• About us
  • Contact us
  • Disclaimer
Wednesday, February 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ

Coastal Times by Coastal Times
September 2, 2025
in ಕ್ರೈಮ್ ನ್ಯೂಸ್
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬ್ಯಾಗ್‌ನಿಂದ ಚಿನ್ನ ಕಳವು ಪ್ರಕರಣ: 5 ಲಕ್ಷದ ಚಿನ್ನ ಸಹಿತ ನಾಲ್ಕು ಸಿಬ್ಬಂದಿ ಸೇರಿ 5 ಮಂದಿ ಸೆರೆ
92
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.2 : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಲಗೇಜ್ ಬ್ಯಾಗ್ ನಲ್ಲಿದ್ದ 5 ಲಕ್ಷ ಮೌಲ್ಯದ 56 ಗ್ರಾಂ ಚಿನ್ನವನ್ನು ಕಳವುಗೈದ ಘಟನೆ ಬೆನ್ನತ್ತಿದ ಬಜ್ಪೆ ಪೊಲೀಸರು ಏರ್ಪೋರ್ಟ್ ನಲ್ಲಿ ಲೋಡಿಂಗ್ ಕೆಲಸ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ‌

ಬಂಧಿತರನ್ನು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ – ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಆರ್‌ಪಿಎಫ್ ಜವಾನ ಹರಿಕೇಶ್ ಎಂಬವರ ಪತ್ನಿ ರಾಜೇಶ್ವರಿ ಪದ್ಮಶಾಲಿ ಅವರು ಆ.30ರಂದು ಬೆಂಗಳೂರಿನಿಂದ ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ‌ ವೇಳೆ ಅವರ‌ ಲಗೇಜ್ ಟ್ರೋಲಿ ಬ್ಯಾಗನ್ನು ತೆರದು 4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಅವರು ಬಜ್ಪೆ ಪೊಲೀಸರಿಗೆ ದೂರು ನೀಡಿದ್ದರು‌.

ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸ್ ನಿರೀಕ್ಷಕ ಸಂದೀಪ್ ಅವರು ತನಿಖೆ ಆರಂಭಿಸಿ ವಿಮಾನ ನಿಲ್ದಾಣದ ಲೋಡ್ ಮತ್ತು ಅನ್ ಲೋಡ್ ಮಾಡುತ್ತಿದ್ದ ನಾಲ್ಕು ಮಂದಿ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಚಿನ್ನಾಭರಣ ಕದ್ದು ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂಬಾತನಿಗೆ ಮಾರಿರುವುದಾಗಿ ತಪ್ಪೊಪ್ಪಿಕೊಂಡಿದ್ದರು. ಆರೋಪಿಗಳ ಹೇಳಿಗೆ ಅನುಸರಿಸಿ ರವಿರಾಜ್ ನನ್ನು ಬಂಧಿಸಿದ ಬಜ್ಪೆ ಪೊಲೀಸರು ಆತನ ಬಳಿಯಿಂದ ಮಹಿಳೆಯ ಚಿನ್ನಾಭರಣವನ್ನು ಕರಗಿಸಿ ಮಾಡಿದ್ದ ಸುಮಾರು 5 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

9 ವರ್ಷಗಳಿಂದ ಏರ್‌ ಇಂಡಿಯಾ ಸಂಸ್ಥೆಯ ಲೋಡ್ – ಅನ್ ಲೋಡ್ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಆರೋಪಿಗಳು 2025ರ ಜನವರಿಯಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ನಿಂದ ಕಳವುಗೈದಿದ್ದ 2 ಲಕ್ಷ ರೂ. ಪೊಲೀಸರು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ವಿಮಾನದ ಪ್ರಯಾಣಿಕರು ಬೆಲೆಬಾಳುವ ವಸ್ತುಗಳಾದ ಚಿನ್ನ, ನಗದನ್ನು ಬ್ಯಾಗೇಜ್ ನಲ್ಲಿ ಕಳುಹಿಸುವಾಗ ಸದ್ರಿ ಆರೋಪಿಗಳು ಬ್ಯಾಗ್ ತೆರೆದಿದ್ದಲ್ಲಿ ಹುಡುಕುವುದು. ಕೆಲವೊಮ್ಮೆ ಬ್ಯಾಗ್ ಲಾಕ್ ನ್ನು ಸುಲಭ ಪಾಸ್ ವಾರ್ಡ್ ಸಂಖ್ಯೆಗಳಿದ್ದಲ್ಲಿ ಪ್ರಯತ್ನಿಸಿ ಕಳವು ಮಾಡುತ್ತಿರುವುದು ಕಂಡು ಬಂದಿರುತ್ತದೆ. ಪ್ರಯಾಣಿಕರು ಈ ರೀತಿ ನಿರ್ಲಕ್ಷ್ಯತೋರದೇ, ಜಾಗ್ರತೆಯಿಂದ ಇರಬೇಕಾಗಿ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಜ್ಪೆ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಟ್ರೋಲಿ ಬ್ಯಾಗ್ ತೆರೆದು ಬೆಲೆಬಾಳುವ ಚಿನ್ನಾಭರಣ ಕಳವು: ನಾಲ್ಕು ಮಂದಿ ಸಿಬ್ಬಂದಿ ವಶಕ್ಕೆ

Next Post

ಮಂಗಳೂರು: ಯೂನಿಟಿ ಆಸ್ಪತ್ರೆಗೆ ಹೃದಯ ಹಾಗೂ ನ್ಯೂರೋವೆಸ್ಕುಲಾರ್ ಆರೈಕೆಗಾಗಿ ಅತೀ ನವೀನ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ ಪರಿಚಯ

Related Posts

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು
ಕ್ರೈಮ್ ನ್ಯೂಸ್

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
17
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
43
Next Post
ಮಂಗಳೂರು: ಯೂನಿಟಿ ಆಸ್ಪತ್ರೆಗೆ ಹೃದಯ ಹಾಗೂ ನ್ಯೂರೋವೆಸ್ಕುಲಾರ್ ಆರೈಕೆಗಾಗಿ  ಅತೀ ನವೀನ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ ಪರಿಚಯ

ಮಂಗಳೂರು: ಯೂನಿಟಿ ಆಸ್ಪತ್ರೆಗೆ ಹೃದಯ ಹಾಗೂ ನ್ಯೂರೋವೆಸ್ಕುಲಾರ್ ಆರೈಕೆಗಾಗಿ ಅತೀ ನವೀನ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ ಪರಿಚಯ

Discussion about this post

Recent News

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
4
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d