• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಂಡರ್ 19 ವರ್ಲ್ಡ್ ಕಪ್: ಫೈನಲ್ ಗೆ ಟೀಂ ಇಂಡಿಯಾ ಲಗ್ಗೆ

Coastal Times by Coastal Times
February 3, 2022
in ಕ್ರೀಡಾ ಸುದ್ದಿ
ಅಂಡರ್ 19 ವರ್ಲ್ಡ್ ಕಪ್: ಫೈನಲ್ ಗೆ ಟೀಂ ಇಂಡಿಯಾ ಲಗ್ಗೆ
25
VIEWS
WhatsappTelegramShare on FacebookShare on Twitter

ಆಂಟಿಗುವಾ: 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಭಾರತ 96 ರನ್‌ಗಳಿಂದ ಆಸ್ಟ್ರೇಲಿಯಾವನ್ನು ಸೆದೆಬಡಿದು ಫೈನಲ್‌ಗೆ ಲಗ್ಗೆ ಇಟ್ಟಿದೆ. ಭಾರತ ತಂಡ ಈ  ಟೂರ್ನಿಯಲ್ಲಿ ಸತತ ನಾಲ್ಕನೇ ಹಾಗೂ ಒಟ್ಟಾರೆ 8ನೇ ಬಾರಿ ಪ್ರಶಸ್ತಿ ಸುತ್ತಿಗೆ ಪ್ರವೇಶ ಮಾಡಿದೆ.

ನಾಯಕ ಯಶ್ ಧುಲ್ (110) ಶತಕ ಮತ್ತು ಶೇಖ್ ರಶೀದ್ ಅವರ 94 ರನ್ ಗಳ ನೆರವಿನಿಂದ ಭಾರತ 50 ಓವರ್ ಗಳಲ್ಲಿ ಐದು ವಿಕೆಟ್ ಗಳ ನಷ್ಟಕ್ಕೆ 290 ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಉತ್ತರವಾಗಿ ಆಸ್ಟ್ರೇಲಿಯಾ 41.5 ಓವರ್‌ಗಳಲ್ಲಿ 194 ರನ್‌ ಗಳಿಸುವಷ್ಟರಲ್ಲೇ ತನ್ನ ಎಲ್ಲ ವಿಕೆಟ್ ಕಳೆದುಕೊಂಡಿತು. ಲಾಚ್ಲಾನ್ ಶಾ ಅತ್ಯಧಿಕ 51 ರನ್ ಗಳಿಸಿದ್ರೆ ಭಾರತದ ಪರ ವಿಕಿ ಓಸ್ಟ್ವಾಲ್ ಮೂರು ವಿಕೆಟ್ ಪಡೆದರು. ಭಾರತದ ಕ್ಯಾಪ್ಟನ್ ಯಶ್ ಧುಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಫೆ.5ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

ರವಿಕುಮಾರ್, ಟೀಗ್ ವೈಲಿ (1) ಅವರನ್ನು ಔಟ್ ಮಾಡುವ ಮೂಲಕ ಭಾರತಕ್ಕೆ ಮೊದಲ ಮುನ್ನಡೆ ನೀಡಿದರು. ಕೋರಿ ಮಿಲ್ಲರ್ (38) ವಿಕೆಟನ್ನು ರಘುವಂಶಿ ಪಡೆದರು. ವಿಕ್ಕಿ ಒಸ್ತ್ವಾಲ್, ಕ್ಯಾಂಪ್‌ಬೆಲ್ (30) ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಕ್ಯಾಪ್ಟನ್ ಕೂಪರ್ ಕ್ಯಾನೋಲಿ (3) ನಿಶಾಂತ್ ಸಿಂಧುಗೆ ಬಲಿಯಾದರು. ಇದಾದ ಬಳಿಕ ಕಾಂಗರೂ ತಂಡ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಮೊದಲು ಟಾಸ್ ಗೆದ್ದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 290 ರನ್ ಗಳಿಸಿತು. 110 ರನ್ ಗಳಿಸಿದ್ದಾಗ ನಾಯಕ ಯಶ್ ಧುಲ್ ರನೌಟ್ ಆದರು. ಶೇಖ್ ರಶೀದ್ 94 ರನ್ ಗಳಿಸಿದರು. ದಿನೇಶ್ ಬಾನಾ 4 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಔಟಾಗದೆ 20 ರನ್ ಗಳಿಸಿದರು. ಕೊನೆಯ ಓವರ್‌ನಲ್ಲಿ 27 ರನ್‌ಗಳು ಬಂದವು. ನಿಶಾಂತ್ ಸಿಂಧು 12 ರನ್ ಗಳಿಸಿ ಅಜೇಯರಾಗಿ ಉಳಿದರು.

ಭಾರತ ತನ್ನ ಮೊದಲ ಎರಡೂ ವಿಕೆಟ್‌ಗಳನ್ನು 37ಕ್ಕೆ ಕಳೆದುಕೊಂಡಿತ್ತು. ಇದಾದ ನಂತರ ರಶೀದ್ ಮತ್ತು ಧುಲ್ 204 ರನ್‌ಗಳ ಜೊತೆಯಾಟ ಭಾರತ ಬೃಹತ್ ಇನ್ನಿಂಗ್ಸ್ ಕಟ್ಟುವಲ್ಲಿ ನೆರವಾಯಿತು. 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಶತಕ ಸಿಡಿಸಿದ ಭಾರತದ ಮೂರನೇ ನಾಯಕ ಎಂಬ ಹೆಗ್ಗಳಿಕೆಗೆ ಯಶ್ ಧುಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಮತ್ತು ಉನ್ಮುಕ್ತ್ ಚಂದ್ ಈ ಸಾಧನೆ ಮಾಡಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಕಳಪೆ ಕೆಲಸ ಮಾಡಿದರೆ ಕ್ರಿಮಿನಲ್ ಮೊಕದ್ದಮೆ: ಸಚಿವ ಬೈರತಿ ಬಸವರಾಜ ಎಚ್ಚರಿಕೆ

Next Post

ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

Related Posts

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ
ಕ್ರೀಡಾ ಸುದ್ದಿ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
38
ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ
ಕ್ರೀಡಾ ಸುದ್ದಿ

ವೆಸ್ಟ್ ಇಂಡೀಸ್‌ ಕ್ರಿಕೆಟ್​​ ದಂತಕಥೆ, ಆಲ್​ರೌಂಡರ್ ಸರ್ ಗ್ಯಾರಿ ಸೋಬರ್ಸ್ ನಿಧನ

July 18, 2026
20
Next Post
ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

Discussion about this post

Recent News

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
2
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

ಸ್ವಯಂಚಾಲಿತವಾಗಿ ಚಲಿಸುವ ‘ಶ್ರೀ-ವಾಹನ್’ ಎಂಬ ಅತ್ಯಾಧುನಿಕ ಆಟೋನಾಮಸ್ ವಾಹನ ತಯಾರಿಸಿದ ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು

July 23, 2026
ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ ಕಳ್ಳತನ ಪ್ರಕರಣ -ಪ್ರಮುಖ ಆರೋಪಿಯ ಬಂಧನ

July 23, 2026
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d