ಸುಳ್ಯ- ಸುಬ್ರಹ್ಮಣ್ಯ : ಕಳೆದ ಎರಡು ದಿನಗಳಿಂದ ಪಶ್ಚಿಮ ಘಟ್ಟದಲ್ಲಿ ಜಲಸ್ಪೋಟದ ಜೊತೆಗೆ ಮೇಘಸ್ಫೋಟವೂ ಉಂಟಾಗಿದೆ. ಇತಿಹಾಸ ದಾಖಲೆಯಲ್ಲಿ 75ವರುಷಗಳ ನಂತರ ಸುಳ್ಯ- ಸುಬ್ರಹ್ಮಣ್ಯ ಸಂಪರ್ಕದ ಕಲ್ಲಾಜೆ ಸೇತುವೆ ಮುಳುಗಡೆಗೊಂಡಿದೆ. ಹಾಗೂ ಸುಬ್ರಹ್ಮಣ್ಯ ಭಾಗಶಃ ಜಲಾವೃತ ಗೊಂಡಿದೆ ನಾಗರಪಂಚಮಿ ನಾಳೆಯಾಗಿರುವುದರಿಂದ ಭಕ್ತಾದಿಗಳು ಜಿಲ್ಲಾಧಿಕಾರಿಗಳ ಸೂಚನೆಯಂತೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮನವನ್ನು ನಿಷೇಧಿಸಲಾಗಿದೆ.

ಭಾನುವಾರ ತಡರಾತ್ರಿ ಕಲ್ಮಕಾರು ಪ್ರದೇಶದಲ್ಲಿ ಭಾರೀ ಸದ್ದಿನೊಂದಿಗೆ ಜಲಸ್ಪೋಟಗೊಂಡರೆ ಸೋಮವಾರ ರಾತ್ರಿ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದಲ್ಲಿ ಮೇಘಸ್ಫೋಟ ಉಂಟಾಗಿತ್ತು. ಸುಮಾರು 400 ಮಿಮೀಗಿಂತಲೂ ಅಧಿಕ ಮಳೆಯಾಗಿದೆ. ಹಲವು ಕಡೆ ಅತಂತ್ರ ಸ್ಥಿತಿ ಕಂಡುಬಂದಿದೆ.
Discover more from Coastal Times Kannada
Subscribe to get the latest posts sent to your email.







Discussion about this post