• About us
  • Contact us
  • Disclaimer
Monday, January 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ದುರ್ಮರಣ

Coastal Times by Coastal Times
December 2, 2024
in ರಾಜ್ಯ
ಹಾಸನದಲ್ಲಿ ಭೀಕರ ರಸ್ತೆ ಅಪಘಾತ: ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ದುರ್ಮರಣ
83
VIEWS
WhatsappTelegramShare on FacebookShare on Twitter

ಹಾಸನ, ಡಿ.1: ಪೊಲೀಸ್ ಜೀಪು ಭೀಕರ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಹಾರ ಮೂಲದ ಹರ್ಷಬರ್ಧನ್(26) ದುರಂತ ಸಾವಿಗೀಡಾಗಿದ್ದಾರೆ. ಚಿಕಿತ್ಸೆ ಫಲಿಸದೆ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ದುರ್ಮರಣಕ್ಕೆ ಒಳಗಾಗಿದ್ದಾರೆ.

ಹಾಸನ ವಿಭಾಗಕ್ಕೆ ಪ್ರೊಬೇಶನರಿ ಡಿವೈಎಸ್ಪಿ ಆಗಿ ನಿಯೋಜನೆಗೊಂಡಿದ್ದ ಹರ್ಷಬರ್ಧನ್ ಅವರು ಮೈಸೂರಿನ ಐಜಿಪಿ ಕಚೇರಿಯಲ್ಲಿ ರಿಪೋರ್ಟ್ ಮಾಡಿ ಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರಕ್ಕೆ ಆಗಮಿಸುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.‌ ಹಾಸನ ತಾಲೂಕಿನ ಕಿತ್ತಾನೆ ಗ್ರಾಮದಲ್ಲಿ ಜೀಪಿನ ಟೈರ್ ಸಿಡಿದು ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದ್ದಿದೆ. ಸಂಜೆ ವೇಳೆಗೆ ಘಟನೆ ನಡೆದಿದ್ದು ಇಬ್ಬರಿಗೂ ತೀವ್ರ ಗಾಯವಾಗಿತ್ತು. ಹರ್ಷಬರ್ಧನ್ ಅವರು ತರಬೇತಿ ಮುಗಿಸಿ ಇಲಾಖಾ‌ ತರಬೇತಿಗೆ ವರದಿ ಮಾಡಿಕೊಳ್ಳಲೆಂದು ಹಾಸನಕ್ಕೆ ಬರ್ತಿದ್ದರು. ಐಪಿಎಸ್ ವೃತ್ತಿ ಪ್ರಾರಂಭದ ದಿನವೇ ಸಾವನ್ನಪ್ಪಿದ್ದು ವಿಪರ್ಯಾಸ.

ಯಾರು ಈ ಐಪಿಎಸ್ ಅಧಿಕಾರಿ ಹರ್ಷಬರ್ಧನ್?: ಮಹಾರಾಷ್ಟ್ರ ಮೂಲದ ಹರ್ಷಬರ್ಧನ್​ ಕರ್ನಾಟಕ ಕೇಡರ್​ಗೆ ಆಯ್ಕೆಯಾಗಿರುವ ಪ್ರೊಬೇಷನರಿ ಐಪಿಎಸ್ ಅಧಿಕಾರಿ. 2023ನೇ ಸಾಲಿನ ಐಪಿಎಸ್ ಅಧಿಕಾರಿಯಾಗಿದ್ದ ಇವರು ಪ್ರೊಬೇಷನರಿ ಅಧಿಕಾರಿಯಾಗಿ ಸೇವೆ ಸಲ್ಲಿಸಲು ಹಾಸನ ಜಿಲ್ಲೆಗೆ ನಿಯೋಜನೆಗೊಂಡಿದ್ದರು. ಬಿಇ ಸಿವಿಲ್‌ ಇಂಜಿನಿಯರಿಂಗ್‌ ಪದವೀಧರರಾಗಿದ್ದು, ಐಪಿಎಸ್ ಅಧಿಕಾರಿಯಾಗಿ ಮೈಸೂರು ಪೊಲೀಸ್ ತರಬೇತಿ ಕೇಂದ್ರದಲ್ಲಿ 4 ವಾರಗಳ ಕಾಲ ತರಬೇತಿ ಪೂರ್ಣಗೊಳಿಸಿದ್ದರು. 6 ತಿಂಗಳು ಹಾಸನದಲ್ಲಿ ಡಿಸ್ಟ್ರಿಕ್ಟ್ ಪ್ರಾಕ್ಟಿಕಲ್ ಟ್ರೈನಿಂಗ್ ಪಡೆಯಬೇಕಿತ್ತು.

ನಿನ್ನೆ ಮೈಸೂರಿನ ಪೊಲೀಸ್ ಅಕಾಡೆಮಿಯಿಂದ ನಿರ್ಗಮಿಸಿ, ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎದುರು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಹಾಸನಕ್ಕೆ ಆಗಮಿಸಬೇಕಿತ್ತು. ಹೀಗಾಗಿ ಇವರನ್ನು ಕರೆತರಲು ಹಾಸನದ ಡಿಎಆರ್​ ಪೊಲೀಸ್ ಪೇದೆ ಮಂಜೆಗೌಡ, ಹಾಸನ ಗ್ರಾಮಾಂತರ ಠಾಣೆಯ ಇನ್ಸ್​​ಪೆಕ್ಟರ್ ಬೋಲೇರೋ ಜೀಪಲ್ಲಿ ಮೈಸೂರಿಗೆ ಹೋಗಿ ಹರ್ಷಬರ್ಧನ್​ ಅವರನ್ನು ಕರೆತರುತ್ತಿದ್ದರು. ಅವರು ಹೊಳೆನರಸೀಪುರ ಮಾರ್ಗವಾಗಿ ಹಾಸನಕ್ಕೆ ತಲುಪಬೇಕಿತ್ತು.

ಆದರೆ, ಹಾಸನ ಗಡಿ 3 ಕಿಲೋ ಮೀಟರ್ ಇರುವಾಗಲೇ ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್​ ಜೀಪ್ 3-4 ಪಲ್ಟಿಯಾಗಿ ರಸ್ತೆ ಪಕ್ಕದ ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮತ್ತು ಐಪಿಎಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದರು. ಚಾಲಕ ಮಂಜೇಗೌಡ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಜೀವನದಲ್ಲಿ ಐಪಿಎಸ್ ಅಧಿಕಾರಿಯಾಗಿ ಗೆಲ್ಲಬೇಕಿದ್ದ ಹರ್ಷಬರ್ಧನ್​ ಮಾತ್ರ ಸಾವನ್ನು ಗೆಲ್ಲದೇ, ಕೊನೆಯುಸಿರೆಳೆದಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

‘ಬ್ಯಾರಿ ಎಲ್ತ್‌ಗಾರ್ತಿಮಾರೊ ಕೂಟ’ದ ಎರಡನೇ ಬ್ಯಾರಿ ಬರಹಗಾರ್ತಿಯ ಬಳಗದ ಸಮ್ಮಿಲನ

Next Post

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಮೀಪ ಕಾಣಿಸಿಕೊಂಡ ಕಾಡಾನೆ, ಭಕ್ತರಿಗೆ ಎಚ್ಚರಿಕೆ

Related Posts

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
16
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
ರಾಜ್ಯ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
19
Next Post
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಮೀಪ ಕಾಣಿಸಿಕೊಂಡ ಕಾಡಾನೆ, ಭಕ್ತರಿಗೆ ಎಚ್ಚರಿಕೆ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಮೀಪ ಕಾಣಿಸಿಕೊಂಡ ಕಾಡಾನೆ, ಭಕ್ತರಿಗೆ ಎಚ್ಚರಿಕೆ

Discussion about this post

Recent News

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
30
ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
118
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

ದೇಶದ ಅತಿ ದೊಡ್ಡ ರಾಬರಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂ ಹಣವಿದ್ದ ಎರಡು ಕಂಟೇನರ್​​​ ಹೈಜಾಕ್​?

January 25, 2026
ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

ಮಂಗಳೂರು: ಮಹಾವೀರ ವೃತ್ತದಲ್ಲಿ ಮರುಸ್ಥಾಪನೆಗೊಂಡ ಕಲಶ ಅದ್ಧೂರಿಯಾಗಿ ಲೋಕಾರ್ಪಣೆ

January 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d