• About us
  • Contact us
  • Disclaimer
Monday, March 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಜನನ ; ನಾಪತ್ತೆಯಾದ ಆರೋಪಿ ಕೃಷ್ಣ, ಸಂತ್ರಸ್ತೆ ತಾಯಿಯಿಂದ ಯುವಕನ ವಿರುದ್ಧ ದೂರು

Coastal Times by Coastal Times
July 2, 2025
in ಕ್ರೈಮ್ ನ್ಯೂಸ್
ಬಿಜೆಪಿ ಮುಖಂಡನ ಪುತ್ರನಿಂದ ಯುವತಿಗೆ ಮಗು ಜನನ ; ನಾಪತ್ತೆಯಾದ ಆರೋಪಿ ಕೃಷ್ಣ, ಸಂತ್ರಸ್ತೆ ತಾಯಿಯಿಂದ ಯುವಕನ ವಿರುದ್ಧ ದೂರು
133
VIEWS
WhatsappTelegramShare on FacebookShare on Twitter

ಪುತ್ತೂರು : ಪುತ್ತೂರು ಬಿಜೆಪಿ ಮುಖಂಡನ ಪುತ್ರನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೃಷ್ಣ ಜೆ ರಾವ್ ಎನ್ನುವಾತ ಮದುವೆಯಾಗುವುದಾಗಿ ಯುವತಿಗೆ ನಂಬಿಸಿ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಬಳಿಕ ಯುವತಿ ಗರ್ಭಿಣಿಯಾಗಿರುವುದು ಗೊತ್ತಾಗುತ್ತಿದ್ದಂತೆಯೇ ಕೈಕೊಟ್ಟಿದ್ದಾನೆ. ಯುವಕ ತಲೆಮರೆಸಿಕೊಂಡಿದ್ದಾನೆ ಎಂದು ಆರೋಪಿಸಿ ಸಂತ್ರಸ್ತ ಯುವತಿಯ ತಾಯಿ ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೇ, ಸೋಮವಾರ ಮಾಧ್ಯಮಗಳ ಮುಂದೆ ಬಂದು ನ್ಯಾಯಕ್ಕಾಗಿ ಅಳಲು ತೋಡಿಕೊಂಡಿದ್ದಾರೆ.

ಯುವಕನಿಗೆ ನನ್ನ ಮಗಳೊಂದಿಗೆ ಲವ್ ಇತ್ತು. ಪರಸ್ಪರ ಪ್ರೀತಿಸುತ್ತಿದ್ದರು. ಬಳಿಕದ ದಿನಗಳಲ್ಲಿಯೂ ಈ ಪ್ರೀತಿ ಮುಂದುವರಿದು ದೈಹಿಕ ಸಂಪರ್ಕದವರೆಗೂ ಸಾಗಿದೆ. ಆದರೆ, ಮಗಳು ಗರ್ಭಿಣಿಯಾದ ಏಳು ತಿಂಗಳ ಬಳಿಕ ನಮಗೆ ವಿಚಾರ ತಿಳಿಯಿತು. ಗರ್ಭಿಣಿಯಾಗಿರುವ ವಿಚಾರ ಆ ಯುವಕನೇ ನಮ್ಮಲ್ಲಿಗೆ ಬಂದು ತಿಳಿಸಿದ್ದ. ಈ ವಿಚಾರವನ್ನು ಅವನ ತಂದೆಗೂ ತಿಳಿಸಿದ್ದೆ. ಆಗ ಅವರೇ ಮದುವೆ ಮಾಡಿಸುವ ಬಗ್ಗೆ ಮಾತು ನೀಡಿದ್ದರು. ಗರ್ಭಿಣಿಯಾಗಿದ್ದರಿಂದ ಒಂದು ದಿನ ಪರೀಕ್ಷೆಗೆಂದು ಆಸ್ಪತ್ರೆಗೆ ಹೋದಾಗ ಮಗುವನ್ನು ತೆಗೆಸುವಂತೆ ಯುವಕನ ಕಡೆಯವರು ಒತ್ತಾಯಿಸಿದ್ದರು. ಆಕೆಗೆ 7 ತಿಂಗಳಾಗಿದ್ದರಿಂದ ಮಗಳಿಗೆ ತೊಂದರೆ ಆಗುವ ಲಕ್ಷಣ ಕಂಡು ನಾವು ಹಿಂಜರಿದೆವು. ಈ ಕುರಿತು ನಾನು ಪೊಲೀಸರಿಗೆ ದೂರು ನೀಡಲು ಮುಂದಾದಾಗ ನನ್ನ ಗಂಡ ದೂರು ಕೊಡುವುದು ಬೇಡ, ಮದುವೆ ಮಾಡಿಕೊಡಬಹುದು ಎಂದಿದ್ದರು.

ಆದರೆ, ಅವರ ನಡವಳಿಕೆ ಸಂಶಯವಿದ್ದರಿಂದ ನಾನು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದೆ. ಆ ಸಂದರ್ಭ ಹುಡುಗನನ್ನು ಪೊಲೀಸರು ಕರೆಸಿದ್ದರು. ಆಗ ಮತ್ತೆ ಶಾಸಕರ ಪ್ರವೇಶವಾಗಿ ಮದುವೆಯ ರಾಜಿ ಪಂಚಾಯತಿ ನಡೆಸಲಾಯಿತು. ಯುವಕನ ತಂದೆ ತನ್ನ ಮಗನಿಗೆ 21 ವರ್ಷ ಆದ ಬಳಿಕ ರಿಜಿಸ್ಟರ್ ಮದುವೆ ಮಾಡಿಸುವುದಾಗಿ ಒಪ್ಪಿಕೊಂಡಿದ್ದರಿಂದ ಹಾಗೂ ಶಾಸಕರು ಹೇಳಿದ್ದರಿಂದ ದೂರು ನೀಡಲಿಲ್ಲ. ಠಾಣೆಯಲ್ಲಿ ಕೇವಲ ಮುಚ್ಚಳಿಕೆ ಬರೆಸಿ ಇತ್ಯರ್ಥ ಆಗಿತ್ತು. ಆದರೆ, ಜೂ.23ಕ್ಕೆ ಯುವಕನಿಗೆ 21 ವರ್ಷ ಆದ ಬಳಿಕ ಮದುವೆ ಆಗುವಂತೆ ಕೇಳಿದೆವು. ಒಪ್ಪದಿದ್ದಾಗ ಶಾಸಕರಿಗೆ ಕರೆ ಮಾಡಿ ತಿಳಿಸಿದೆ. ಅದಕ್ಕೆ ಅವರು ಮದುವೆಗೆ ಒಪ್ಪದಿದ್ದರೆ ನಿಮಗೆ ಹೇಗೆ ಬೇಕೋ ಹಾಗೆ ಕೇಸ್ ಮುಂದುವರಿಸುವಂತೆ ಹೇಳಿದರು.

ಈ ನಡುವೆ ಯುವಕನ ಕಡೆಯವರು ನಮ್ಮೊಂದಿಗೆ ಬಂದು ಮಾತುಕತೆ ನಡೆಸಿ ಹಲವು ರೀತಿಯಲ್ಲಿ ಮಗಳ ಮೇಲೆಯೇ ಸಂಶಯದ ರೀತಿಯಲ್ಲಿ ಪ್ರಶ್ನೆ ಮಾಡಿದರು. ಮಗು ನನ್ನದಲ್ಲ ಎಂದು ಹುಡುಗನೇ ಹೇಳಿ ಆಕೆ ಮೇಲೆ ಹಲ್ಲೆಗೂ ಯತ್ನಿಸಿದ. ಮಾತುಕತೆಗೆ ಬಂದವರು ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಈ ನಡುವೆ ಹಣದ ಬೇಡಿಕೆ ಸಹ ಇಟ್ಟಿದ್ದು, ನಾನು 10 ಲಕ್ಷವಲ್ಲ 1 ಕೋಟಿ ಕೊಟ್ಟರು ನ್ಯಾಯ ಸಿಗದೆ ಬಿಡುವುದಿಲ್ಲ ಎಂದಿರುವೆ. ಹಾಗಾಗಿ ನನ್ನ ಮಗಳನ್ನು ಮದುವೆ ಆಗಲು ಒಪ್ಪದ ಯುವಕನ ವಿರುದ್ಧ ಜೂ.24ರಂದು ಮಹಿಳಾ ಪೊಲೀಸ್‌ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿದ್ದೇನೆ. ಯುವಕ ನಾಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದು, ಆದರೆ, ಆತನನ್ನು ಮನೆಯವರೇ ಮುಚ್ಚಿಟ್ಟಿದ್ದಾರೆ ಎಂದು ಸಂತ್ರಸ್ತೆಯ ತಾಯಿ ದೂರಿದರು.

ಸಂತ್ರಸ್ತ ಯುವತಿಯ ತಾಯಿ ಜೂ. 24ರಂದು ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಆರೋಪಿ ಯುವಕ ವಿರುದ್ಧ ಅ.ಕ್ರ 49/2025, ಕಲಂ:64(1), 69 ಬಿ.ಎನ್.ಎಸ್‌ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಕರಣದ ಫಿರ್ಯಾದಿದಾರರಾದ ಸಂತ್ರಸ್ತ ಯುವತಿ ಹಾಗೂ ಆಕೆಯ ಸಹಪಾಠಿಯಾದ ಆರೋಪಿತನು ಪರಸ್ಪರ ಪ್ರೀತಿಸುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಆರೋಪಿಯು ಪಿರ್ಯಾದಿದಾರರನ್ನು ತನ್ನ ಮನೆಗೆ ಕರೆಸಿ, ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಪರಿಣಾಮ ಫಿರ್ಯಾದಿದಾರರು ಗರ್ಭಿಣಿಯಾಗಿದ್ದು, ಈ ಬಗ್ಗೆ ಫಿರ್ಯಾದಿದಾರರು ಅರೋಪಿಗೆ ತಿಳಿಸಿದಾಗ ಆರೋಪಿಯು ಮದುವೆಯಾಗಲು ನಿರಾಕರಿಸಿರುತ್ತಾನೆ. ಈ ಬಗ್ಗೆ ಫಿರ್ಯಾದಿ 24ರಂದು ನೀಡಿದ ದೂರಿನ ಮೇರೆಗೆ ದ.ಕ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಆರೋಪಿ ಯುವಕನ ವಿರುದ್ಧ ಅ.ಕ್ರ 49/2025, ಕಲಂ:64(1), 69 ಬಿ.ಎನ್.ಎಸ್‌ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲಿಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

Next Post

ಮಂಗಳೂರಿನ ಶಕ್ತಿನಗರ ಪದುವಾ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅಡವಿಟ್ಟ 6.5ಕೆ.ಜಿ ಚಿನ್ನವನ್ನೇ ಎಗರಿಸಿದ ಮ್ಯಾನೇಜರ್‌!

Related Posts

ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ
ಕ್ರೈಮ್ ನ್ಯೂಸ್

ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ; ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ, ಆರು ಖದೀಮರ ಸೆರೆ

March 6, 2026
7
ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ 10 ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಕಳ್ಳರು
ಕ್ರೈಮ್ ನ್ಯೂಸ್

ಉಳ್ಳಾಲ: ಅರಣ್ಯಾಧಿಕಾರಿ ಮನೆಯಿಂದ 10 ಲಕ್ಷ ರೂಪಾಯಿ ನಗದು,181 ಗ್ರಾಂ ಚಿನ್ನ ಮತ್ತು ಬೆಳ್ಳಿಯನ್ನು ದೋಚಿದ ಕಳ್ಳರು

March 5, 2026
41
Next Post
ಮಂಗಳೂರಿನ ಶಕ್ತಿನಗರ ಪದುವಾ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅಡವಿಟ್ಟ 6.5ಕೆ.ಜಿ ಚಿನ್ನವನ್ನೇ ಎಗರಿಸಿದ ಮ್ಯಾನೇಜರ್‌!

ಮಂಗಳೂರಿನ ಶಕ್ತಿನಗರ ಪದುವಾ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅಡವಿಟ್ಟ 6.5ಕೆ.ಜಿ ಚಿನ್ನವನ್ನೇ ಎಗರಿಸಿದ ಮ್ಯಾನೇಜರ್‌!

Discussion about this post

Recent News

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
21
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

ನ್ಯೂಜಿಲೆಂಡ್​ ಮಣಿಸಿ ಮೂರನೇ ಬಾರಿಗೆ ಟಿ20 ವಿಶ್ವ ಚಾಂಪಿಯನ್​ ಆದ ಭಾರತ!

March 9, 2026
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d