ಮಂಗಳೂರು, ನ.2: ನವೆಂಬರ್ 4 ಶನಿವಾರ ಮತ್ತು 5 ಆದಿತ್ಯವಾರ, ವಿಶ್ವ ಕೊಂಕಣಿ ಕೇಂದ್ರ, ಶಕ್ತಿನಗರ ಇಲ್ಲಿ 25 ನೇ ಅಖಿಲ ಭಾರತೀಯ ಕೊಂಕಣಿ ಸಾಹಿತ್ಯ ಸಮ್ಮೇಳನದಲ್ಲಿ, ಎರಡೂ ಪರಿಸರಿವಾದ ಸಾಹಿತ್ಯ ಸಾದರೀಕರಣ, ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಹಬ್ಬ ನಡೆಯಲಿದೆ. ಖ್ಯಾತ ಹಿಂದಿ ಕವಿ, ವಿಮರ್ಷಕ ವಿದ್ವಾಂಸ ಉದಯನ್ ವಾಜಪೇಯಿ ಅವರು ಶನಿವಾರ ದಿನಾಂಕ 4 ರಂದು ಪೂರ್ವಾಹ್ನ 10 ಕ್ಕೆ ಸಮ್ಮೇಳನ ಉದ್ಘಾಟಿಸಿ ‘ಸಾಹಿತ್ಯ ಮತ್ತು ಬದುಕು” ಈ ಕುರಿತು ಶಿಖರೋಪನ್ಯಾಸ ನೀಡಲಿದ್ದಾರೆ.
ಸಮ್ಮೇಳನದ ಸರ್ವಾಧ್ಯಕ್ಷೆ ಖ್ಯಾತ ಕಾದಂಬರಿಕಾರ್ತಿ ಮತ್ತು ಕೊಂಕಣಿ ಚಳುವಳಿಯು ಮುಂದಾಳು ಶ್ರೀಮತಿ ಹೇಮಾ ನಾಂ ಸಮ್ಮೇಳನದ ಅಧ್ಯಕ್ಷೀಯ ಭಾಷೆ ಮಾಡಲಿದ್ದಾರೆ. ಭಾನುವಾರ ದಿನಾಂಕ 5 ರ ಸಂಜೆ 3.30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಖ್ಯಾತ ಕನ್ನಡ ಸಾಹಿತಿ, ಪ್ರಾಧ್ಯಾಪಕಿ ಮಮತಾ ಜಿ. ಸಾಗರ ‘ಸಾಹಿತ್ಯ ಮತ್ತು ಸಾಮಾಜಿಕ ಜವಾಬ್ದಾರಿ’ ಈ ಕುರಿತು ಉಪನ್ಯಾಸ ನೀಡಲಿದ್ದಾರೆ.
ಪ್ರಮುಖ ಉಪನ್ಯಾಸಗಳು ಹಿಂದಿ ಇಂಗ್ಲಿಷ್ ಭಾಷೆಯಲ್ಲಿ ಇದ್ದು, ಕೊಂಕಣಿಯೇತರ ಸಾಹಿತ್ಯಾಸಕ್ತರೂ ಸಮ್ಮೇಳನದಲ್ಲಿ ಭಾಗವಹಿಸಬಹುದಾಗಿದೆ. ಶನಿವಾರ ದಿನಾಂಕ 4 ರಂದು ಸಂಜೆ 5.30 ಕ್ಕೆ ಖ್ಯಾತ ವಿದ್ವಾಂಸ ಡಾ| ಪುರುಷೋತ್ತಮ ಬಿಳಿಮಳೆಯವರ ಅಧ್ಯಕ್ಷತೆಯಲ್ಲಿ ಸಮಕಾಲೀನ ಬರಹಗಾರಿಗೆ ಸವಾಲುಗಳು ಈ ವಿಷಯದ ಮೇಲೆ ಇಂಗ್ಲಿಷ್ ಭಾಷೆಯಲ್ಲಿ ಪರಿಸರವಾದ ನಡೆಯಲಿದ್ದು, ಉದಯನ್ ವಾಜಪೇಯಿ ಮತ್ತು ಮಮತಾ ಜಿ. ಸಾಗರ ವಿಚಾರ ಮಂಡನೆ ಮಾಡಲಿದ್ದಾರೆ. ಕರ್ನಾಟಕದ ಬೇರೆ ಬೇರೆ ಪ್ರದೇಶಗಳಿಂದ ಹಾಗೂ ಗೋವಾ, ಕೇರಳ, ಮಹಾರಾಷ್ಟ್ರ, ದೆಹಲಿಯಿಂದಲೂ ಸುಮಾರು 600 ಮಂದಿ ಈ ಸಮ್ಮೇಳನದಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಕೊಂಕಣಿ ಭಾಷೆ ಮತ್ತು ಸಾಹಿತ್ಯದ ವೈವಿಧ್ಯತೆ ಮತ್ತು ಸೊಗಡನ್ನು ಸವಿಯಲು 25 ನೇ ಅಖಿಲ ಭಾರತೀಯ ಸಾಹಿತ್ಯ ಸಮ್ಮೇಳನ ಕರಾವಳಿಯ ಸಾಹಿತ್ಯಾಸಕ್ತರಿಗೆ ಅವಕಾಶ ಕಲ್ಲಿಸಿದೆ. ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಲಾಗಿದ್ದು, ಪ್ರತಿನಿಧಿಗಳಾಗಿ ನೋಂದಣಿ ಮಾಡಿಕೊಳ್ಳುವವರಿಗೆ ವಸತಿ ವ್ಯವಸ್ಥೆಯನ್ನೂ ಮಾಡಲಾಗಿದೆ.
ಹೇಮಾ ನಾಯ್ಕ : ವಿದ್ಯಾರ್ಥಿ ಜೀವನದಲ್ಲೇ ಬರವಣಿಗೆ ಮತ್ತು ಕೊಂಕಣಿ ಚಳುವಳಿಗೆ ಧುಮುಕಿದ ಶ್ರೀಮತಿ ಹೇಮಾ ನಾಯ್ಕ ಕೊಂಕಣಿ ಮರಾಠಿ, ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಾಹಿತ್ಯ ರಚಿಸಿದ್ದಾರೆ. ಮುಂಬಯಿ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿ ಪಡೆದಿದ್ದಾರೆ. ಕತೆ, ಕಾದಂಬರಿ, ರೇಡಿಯೊ ನಾಟಕಗಳನ್ನು ರಚಿಸಿರುವ ಅವರು ಸಂಪಾದಕಿ ಮತ್ತು ಪ್ರಕಾಶಕಿಯಾಗಿ ಸೇವೆ ನೀಡಿದ್ದಾರೆ. ಈ ವರೆಗೆ 8 ಸ್ವತಂತ್ರ ಪುಸ್ತಕಗಳನ್ನು ಪ್ರಕಟಿಸಿರುವ ಜೀವಾ ನಾಂಯ್ಕ, 10 ಕ್ಕೂ ಜಾಸ್ತಿ ಕೃತಿಗಳನ್ನು ಅನುವಾದಿಸಿ ಪ್ರಕಟಿಸಿದ್ದಾರೆ. ಮಹಿಳಾ ಪರ ಸಂಘಟನೆ ಮತ್ತು ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಹೇಮಾ ನಾಯ್ಕ, ದೂರದರ್ಶನ ವಾಹಿನಿಗಾಗಿ
ಮಾಡಿದ್ದಾರೆ. ಅವರ ಸಾಹಿತ್ಯ ಸೇವೆಗಾಗಿ ಹೊಸ ದೆಹಲಿಯ ಸಾಹಿತ್ಯ ಅಕಾಡೆಮಿ, ಗೋವಾ ಸರಕಾರದ ಕಲಾ ಅಕಾಡೆಮಿ, ಭಾಷಾ ಮಂಡಲ್ ಗೋವಾ, ಕಥಾ, ಮಣಿಪಾಲದ ಡ| ಟಿ. ಎಂ. ಸೈ, ಸೌಂಡೇಶನ್ ಹೀಗೆ ಹತ್ತಾರು ಪ್ರಶಸ್ತಿ – ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ. ಮುಂದಿನ ಎರಡು ವರ್ಷಗಳ ಅವಧಿಗೆ ಹೇಮಾ ನಾಯ್ಕ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ : ಶ್ರೀ ಮೈಕಲ್ ಡಿ ಸೋಜಾ, ಅಧ್ಯಕ್ಷರು, ಸಮ್ಮೇಳನ ಸ್ವಾಗತ ಸಮಿತಿ, ಶ್ರೀ ನಂದಗೋಪಾಲ ಶೆಣೈ, ಉಪಾಧ್ಯಕ್ಷರು, ಸಮ್ಮೇಳನ ಸ್ವಾಗತ ಸಮಿತಿ, ಶ್ರೀ ಮೆಲ್ವಿನ್ ರೊಡ್ರಿಗಸ್, ಉಪಾಧ್ಯಕ್ಷರು, ಅಖಿಲ ಭಾರತೀಯ ಕೊಂಕಣಿ ಪರಿಷದ್, ಶ್ರೀ ಚೇತನ್ ಆಚಾರ್ಯ, ಕಾರ್ಯಾಧ್ಯಕ್ಷರು, ಅಖಿಲ ಭಾರತೀಯ ಕೊಂಕಣಿ ಪರಿಷದ್, ಶ್ರೀ ಟೈಟಸ್ ನೊರೊನ್ಹಾ, ಕಾರ್ಯದರ್ಶಿ, ಸಮ್ಮೇಳನ ಸ್ವಾಗತ ಸಮಿತಿ, ಶ್ರೀ ಎಚ್. ಎಮ್. ಪೆರ್ನಾಲ್, ಸಮ್ಮೇಳನ ಸ್ವಾಗತ ಸಮಿತಿ, ಕಾರ್ಯಾಧ್ಯಕ್ಷರು
Discover more from Coastal Times Kannada
Subscribe to get the latest posts sent to your email.
Discussion about this post