• About us
  • Contact us
  • Disclaimer
Sunday, November 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ, ಉದ್ಯೋಗ ಸೃಷ್ಟಿಗೆ ಕ್ರಮ: ಪುತ್ತೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್

Coastal Times by Coastal Times
November 3, 2024
in ಕರಾವಳಿ
ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ, ಉದ್ಯೋಗ ಸೃಷ್ಟಿಗೆ ಕ್ರಮ: ಪುತ್ತೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್
26
VIEWS
WhatsappTelegramShare on FacebookShare on Twitter

ಪುತ್ತೂರು, ನವೆಂಬರ್ 2: ಕರವಾಳಿ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ ಕ್ರಮ ಕೈಗೊಳ್ಳಲಾಗುವುದು. ಅದಕ್ಕಾಗಿ ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಶನಿವಾರ ಭರವಸೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಪುತ್ತೂರಿನಲ್ಲಿ ಕೊಂಬೆಟ್ಟು ಕಾಲೇಜು ಮೈದಾನದಲ್ಲಿ ನಡೆದ ‘ಅಶೋಕ ಜನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಂಜೆಯಾದ ಮೇಲೆ ಮಂಗಳೂರು ಡ್ರೈ ಸಿಟಿಯಾಗಿದೆ. ಕೋಮುಗಲಭೆ ಬಳಿಕ ಇಲ್ಲಿ ಕೊಂಚ ಅಭಿವೃದ್ಧಿ ಕಡಿಮೆ ಆಗಿದೆ. ವಿದ್ಯಾ ಸಂಸ್ಥೆಗಳಿದ್ದರೂ ಗಲಾಟೆ ಕಾರಣದಿಂದ ಮಕ್ಕಳು ಬರಲು ಭಯಪಡುತ್ತಾ ಇದ್ದಾರೆ. ಇಲ್ಲಿನವರು ದುಬೈ, ಮುಂಬೈಗೆ ಹೋಗುತ್ತಾ ಇದ್ದಾರೆ. ಹಾಗಾಗಿ ಕರಾವಳಿ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕಿದೆ. ಕರಾವಳಿಗೆ ಪ್ರತ್ಯೇಕ ನೀತಿ ಹಾಗೂ ಟೂರಿಸಂ ಪಾಲಿಸಿ ರೂಪಿಸುತ್ತೇವೆ. ಮನಸ್ಸಿನ ಅಶಾಂತಿ ಸರಿಸಿ ಯುವಕರಿಗೆ ಉದ್ಯೋಗ ಸೃಷ್ಟಿಸಬೇಕಿದೆ ಎಂದು ಅವರು ಹೇಳಿದರು.

ನಾನು ಮಾತಿನಲ್ಲಿ ಗೆಲ್ಲುವವನಲ್ಲ, ನಾನು ಕೆಲಸ ಮತ್ತು ಹೃದಯದಿಂದ ಜನರನ್ನು ಗೆಲ್ಲುತ್ತೇನೆ. ಇಡೀ ಸರ್ಕಾರ ಮತ್ತು‌ ನಾನು ನಿಮ್ಮ ಜೊತೆ ಇದ್ದೇವೆ. ಮಿತ್ರ ಅಶೋಕ್ ರೈಯವರು ಇವತ್ತು ತಂದೆ, ತಾಯಿಯನ್ನು ಸ್ಮರಿಸಿ ಧರ್ಮದ ಕೆಲಸ ಮಾಡುತ್ತಾ ಇದ್ದಾರೆ. ಅವಕಾಶವನ್ನು ಪಡೆದುಕೊಳ್ಳುವುದು ಅದೃಷ್ಟ ಅಲ್ಲ, ಅವಕಾಶ ಸೃಷ್ಟಿಸುವುದು ಬುದ್ಧಿವಂತಿಕೆ. ಮನುಷ್ಯ ಹುಟ್ಟುವಾಗ ನಾಲ್ಕು ಋಣದಲ್ಲಿ ಹುಟ್ಟುತ್ತಾನೆ. ಇವತ್ತು ಅಶೋಕ್ ರೈ ಕುಟುಂಬ ಧರ್ಮದಿಂದ ಸಮಾಜದ ಋಣ ತೀರಿಸುತ್ತಾ ಇದ್ದಾರೆ. ನನಗೆ ಬೇರೆ ಬೇರೆ ರಾಜ್ಯದ ಹಾಗೂ ನಮ್ಮ ರಾಜ್ಯದ ಚುನಾವಣೆ ಇದೆ. ಆದರೆ ಅಶೋಕ್ ರೈ ಜೊತೆಗಿನ ನಂಟಿನ ಕಾರಣದಿಂದ ಇಲ್ಲಿಗೆ ಬಂದಿದ್ದೇನೆ. ಪುತ್ತೂರಿನ ಎಲ್ಲಾ ಧರ್ಮದವರನ್ನು ಭೇಟಿಯಾಗಿರುವುದು ನನ್ನ ಭಾಗ್ಯ ಎಂದು ಡಿಕೆ ಶಿವಕುಮಾರ್ ಹೇಳಿದರು.

ಪುತ್ತೂರಿನ ಮಹಾಜನತೆಗೆ ಬಳಿ ಒಂದು ವಿಚಾರ ಹೇಳಬೇಕಿದೆ. ಅಶೋಕ್ ರೈಯನ್ನ ವಿಧಾನಸೌಧಕ್ಕೆ ಕಳಿಸಿದ್ದಕ್ಕೆ ಅಭಿನಂದನೆ ಸಲ್ಲಿಸ್ತೇನೆ. ಬೇರೆ ಪಕ್ಷದಿಂದ ಬಂದರೂ ಅವರಿಗೆ ಕಾರ್ಯಕರ್ತರು ಸಹಕಾರ ಕೊಟ್ಟಿದ್ದಾರೆ. ಅವರು ಅಗಾಗ್ಗೆ ನಿಮ್ಮ ಕೆಲಸಕ್ಕಾಗಿ ಬೆಂಗಳೂರಿಗೆ ಬಂದು ಸಿಎಂ ಜೊತೆ ಜಗಳ ಮಾಡುತ್ತಾರೆ. ಯಶಸ್ಸು ಕಾಣಲು ಧರ್ಮರಾಯನ ಧರ್ಮತ್ವ, ಕರ್ಣನ ದಾನತ್ವ, ಕೃಷ್ಣನ ತಂತ್ರ ಇರಬೇಕು. ಕೆಲವರು ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾರೆ. ಆದರೆ‌ ನಾವು ಹಾಗೆ ಮಾಡಲ್ಲ, ನಮ್ಮದು ಬದುಕಿನ ಮೇಲೆ ರಾಜಕಾರಣ. ನಾವು ಐದು ಗ್ಯಾರಂಟಿ ಕೊಟ್ಟಿರುವ ಕಾರಣ ಎಲ್ಲರ ಕೈ ಗಟ್ಟಿಯಾಗಿದೆ. ಬಿಜೆಪಿ, ದಳ, ಕಾಂಗ್ರೆಸ್ ಅಂತ ಹೇಳದೇ ಜನರಿಗೆ ಗ್ಯಾರಂಟಿ ತಲುಪುತ್ತಿದೆ. ಬೆಲೆಯೇರಿಕೆ ಗಗನಕ್ಕೆ ಹೋಗಿದೆ, ಆದಾಯ ಪಾತಳಕ್ಕೆ ಹೋಗಿದೆ. ಇದನ್ನ ನಿಲ್ಲಿಸಲು ನಾವು ಜನರಿಗೆ ಸಹಾಯ‌ ಮಾಡುತ್ತಾ ಇದ್ದೇವೆ ಎಂದು ಅವರು ಹೇಳಿದರು.

ಮೆಡಿಕಲ್ ಕಾಲೇಜಿಗೆ ಬೇಡಿಕೆ ಇಟ್ಟ ಜನತೆ : ಕಾರ್ಯಕ್ರಮದಲ್ಲಿ ಪುತ್ತೂರಿನ ಜನರು ಡಿಸಿಎಂ ಡಿಕೆ ಶಿವಕುಮಾರ್​​ಗೆ ಸರ್ಕಾರಿ ಮೆಡಿಕಲ್ ಕಾಲೇಜು ಬೇಡಿಕೆ ಇಟ್ಟರು. ಜನರ ಪರವಾಗಿ ಶಾಸಕ ಅಶೋಕ್ ರೈ ಡಿಸಿಎಂ ಡಿಕೆಶಿಗೆ ಬೇಡಿಕೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಾವಿರಾರು ಜನ ಎದ್ದು ನಿಂತು ‘we want medical college’ ಎಂದು ಘೋಷಣೆ ಕೂಗಿದರು. ಬಳಿಕ ಅಧಿಕೃತವಾಗಿ ಡಿಸಿಎಂಗೆ ಮನವಿ ಪತ್ರ ಸಲ್ಲಿಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಲವು ವರ್ಷಗಳಿಂದ ಮೆಡಿಕಲ್ ಕಾಲೇಜಿಗೆ ಬೇಡಿಕೆ ಕೇಳಿ‌ ಬರುತ್ತಿದೆ. ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಡಾ. ಕೆವಿ ರಾಜೇಂದ್ರ ಇತ್ತೀಚೆಗೆ ಸುಳಿವು ನೀಡಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಂಟ್ವಾಳ: ರೌಡಿಶೀಟರ್‌ಗಳ ತಲ್ವಾರ್ ವಾರ್ ಪ್ರಕರಣ; 8 ಮಂದಿ ಆರೋಪಿಗಳ ಬಂಧನ

Next Post

ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Related Posts

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ
ಕರಾವಳಿ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
7
ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು
ಕರಾವಳಿ

ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

November 15, 2025
5
Next Post
ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Discussion about this post

Recent News

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
7
ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

November 15, 2025
5
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

November 15, 2025
ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಅಂತರರಾಷ್ಟ್ರೀಯ ಹೋಮಿಯೋಪತಿ ಸಮ್ಮೇಳನ ಎಕ್ಸ್‌ಪ್ಲೋರಾ 2025

November 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d