ಉಳ್ಳಾಲ: ಗಸ್ತಲ್ಲಿದ್ದ ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಹೆಡ್ ಕಾನ್ಸ್ಟೇಬಲ್ ಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಪೊಲೀಸ್ ಸಿಬ್ಬಂದಿಯನ್ನು ಆಸ್ಪತ್ರೆಗೆ ಸೇರಿದ ಘಟನೆ ಉಳ್ಳಾಲ ಬೈಲಿನಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕೇಶ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲೋಕೇಶ್ ನಾಯ್ಕ್ ಮತ್ತು ಎಎಸ್ಐ ಮಂಜುಳ ಅವರು ಹೈ-ವೆ ಪೆಟ್ರೋಲ್ ವಾಹನದಲ್ಲಿ ರವಿವಾರ ಸಂಜೆ ಉಳ್ಳಾಲ ಬೈಲಲ್ಲಿ ಗಸ್ತಲ್ಲಿದ್ದ ವೇಳೆ ಘಟನೆ ನಡೆದಿದೆ.



ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಧಾವಿಸುತ್ತಿದ್ದ ಸ್ವಿಫ್ಟ್ ಕಾರನ್ನ ಲೋಕೇಶ್ ಅವರು ತಪಾಸಣೆಗಾಗಿ ತಡೆದು ಬದಿಗೆ ನಿಲ್ಲುವಂತೆ ಸೂಚಿಸಿದ್ದರು. ಬದಿಗೆ ಬಂದಿದ್ದ ಕಾರು ಏಕಾಏಕಿ ಎದುರಲ್ಲಿದ್ದ ಲೋಕೇಶ್ ಗೆ ಬಲವಾಗಿ ಡಿಕ್ಕಿ ಹೊಡೆದು ಉಳ್ಳಾಲದ ಕಡೆಗೆ ಪರಾರಿಯಾಗಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲೋಕೇಶ್ ಅವರು ರಸ್ತೆಯ ವಿಭಜಕಕ್ಕೆ ಎಸೆಯಲ್ಪಟ್ಟಿದ್ದಾರೆ. ತಲೆಯ ಭಾಗಕ್ಕೆ ಡಿವೈಡರ್ ಬಡಿದು ಲೋಕೇಶ್ ಗಂಭೀರ ಗಾಯಗೊಂಡಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.ಡಿಕ್ಕಿ ಹೊಡೆದು ಪರಾರಿಯಾದ ಸ್ವಿಫ್ಟ್ ಕಾರಿನ ಸುಳಿವು ಪೊಲೀಸರಿಗೆ ಲಭ್ಯವಾಗಿದ್ದು, ಘಟನಾ ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಸಮೀಪದ ಸಿಸಿಟಿವಿಗಳನ್ನ ತಪಾಸಣೆ ನಡೆಸುತ್ತಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Discover more from Coastal Times Kannada
Subscribe to get the latest posts sent to your email.








Discussion about this post