• About us
  • Contact us
  • Disclaimer
Thursday, February 19, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Coastal Times by Coastal Times
November 3, 2024
in ಸಿನಿಮಾ
ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
121
VIEWS
WhatsappTelegramShare on FacebookShare on Twitter

ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ (50) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುಪ್ರಸಾದ್ ಅವರು ಸಾಲಗಾರರಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಗುರುಪ್ರಸಾದ್ ಅವರು ಸಾಲದ ಬಾಧೆಯಿಂದ ಬಳಲುತ್ತಿದ್ದರು. ಅವರು ನಿರ್ದೇಶನ ಮಾಡಿದ್ದ ಇತ್ತೀಚೆಗಿನ ಸಿನಿಮಾ ‘ರಂಗನಾಯಕ’ ಹೀನಾಯ ಸೋಲು ಕಂಡಿತ್ತು. ‘ರಂಗನಾಯಕ’ ಸಿನಿಮಾದ ಫ್ಲಾಪ್ ಬಳಿಕ ಗುರುಪ್ರಸಾದ್ ಸಾಲಗಳಿಗೆ ಸಿಲುಕಿದ್ದರು. ಮಾತ್ರವಲ್ಲದೆ ಕೆಲ ತಿಂಗಳ ಹಿಂದೆ ಗುರುಪ್ರಸಾದ್ ಎರಡನೇ ಮದುವೆ ಸಹ ಆಗಿದ್ದರು ಎನ್ನಲಾಗುತ್ತಿದೆ. ಇದೀಗ ಏಕಾ-ಏಕಿ ನೇಣಿಗೆ ಕೊರಳೊಡ್ಡಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಟಾಟಾ ನ್ಯೂ ಹಾವೆಲ್ ಅಪಾರ್ಟ್​ಮೆಂಟ್ ನಲ್ಲಿ ಕಳೆದ ಎಂಟು ತಿಂಗಳಿಂದಲೂ ಗುರುಪ್ರಸಾದ್ ವಾಸವಿದ್ದರು, ಅದೇ ಮನೆಯಲ್ಲಿ ಈಗ ಗುರುಪ್ರಸಾದ್ ಅವರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಬಗ್ಗಿ ನೋಡಿದಾಗ ಗುರುಪ್ರಸಾದ್ ಶವ ಫ್ಯಾನಿಗೆ ನೇತಾಡುತ್ತಿರುವುದು ಕಂಡಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗುರುಪ್ರಸಾದ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಿದ್ದಾರೆ ಪೊಲೀಸರು.

ಗುರುಪ್ರಸಾದ್ ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಒಬ್ಬರು. ‘ಮಠ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಗುರುಪ್ರಸಾದ್ ಮೊದಲ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದರು. ಅದಾದ ಬಳಿಕ ನಿರ್ದೇಶಿಸಿದ ‘ಎದ್ದೇಳು ಮಂಜುನಾಥ’ ಭಾರಿ ದೊಡ್ಡ ಹಿಟ್ ಆಯ್ತು, ಕಲ್ಟ್ ಕಾಮಿಡಿ ಸಿನಿಮಾ ಆಗಿ ಗುರುತಿಸಲಾಗುತ್ತಿದೆ. ಅದಾದ ಬಳಿಕ ‘ಡೈರೆಕ್ಟರ್ಸ್ ಸ್ಪೆಷಲ್’ ಸಿನಿಮಾ ಮಾಡಿದರು. ಈ ಸಿನಿಮಾ ಮೂಲಕ ಡಾಲಿ ಧನಂಜಯ್ ನಾಯಕನಾಗಿ ಪರಿಚಯಗೊಂಡರು. ಅದಾದ ಬಳಿಕ 2017 ರಲ್ಲಿ ‘ಎರಡನೇ ಸಲ’ ನಿರ್ದೇಶಿಸಿದರು. ಆ ಸಿನಿಮಾ ಸಾಧಾರಣ ಯಶಸ್ಸನ್ನಷ್ಟೆ ಕಂಡಿತು.

‘ಎರಡನೇ ಸಲ’ ಸಿನಿಮಾ ಆದಮೇಲೆ ದೊಡ್ಡ ಬ್ರೇಕ್ ತೆಗೆದುಕೊಂಡಿದ್ದ ಗುರುಪ್ರಸಾದ್ ಇದೇ ವರ್ಷದಲ್ಲಿ ಜಗ್ಗೇಶ್ ಅವರೊಟ್ಟಿಗೆ ‘ರಂಗನಾಯಕ’ ಸಿನಿಮಾ ಮಾಡಿದರು. ಸಿನಿಮಾ ಚಿತ್ರಮಂದಿರದಲ್ಲಿ ಅಟ್ಟರ್ ಫ್ಲಾಪ್ ಆಯ್ತು. ‘ರಂಗನಾಯಕ’ ಸಿನಿಮಾದ ಸೋಲಿನಿಂದ ವಿಚಲಿತರಾಗಿದ್ದ ಗುರುಪ್ರಸಾದ್ ಸಾಕಷ್ಟು ಸಾಲಗಳಿಗೆ ಸಿಲುಕಿಕೊಂಡಿದ್ದರು. ಕೊನೆಗೆ ಈಗ ನಿಧನ ಹೊಂದಿದ್ದಾರೆ. ಕೌಟುಂಬಿಕ ಕಲಹಗಳ ಕಾರಣದಿಂದಾಗಿ ಗುರುಪ್ರಸಾದ್ ಅವರ ಮೊದಲ ಮದುವೆ ಮುರಿದು ಬಿದ್ದಿತ್ತು, ಕೆಲ ತಿಂಗಳ ಹಿಂದಷ್ಟೆ ಅವರು ಎರಡನೇ ಮದುವೆ ಆಗಿದ್ದರು.

 

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕರಾವಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ, ಉದ್ಯೋಗ ಸೃಷ್ಟಿಗೆ ಕ್ರಮ: ಪುತ್ತೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್

Next Post

ಪುತ್ತೂರು: ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ತಲೆ ಬುರುಡೆ ಹಾಗೂ ಎಲುಬು ಪತ್ತೆ; ಸಾವು ಆತ್ಮಹತ್ಯೆಯೋ, ಕೊಲೆಯೋ ಅನುಮಾನ

Related Posts

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!
ಸಿನಿಮಾ

ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ, ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂಪಾಯಿ ಟಿಕೇಟು!

February 3, 2026
39
ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ
ಸಿನಿಮಾ

ಖ್ಯಾತ ಮಲಯಾಳಂ ಚಿತ್ರರಂಗದ ಹಿರಿಯ ನಟ ಶ್ರೀನಿವಾಸನ್ ಇನ್ನಿಲ್ಲ

December 20, 2025
73
Next Post
ಪುತ್ತೂರು: ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ತಲೆ ಬುರುಡೆ ಹಾಗೂ ಎಲುಬು ಪತ್ತೆ; ಸಾವು ಆತ್ಮಹತ್ಯೆಯೋ, ಕೊಲೆಯೋ ಅನುಮಾನ

ಪುತ್ತೂರು: ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ತಲೆ ಬುರುಡೆ ಹಾಗೂ ಎಲುಬು ಪತ್ತೆ; ಸಾವು ಆತ್ಮಹತ್ಯೆಯೋ, ಕೊಲೆಯೋ ಅನುಮಾನ

Discussion about this post

Recent News

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

February 18, 2026
37
ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

9 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ನಟೋರಿಯಸ್ ರೌಡಿ ಸಫ್ವಾನ್ ಆಂಧ್ರಪ್ರದೇಶದಲ್ಲಿ ಬಂಧನ

February 18, 2026
ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್‌ಸಿಡಿಸಿಸಿ ಬ್ಯಾಂಕ್‌ನ ಎಲ್ಲಾ ಶಾಖೆಗಳಿಗೂ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯ ವಿಸ್ತರಣೆ : ಡಾ.ಎಂ.ಎನ್.ರಾಜೇಂದ್ರ ಕುಮಾರ್

February 18, 2026
ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

ಉಳ್ಳಾಲ: ಅತಿ ವೇಗದಿಂದ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ತುಂಡಾಗಿ ಬಿದ್ದ ಕಾಂಕ್ರೀಟ್ ಕಂಬ ! ಯುವಕರಿಬ್ಬರು ಪವಾಡ ಸೃದೃಶ ಪಾರು

February 17, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d