• About us
  • Contact us
  • Disclaimer
Sunday, September 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅನೈತಿಕ ಪೊಲೀಸ್‌ಗಿರಿ ಆರೋಪಿಗಳಿಂದ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು: ಕಮಿಷನರ್ ಕುಲದೀಪ್ ಕುಮಾರ್ ಜೈನ್

Coastal Times by Coastal Times
June 3, 2023
in ಕರಾವಳಿ
ಅನೈತಿಕ ಪೊಲೀಸ್‌ಗಿರಿ ಆರೋಪಿಗಳಿಂದ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು: ಕಮಿಷನರ್ ಕುಲದೀಪ್ ಕುಮಾರ್ ಜೈನ್
66
VIEWS
WhatsappTelegramShare on FacebookShare on Twitter

ಮಂಗಳೂರು: ಮಂಗಳೂರು ಪೊಲೀಸ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂರು ಬಾಹಿರ ಚಟುವಟಿಕೆಗಳಿಗೆ ಆಸ್ಪದ ಇಲ್ಲ ಮತ್ತು ಅದನ್ನು ಸಹಿಸಲ್ಲ ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷಗಳಲ್ಲಿ ನಡೆದ ಮತೀಯ ಗೂಂಡಾಗಿರಿ ಪ್ರಕರಣಗಳಲ್ಲಿ ನೇರ ಮತ್ತು ಪರೋಕ್ಷವಾಗಿ ಭಾಗಿಯಾದ ಎಲ್ಲರನ್ನೂ ಪೊಲೀಸ್ ಇಲಾಖೆಯು ಗುರುತಿಸಿದೆ. ಈ ಎಲ್ಲಾ ಆರೋಪಿಗಳಿಂದ ಒಂದು ವರ್ಷದ ಮಟ್ಟಿಗೆ ಮುಚ್ಚಳಿಕೆ ಪಡೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ತಿಳಿಸಿದ್ದಾರೆ.

ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಆರೋಪಿಗಳ ವಿರುದ್ಧ ಮನ್ನೆಚ್ಚರಿಕೆಯ ಕ್ರಮವಾಗಿ ಸಿಆರ್‌ಪಿಸಿ 107 ಮತ್ತು 110 ಅಡಿ ಪ್ರಕರಣ ದಾಖಲಿಸಲಾಗುತ್ತದೆ. ಈ ಅವಧಿಯಲ್ಲಿ ಯಾವುದೇ ಶಾಂತಿ ಉಲ್ಲಂಘಿಸಿದರೆ ದಂಡವನ್ನು ವಸೂಲಿ ಮಾಡಲಾಗುತ್ತದೆ. ಒಂದು ವರ್ಷದ ಅವಧಿಯ ಬಳಿಕವೂ ಕಾನೂನು ಉಲ್ಲಂಘಿಸಿದರೆ ಮುಚ್ಚಳಿಕೆಯ ಅವಧಿಯನ್ನು ವಿಸ್ತರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಜೂನ್ 1ರಂದು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಬೀಚ್‌ನಲ್ಲಿ ವರದಿಯಾದ ಮತೀಯ ಗೂಂಡಾಗಿರಿಗೆ ಸಂಬಂಧಿಸಿದಂತೆ ಬಂಧಿತರಾಗಿರುವ ಏಳು ಮಂದಿಯನ್ನು ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅಪ್ರಾಪ್ತ ಬಾಲಕನಿಗೆ ಸಂಬಂಧಿಸಿದಂತೆ ನ್ಯಾಯ ಮಂಡಳಿಗೆ ವರದಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದರು.

ಕಳೆದ ಒಂದು ವರ್ಷದಲ್ಲಿ ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿದ ಒಂಬತ್ತು ಮಂದಿಯಿಂದ ನಗರ ಪೊಲೀಸರು 1.90 ಲಕ್ಷ ರೂ.  ವಸೂಲಿ ಮಾಡಿದ್ದಾರೆ. ಈ ವರ್ಷ 62 ರೌಡಿ ಶೀಟರ್‌ಗಳನ್ನು ಕಮಿಷನರೇಟ್ ವ್ಯಾಪ್ತಿಯಿಂದ ಹೊರ ಹಾಕಲಾಗಿದೆ. ನಗರದಲ್ಲಿ ವಿವಿಧ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ 1200 ಆರೋಪಿ ಗಳಿಂದ ಮುಚ್ಚಳಿಕೆ ಪಡೆದುಕೊಂಳ್ಳಲಾಗಿದೆ ಎಂದು ಕಮಿಷನರ್ ತಿಳಿಸಿದರು.

ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಂಶುಕುಮಾರ್ ಮಾತನಾಡಿ, ಸೋಮೇಶ್ವರ ಬೀಚ್‌ನಲ್ಲಿ ಮತೀಯ ಗೂಂಡಾಗಿರಿ ಘಟನೆ ವರದಿಯಾದ ಬಳಿಕ ಅಧಿಕ ಸಂಖ್ಯೆಯಲ್ಲಿ ಜನರು ಸೇರುವ ಬೀಚ್‌ಗಳು, ಮಾಲ್‌ಗಳ ಸಹಿತ ಪ್ರಮುಖ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಲು ಕ್ರಮ ಜರಗಿಸಲಾಗಿದೆ. ಈ ಪ್ರದೇಶಗಳಲ್ಲಿ ಸಂಜೆ 5 ರಿಂದ ರಾತ್ರಿ 10 ರವರೆಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಒಡಿಶಾ ರೈಲು ಅಪಘಾತ ಗಾಯಾಳುಗಳಿಗೆ ರಕ್ತದಾನ ಮಾಡಲು ಆಸ್ಪತ್ರೆ ಮುಂದೆ ಜಮಾಯಿಸಿದ್ದ 2 ಸಾವಿರ ಮಂದಿ

Next Post

ಉಳ್ಳಾಲ: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ !

Related Posts

ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ
ಕರಾವಳಿ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
17
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ
ಕರಾವಳಿ

ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ: ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

September 11, 2026
17
Next Post
ಉಳ್ಳಾಲ: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ !

ಉಳ್ಳಾಲ: ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ !

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
41
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
60
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d