಂದೂ ಸಂಘಟನೆ ನಾಯಕರ ದೌಡು

Coastal Times by Coastal Times
June 2, 2023
in ಕ್ರೈಮ್ ನ್ಯೂಸ್
ಉಳ್ಳಾಲ: ಸೋಮೇಶ್ವರ ನೈತಿಕ ಪೊಲೀಸ್‌ಗಿರಿ ಪ್ರಕರಣ, ಐವರು ಆರೋಪಿಗಳ ಬಂಧನ, ಠಾಣೆಗೆ ಬಿಜೆಪಿ-ಹಿಂದೂ ಸಂಘಟನೆ ನಾಯಕರ ದೌಡು
232
VIEWS
WhatsappTelegramShare on FacebookShare on Twitter

ಉಳ್ಳಾಲ: ಮಂಗಳೂರಿನ ಸೋಮೇಶ್ವರ ಬೀಚ್​​ನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಲಪಾಡಿ ನಿವಾಸಿ ಅಖಿಲ್ ಬಂಧಿತ ಆರೋಪಿ. ಪ್ರಕರಣ ಸಂಬಂಧ ಈವರೆಗೆ ಅಪ್ರಾಪ್ತ ಸೇರಿ ಐವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಸ್ತಿಪಡ್ಪು‌ ನಿವಾಸಿ ಯತೀಶ್, ತಲಪಾಡಿ ನಿವಾಸಿಗಳಾದ ಸಚಿನ್ ಮತ್ತು ಸುಹಾನ್, ಅಖಿಲ್ ಸೇರಿ ಓರ್ವ ಅಪ್ರಾಪ್ತ ಅರೆಸ್ಟ್‌ ಆಗಿದ್ದಾರೆ.

ಐಪಿಸಿ ಸೆಕ್ಷನ್​ 307 ಹಾಗೂ ಗಲಭೆ ಸೃಷ್ಟಿ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಮತ್ತಷ್ಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಮೂರು ಪ್ರತ್ಯೇಕ ತಂಡದಿಂದ ತನಿಖೆ ಮುಂದುವರಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ದೂರಿ‌ನಡಿ ಎಫ್ಐಆರ್ ದಾಖಲಾಗಿತ್ತು. ಅದರಂತೆ ಹಿಂದೂ ಸಂಘಟನೆಗೆ ಸೇರಿದ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಪೊಲೀಸ್ ಕಮಿಷನರ್ ಭೇಟಿ: ಉಳ್ಳಾಲ ಪೊಲೀಸ್ ಠಾಣೆಗೆ ಮಂಗಳೂರು ಕಮಿಷನರ್​ ಕುಲದೀಪ್ ಜೈನ್ ಭೇಟಿ ನೀಡಿದರು. ಸಿಸಿಬಿ ಎಸಿಪಿ ಪಿ.ಎ ಹೆಗ್ಡೆ ಹಾಗೂ ಉಳ್ಳಾಲ ಇನ್ಸ್​ಪೆಕ್ಟರ್ ಅವರಿಂದ ಮಾಹಿತಿ ಪಡೆದರು. ಪ್ರಕರಣ ಗಂಭೀರ ಸ್ವರೂಪ ಪಡೆದ ಹಿನ್ನೆಲೆ ಕಮಿಷನರ್ ಠಾಣೆಗೆ ಭೇಟಿ ನೀಡಿದರು. ಮೂರು ಪೊಲೀಸ್ ತಂಡಗಳಿಗೆ ತನಿಖೆ ನಡೆಸುವಂತೆ ಸೂಚಿಸಿದ ಕಮಿಷನರ್ ಉಳಿದ ಆರೋಪಿಗಳ ಶೀಘ್ರ ಪತ್ತೆಗೆ ಆದೇಶಿಸಿದ್ದಾರೆ.

ಠಾಣೆಗೆ ಬಿಜೆಪಿ-ಹಿಂದೂ ಸಂಘಟನೆ ನಾಯಕರ ದೌಡು: ಅಮಾಯಕರ ಬಂಧನ ಎಂದು ಆರೋಪಿಸಿ ಉಳ್ಳಾಲ ಠಾಣೆಗೆ ಬಿಜೆಪಿ ಹಾಗೂ ಹಿಂದೂ ಸಂಘಟನೆ ನಾಯಕರು ಭೇಟಿ ನೀಡಿದರು. ಉಳ್ಳಾಲ ಠಾಣೆಗೆ ಆಗಮಿಸಿದ ಬಿಜೆಪಿ ನಾಯಕ ಸತೀಶ್ ಕುಂಪಲ ಹಾಗೂ ವಿಹೆಚ್​ಪಿ ಹಾಗೂ ಭಜರಂಗದಳ ಮುಖಂಡರು ಕಮಿಷನರ್ ಕುಲದೀಪ್ ಜೈನ್ ಅವರನ್ನು ಭೇಟಿ ಮಾಡಿದರು. ಹಲವು ಅಮಾಯಕ ಹಿಂದೂ ಯುವಕರನ್ನು ಬಂಧಿಸಲಾಗಿದೆ. ತಕ್ಷಣ ಅವರನ್ನು ಬಿಡುಗಡೆಗೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರಕರಣದ ಆರೋಪಿಗಳನ್ನಷ್ಟೇ ಬಂಧಿಸುವ ಭರವಸೆ ನೀಡಿದ ಕಮಿಷನರ್ ಕುಲದೀಪ್ ಜೈನ್ ವಶಕ್ಕೆ ಪಡೆದವರು ಕೇಸ್​ನಲ್ಲಿ ಇಲ್ಲದಿದ್ದರೆ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ಕಮಿಷನರ್ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ಮುಖಂಡ ಸತೀಶ್ ಕುಂಪಲ, “ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದಿದೆ. ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಸೋಮೇಶ್ವರ ಬೀಚ್​ಗೆ ಬಂದಿದ್ದಾರೆ. ಪವಿತ್ರ ಕ್ಷೇತ್ರದಲ್ಲಿ ಅಶ್ಲೀಲವಾಗಿ ವರ್ತಿಸಿದಾಗ ಸ್ಥಳೀಯ ಯುವಕರು ಪ್ರಶ್ನೆ ಮಾಡಿದ್ದಾರೆ. ಇದು ತಪ್ಪಾದರೂ ದೇವರ ಕ್ಷೇತ್ರದ ಬಳಿ ಅಶ್ಲೀಲ ವರ್ತನೆ ಕಂಡು ಆಕ್ರೋಶ ಸಹಜ. ಏನೇ ಆದರೂ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಲಿ. ಇಂತಹ ಘಟನೆಗಳಿಗೆ ಆಸ್ಪದ ನೀಡುವುದು ಬೇಡ. ಅಮಾಯಕರ ಬಂಧನ ಸರಿಯಲ್ಲ. ಅಮಾಯಕರನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಯುವಕರು ನಮ್ಮ ಕಾರ್ಯಕರ್ತರಾ? ಅಥವಾ ಅಲ್ಲವ ಅನ್ನೋದು ಪ್ರಶ್ನೆ ಅಲ್ಲ. ಅವರ ಕುಟುಂಬದವರು ಬಂದು ಹೇಳಿದಾಗ ನಾವು ಠಾಣೆಗೆ ಬಂದಿದ್ದೇವೆ. ಎಲ್ಲ ವೈದ್ಯಕೀಯ ಕಾಲೇಜುಗಳ ಪ್ರಮುಖರ ಜತೆಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಬುದ್ಧಿ ಮಾತು ಹೇಳುವ ಪ್ರಯತ್ನ ಮಾಡುತ್ತೇನೆ ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್ ಗಿರಿ: ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

Next Post

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಉದ್ಯೋಗಿ ಸ್ಟೋರ್ ರೂಮ್ ನಲ್ಲೇ ಆತ್ಮಹತ್ಯೆ

Related Posts

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ
ಕ್ರೈಮ್ ನ್ಯೂಸ್

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
80
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ
ಕ್ರೈಮ್ ನ್ಯೂಸ್

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
Next Post
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಉದ್ಯೋಗಿ ಸ್ಟೋರ್ ರೂಮ್ ನಲ್ಲೇ ಆತ್ಮಹತ್ಯೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಉದ್ಯೋಗಿ ಸ್ಟೋರ್ ರೂಮ್ ನಲ್ಲೇ ಆತ್ಮಹತ್ಯೆ

Discussion about this post

Recent News

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
80
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
69
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d