• About us
  • Contact us
  • Disclaimer
Wednesday, April 29, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರ ಪ್ರತಿಷ್ಠಾಪಿಸಿ ಆರಾಧನೆ : ನವದುರ್ಗೆಯರ ವಿಶೇಷ

Coastal Times by Coastal Times
October 2, 2022
in ಕರಾವಳಿ
ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವದುರ್ಗೆಯರ ಪ್ರತಿಷ್ಠಾಪಿಸಿ ಆರಾಧನೆ : ನವದುರ್ಗೆಯರ ವಿಶೇಷ
26
VIEWS
WhatsappTelegramShare on FacebookShare on Twitter

ಮಂಗಳೂರು: ನವರಾತ್ರಿ ಹಬ್ಬವನ್ನು ದೇಶದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ನವರಾತ್ರಿಯಲ್ಲಿ ನವದುರ್ಗೆಯರನ್ನು ಆರಾಧನೆ ಮಾಡಲಾಗುತ್ತದೆ. ಆದರೆ ಮಂಗಳೂರಿನ ಕುದ್ರೋಳಿ ದಸರಾದಲ್ಲಿ ನವದುರ್ಗೆಯರ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಮಾಡಲಾಗುತ್ತದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಆಚರಣೆ ವಿಜೃಂಭಣೆಯಿಂದ ನಡೆಯುತ್ತದೆ. 1930 ರಿಂದ ಕುದ್ರೋಳಿ ದೇವಸ್ಥಾನದಲ್ಲಿ ನವರಾತ್ರಿ ಆಚರಣೆ ನಡೆದುಕೊಂಡು ಬಂದಿದೆ. ಈ ಹಿಂದೆ ನವರಾತ್ರಿ ಸಂದರ್ಭದಲ್ಲಿ ಕೇವಲ ಶಾರದೆ ಪ್ರತಿಷ್ಠಾಪಿಸಿ ಆರಾಧನೆ ನಡೆಸಲಾಗುತ್ತಿತ್ತು. ಆದರೆ, 1990 ರಿಂದೀಚೆಗೆ ಕುದ್ರೋಳಿಯಲ್ಲಿ ನವದುರ್ಗೆಯರನ್ನು ಪ್ರತಿಷ್ಠಾಪಿಸಿ ಆರಾಧಿಸಿಕೊಂಡು ಬರಲಾಗುತ್ತಿದೆ. 1990 ರಿಂದ ಕುದ್ರೋಳಿ ದೇವಸ್ಥಾನದಲ್ಲಿ ಶಾರದೆ ಜೊತೆಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟೆ, ಕೂಷ್ಮಾಂಡಿನಿ, ಸ್ಕಂದ ಮಾತ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ದಿಧಾತ್ರಿಯರ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಆರಾಧಿಸಿಕೊಂಡು ಬರಲಾಗುತ್ತಿದೆ. ಇದರ ಜೊತೆಗೆ ಆದಿಶಕ್ತಿ, ಶಾರದಾ ಮಾತೆ ಮತ್ತು ಗಣಪತಿ ದೇವರ ಆರಾಧನೆಯು ನಡೆಯುತ್ತದೆ. ಇಲ್ಲಿನ ನವರಾತ್ರಿ ಆಚರಣೆ ಮಂಗಳೂರು ದಸರಾ ಎಂದು ಪ್ರಸಿದ್ಧಿಯನ್ನು ಪಡೆದಿದೆ.

ನವದುರ್ಗೆಯರ ವಿಶೇಷ : 

ಶೈಲಪುತ್ರಿ: ಹಿಮವಂತನ ಪುತ್ರಿಯಾಗಿ ಜನಿಸಿದ ಈಕೆಗೆ ಹೈಮವತೀ, ಶೈಲಪುತ್ರಿ, ಗಿರಿಜೆ ಎಂಬ ಹೆಸರುಗಳಿದೆ. ನವರಾತ್ರಿ ಮೊದಲ ದಿನ ಶೈಲಪುತ್ರಿಗೆ ಪೂಜೆ ಸಲ್ಲಿಸಲಾಗುತ್ತದೆ.

ಬ್ರಹ್ಮಚಾರಿಣಿ : ದುರ್ಗೆಯ ನವಶಕ್ತಿಗಳಲ್ಲಿ ಎರಡನೇ ಸ್ವರೂಪ ಬ್ರಹ್ಮಚಾರಿಣಿ. ಬ್ರಹ್ಮಚಾರಿಣಿ ಎಂದರೆ ತಪಸ್ಸು ಆಚರಿಸುವವಳು. ಈಕೆ ಶಿವನನ್ನು ಪತಿಯಾಗಿ ಪಡೆಯಲು ಕಠೋರ ತಪಸ್ಸು ಮಾಡುತ್ತಾಳೆ.

ಚಂದ್ರಘಂಟಾ: ಜಗಜ್ಜನನಿಯ ಮೂರನೇ ಶಕ್ತಿ ಚಂದ್ರಘಂಟಾ. ಇವಳ ಮಸ್ತಕದಲ್ಲಿ ಗಂಟೆಯ ಆಕಾರದ ಅರ್ಧಚಂದ್ರನಿದ್ದು ಹೀಗಾಗಿ ಇವಳಿಗೆ ಚಂದ್ರಘಂಟಾ ಎಂಬ ಹೆಸರಿದೆ. ಇವಳ ಕೈಯಲ್ಲಿ ಇರುವ ಭಯಾನಕ ಚಂಡಧ್ವನಿಯಿಂದ ರಾಕ್ಷಸರು ಭಯದಿಂದ ನಡುಗುತ್ತಾರೆ.   ಕೂಷ್ಮಾಂಡಾ: ದುರ್ಗೆಯ ನಾಲ್ಕನೆಯ ರೂಪ ಕೂಷ್ಮಾಂಡಾ. ಈಕೆ ತನ್ನ ಮಂದ, ಮಧುರ ಧ್ವನಿಯಿಂದಲೇ ಈಕೆ ಬ್ರಹ್ಮಾಂಡವನ್ನೆ ಸೃಷ್ಟಿ ಮಾಡುವ ಕಾರಣ ಕೂಷ್ಮಾಂಡ ದೇವಿ ಎಂದು ಕರೆಯುತ್ತಾರೆ.

ಸ್ಕಂದ ಮಾತ : ದುರ್ಗೆಯ ಐದನೇ ಸ್ವರೂಪ ಸ್ಕಂದಮಾತಾ. ಭಗವಾನ್ ಕಾರ್ತಿಕೇಯನ ತಾಯಿಯಾದ್ದರಿಂದ ಆಕೆಗೆ ಸ್ಕಂದಮಾತಾ ಎಂಬ ಹೆಸರೂ ಇದೆ.  ಕಾತ್ಯಾಯಿನಿ : ಕಾತ್ಯಾಯನ ಮಹರ್ಷಿಯು ಭಗವತಿಯನ್ನು ಉಪಾಸನೆ ಮಾಡುತ್ತಾ ಭಗವತಿಯೆ ತನಗೆ ಪುತ್ರಿಯಾಗಿ ಜನಿಸಬೇಕು ಎಂದು ತಪಸ್ಸು ಮಾಡಿದ್ದರು.ಮಹರ್ಷಿಗೆ ದುರ್ಗೆಯೆ ಮಗಳಾಗಿ ಜನಿಸಿದ್ದರಿಂದ ಆಕೆಗೆ ಕಾತ್ಯಾಯಿನಿ ಎಂಬ ಹೆಸರು  ಜನಜನಿತವಾಗಿದೆ. ಕಾಲರಾತ್ರಿ: ದಟ್ಟವಾದ ಕಪ್ಪು ಬಣ್ಣದ ಶರೀರವುಳ್ಳ ಏಳನೇ ಶಕ್ತಿಯನ್ನು ಕಾಲರಾತ್ರಿ ಎಂದು ಕರೆಯಲಾಗುತ್ತದೆ. ಈಕೆಯ ಸ್ವರೂಪ ಭಯಾನಕವಾಗಿದ್ದು, ಯಾವಾಗಲೂ ಶುಭಫಲ ಅನುಗ್ರಹಿಸುತ್ತಾಳೆ ಎಂಬ ನಂಬಿಕೆಯಿದೆ.

ಮಹಾಗೌರಿ : ದುರ್ಗೆಯ ಎಂಟನೇ ಶಕ್ತಿ ಮಹಾಗೌರಿ. ಸಂಪೂರ್ಣ ಬೆಳ್ಳಗಿರುವ ಕಾರಣ ಗೌರವರ್ಣದ ಈಕೆಗೆ ಗೌರಿ ಎಂಬ ಹೆಸರಾಗಿದೆ. ಸಿದ್ದಿದಾತ್ರಿ: ದುರ್ಗೆಯ ಒಂಬತ್ತನೆಯ ಅವತಾರ ಸಿದ್ದಿದಾತ್ರಿ. ಈಕೆ ಅಷ್ಟಸಿದ್ದಿಗಳನ್ನು ಅನುಗ್ರಹಿಸುವವಳು.

ಶಾರದಾ ಮಾತೆ

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಫುಟ್ಬಾಲ್ ಪಂಧ್ಯಾಟದ ಸಂದರ್ಭದಲ್ಲಿ ಪ್ರೇಕ್ಷಕರ ಹಿಂಸಾಚಾರ ; ಪೊಲೀಸರಿಗೆ ಹಲ್ಲೆ , ಕಾಲ್ತುಳಿತಕ್ಕೆ ಸಿಲುಕಿ 174 ಜನ ಸಾವನ್ನಪ್ಪಿದ್ದಾರೆ

Next Post

ಉಳ್ಳಾಲ: ಹಿಟ್ ಆ್ಯಂಡ್ ರನ್, ಗಸ್ತಿನಲ್ಲಿದ್ದ ಸಂಚಾರಿ ಠಾಣೆ ಹೆಡ್ ಕಾನ್ಸ್‌ಟೇಬಲ್ ಗಂಭೀರ

Related Posts

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ
ಕರಾವಳಿ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
0
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್
ಕರಾವಳಿ

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
18
Next Post
ಉಳ್ಳಾಲ: ಹಿಟ್ ಆ್ಯಂಡ್ ರನ್, ಗಸ್ತಿನಲ್ಲಿದ್ದ ಸಂಚಾರಿ ಠಾಣೆ ಹೆಡ್ ಕಾನ್ಸ್‌ಟೇಬಲ್ ಗಂಭೀರ

ಉಳ್ಳಾಲ: ಹಿಟ್ ಆ್ಯಂಡ್ ರನ್, ಗಸ್ತಿನಲ್ಲಿದ್ದ ಸಂಚಾರಿ ಠಾಣೆ ಹೆಡ್ ಕಾನ್ಸ್‌ಟೇಬಲ್ ಗಂಭೀರ

Discussion about this post

Recent News

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
0
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

April 28, 2026
ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

ಹೊಸ ನಿರೀಕ್ಷೆ ಹುಟ್ಟುಹಾಕಿದ – ವಾದಿರಾಜ ವಾಲಗ ಮಂಡಳಿ ಹಾಸ್ಯಮಯ ಸಿನಿಮಾದ ಚಿತ್ರೀಕರಣ ಮುಕ್ತಾಯ- ನಿರ್ಮಾಪಕ ಡಾ. ಎಂ.ಎನ್ ರಾಜೇಂದ್ರ ಕುಮಾರ್

April 28, 2026
ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

ಕಣ್ಣೂರು : ಮಾದಕ ವ್ಯಸನಿ ಮಗನಿಂದ ತಾಯಿಯನ್ನು ಚಾಕುವಿನಿಂದ ಕೊಚ್ಚಿ ಬರ್ಬರ ಹತ್ಯೆ..!

April 27, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d