• About us
  • Contact us
  • Disclaimer
Saturday, March 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು : ಅಖಿಲ ಭಾರತ ಕೊಂಕಣಿ ಸಮ್ಮೇಳನಕ್ಕೆ ಹೇಮಾ ನಾಯ್ಕ ಅಧ್ಯಕ್ಷೆ

Coastal Times by Coastal Times
November 2, 2023
in ಕರಾವಳಿ
ಮಂಗಳೂರು : ಅಖಿಲ ಭಾರತ ಕೊಂಕಣಿ ಸಮ್ಮೇಳನಕ್ಕೆ ಹೇಮಾ ನಾಯ್ಕ ಅಧ್ಯಕ್ಷೆ
16
VIEWS
WhatsappTelegramShare on FacebookShare on Twitter

ಮಂಗಳೂರು, ನ.2: ನವೆಂಬರ್ 4 ಶನಿವಾರ ಮತ್ತು 5 ಆದಿತ್ಯವಾರ, ವಿಶ್ವ ಕೊಂಕಣಿ ಕೇಂದ್ರ, ಶಕ್ತಿನಗರ ಇಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದಲ್ಲಿ, ಎರಡೂ ಪರಿಸರಿವಾದ ಸಾಹಿತ್ಯ ಸಾದರೀಕರಣ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ. ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ ಅವರು ಶನಿವಾರ ದಿನಾಂಕ 4 ರಂದು ಪೂರ್ವಾಹ್ನ 10 ಕ್ಕೆ ಸಮ್ಮೇಳನ ಉದ್ಘಾಟಿಸಿ ‘ಸಾಹಿತ್ಯ ಮತ್ತು ಬದುಕು” ಈ ಕುರಿತು ಶಿಖರೋಪನ್ಯಾಸ ನೀಡಲಿದ್ದಾರೆ.

ಸಮ್ಮೇಳನದ ಸರ್ವಾಧ್ಯಕ್ಷೆ ಖ್ಯಾತ ಕಾದಂಬರಿಕಾರ್ತಿ ಮತ್ತು ಕೊಂಕಣಿ ಚಳುವಳಿಯು ಮುಂದಾಳು ಶ್ರೀಮತಿ ಹೇಮಾ ನಾಂ ಸಮ್ಮೇಳನದ ಅಧ್ಯಕ್ಷೀಯ ಭಾಷೆ ಮಾಡಲಿದ್ದಾರೆ. ಭಾನುವಾರ ದಿನಾಂಕ 5 ರ ಸಂಜೆ 3.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಖ್ಯಾತ ಕನ್ನಡ ಸಾಹಿತಿ, ಪ್ರಾಧ್ಯಾಪಕಿ ಮಮತಾ ಜಿ. ಸಾಗರ ‘ಸಾಹಿತ್ಯ ಮತ್ತು ಸಾಮಾಜಿಕ ಜವಾಬ್ದಾರಿ’ ಈ ಕುರಿತು ಉಪನ್ಯಾಸ ನೀಡಲಿದ್ದಾರೆ.

ಪ್ರಮುಖ ಉಪನ್ಯಾಸಗಳು ಹಿಂದಿ ಇಂಗ್ಲಿಷ್ ಭಾಷೆಯಲ್ಲಿ ಇದ್ದು, ಕೊಂಕಣಿಯೇತರ ಸಾಹಿತ್ಯಾಸಕ್ತರೂ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಶನಿವಾರ ದಿನಾಂಕ 4 ರಂದು ಸಂಜೆ 5.30 ಕ್ಕೆ ಖ್ಯಾತ ವಿದ್ವಾಂಸ ಡಾ| ಪುರುಷೋತ್ತಮ ಬಿಳಿಮಳೆಯವರ ಅಧ್ಯಕ್ಷತೆಯಲ್ಲಿ ಸಮಕಾಲೀನ ಬರಹಗಾರಿಗೆ ಸವಾಲುಗಳು ಈ ವಿಷಯದ ಮೇಲೆ ಇಂಗ್ಲಿಷ್ ಭಾಷೆಯಲ್ಲಿ ಪರಿಸರವಾದ ನಡೆಯಲಿದ್ದು, ಉದಯನ್ ವಾಜಪೇಯಿ ಮತ್ತು ಮಮತಾ ಜಿ. ಸಾಗರ ವಿಚಾರ ಮಂಡನೆ ಮಾಡಲಿದ್ದಾರೆ. ಕರ್ನಾಟಕದ ಬೇರೆ ಬೇರೆ ಪ್ರದೇಶಗಳಿಂದ ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ, ದೆಹಲಿಯಿಂದಲೂ ಸುಮಾರು 600 ಮಂದಿ ಈ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಕೊಂಕಣಿ ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆ ಮತ್ತು ಸೊಗಡನ್ನು ಸವಿಯಲು 25 ನೇ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನ ಕರಾವಳಿಯ ಸಾಹಿತ್ಯಾಸಕ್ತರಿಗೆ ಅವಕಾಶ ಕಲ್ಲಿಸಿದೆ. ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದ್ದು, ಪ್ರತಿನಿಧಿಗಳಾಗಿ ನೋಂದಣಿ ಮಾಡಿಕೊಳ್ಳುವವರಿಗೆ ವಸತಿ ವ್ಯವಸ್ಥೆಯನ್ನೂ ಮಾಡಲಾಗಿದೆ.

ಹೇಮಾ ನಾಯ್ಕ : ವಿದ್ಯಾರ್ಥಿ ಜೀವನದಲ್ಲೇ ಬರವಣಿಗೆ ಮತ್ತು ಕೊಂಕಣಿ ಚಳುವಳಿಗೆ ಧುಮುಕಿದ ಶ್ರೀಮತಿ ಹೇಮಾ ನಾಯ್ಕ ಕೊಂಕಣಿ ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಾಹಿತ್ಯ ರಚಿಸಿದ್ದಾರೆ. ಮುಂಬಯಿ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ. ಕತೆ, ಕಾದಂಬರಿ, ರೇಡಿಯೊ ನಾಟಕಗಳನ್ನು ರಚಿಸಿರುವ ಅವರು ಸಂಪಾದಕಿ ಮತ್ತು ಪ್ರಕಾಶಕಿಯಾಗಿ ಸೇವೆ ನೀಡಿದ್ದಾರೆ. ಈ ವರೆಗೆ 8 ಸ್ವತಂತ್ರ ಪುಸ್ತಕಗಳನ್ನು ಪ್ರಕಟಿಸಿರುವ ಜೀವಾ ನಾಂಯ್ಕ, 10 ಕ್ಕೂ ಜಾಸ್ತಿ ಕೃತಿಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ. ಮಹಿಳಾ ಪರ ಸಂಘಟನೆ ಮತ್ತು ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಹೇಮಾ ನಾಯ್ಕ, ದೂರದರ್ಶನ ವಾಹಿನಿಗಾಗಿ

ಮಾಡಿದ್ದಾರೆ. ಅವರ ಸಾಹಿತ್ಯ ಸೇವೆಗಾಗಿ ಹೊಸ ದೆಹಲಿಯ ಸಾಹಿತ್ಯ ಅಕಾಡೆಮಿ, ಗೋವಾ ಸರಕಾರದ ಕಲಾ ಅಕಾಡೆಮಿ, ಭಾಷಾ ಮಂಡಲ್ ಗೋವಾ, ಕಥಾ, ಮಣಿಪಾಲದ ಡ| ಟಿ. ಎಂ. ಸೈ, ಸೌಂಡೇಶನ್ ಹೀಗೆ ಹತ್ತಾರು ಪ್ರಶಸ್ತಿ – ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಹೇಮಾ ನಾಯ್ಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ : ಶ್ರೀ ಮೈಕಲ್ ಡಿ ಸೋಜಾ, ಅಧ್ಯಕ್ಷರು, ಸಮ್ಮೇಳನ ಸ್ವಾಗತ ಸಮಿತಿ, ಶ್ರೀ ನಂದಗೋಪಾಲ ಶೆಣೈ, ಉಪಾಧ್ಯಕ್ಷರು, ಸಮ್ಮೇಳನ ಸ್ವಾಗತ ಸಮಿತಿ, ಶ್ರೀ ಮೆಲ್ವಿನ್ ರೊಡ್ರಿಗಸ್, ಉಪಾಧ್ಯಕ್ಷರು, ಅಖಿಲ ಭಾರತೀಯ ಕೊಂಕಣಿ ಪರಿಷದ್, ಶ್ರೀ ಚೇತನ್ ಆಚಾರ್ಯ, ಕಾರ್ಯಾಧ್ಯಕ್ಷರು, ಅಖಿಲ ಭಾರತೀಯ ಕೊಂಕಣಿ ಪರಿಷದ್‌, ಶ್ರೀ ಟೈಟಸ್ ನೊರೊನ್ಹಾ, ಕಾರ್ಯದರ್ಶಿ, ಸಮ್ಮೇಳನ ಸ್ವಾಗತ ಸಮಿತಿ, ಶ್ರೀ ಎಚ್. ಎಮ್. ಪೆರ್ನಾಲ್, ಸಮ್ಮೇಳನ ಸ್ವಾಗತ ಸಮಿತಿ, ಕಾರ್ಯಾಧ್ಯಕ್ಷರು

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಲುಲು ಮಾಲ್‌ನಲ್ಲಿ ಯುವತಿ ಜತೆ ಅಶ್ಲೀಲ ವರ್ತನೆ: ವ್ಯಕ್ತಿ ವಿರುದ್ಧ ದೂರು ದಾಖಲು

Next Post

ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ

Related Posts

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ
ಕರಾವಳಿ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
71
ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
10
Next Post
ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ

ರೋಹನ್ ಸಿಟಿ ಬಿಜೈ ‘ಹೂಡಿಕೆಯ ಮೇಲೆ 7.50% ಖಚಿತ ಪ್ರತಿಫಲ’ ಸ್ಕೀಮಿನ ಅನಾವರಣ

Discussion about this post

Recent News

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
134
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳ್ಳತನ ಪ್ರಕರಣ; ಓರ್ವ ಆರೋಪಿ ಸೆರೆ

March 13, 2026
ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d