• About us
  • Contact us
  • Disclaimer
Friday, September 11, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ನಿಗೂಢ ಕೆಲಸಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡ ಸೆರೆ, ಯುವಕರಲ್ಲಿ 42 ಅಕ್ರಮ ಸಿಮ್​ಗಳು ಪತ್ತೆ

Coastal Times by Coastal Times
February 4, 2024
in ಕ್ರೈಮ್ ನ್ಯೂಸ್
ಮಂಗಳೂರು: ನಿಗೂಢ ಕೆಲಸಕ್ಕಾಗಿ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡ ಸೆರೆ, ಯುವಕರಲ್ಲಿ 42 ಅಕ್ರಮ ಸಿಮ್​ಗಳು ಪತ್ತೆ
500
VIEWS
WhatsappTelegramShare on FacebookShare on Twitter

ಮಂಗಳೂರು, ಫೆ.4: ನಿಗೂಢ ಕೆಲಸಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ.

ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸರ ಬಲೆಗೆ ಬಿದಿದೆ. ಫೆಬ್ರವರಿ 1 ರಂದು ನೆರಿಯ ಗ್ರಾಮದಲ್ಲಿ ಯುವಕರನ್ನು ಬಂಧಿಸಿ ಸಿಮ್​ಗಳನ್ನು ಜಪ್ತಿ ಮಾಡಲಾಗಿದೆ. ರಮೀಝ್ (20), ಅಕ್ಬರ್ ಅಲಿ (24), ಮೊಹಮ್ಮದ್ ಮುಸ್ತಫಾ (22) ಮೊಹಮ್ಮದ್ ಸಾಧಿಕ್ (27) ಬಂಧಿತ ಆರೋಪಿಯಾಗಿದ್ದು, ಪ್ರಕರಣದಲ್ಲಿ 17 ವರ್ಷದ ಅಪ್ರಾಪ್ತ ಬಾಲಕನೂ ಸಿಲುಕಿದ್ದಾನೆ. ಆರೋಪಿ ಅಕ್ಬರ್​ ಅಲಿ ದುಬೈನಲ್ಲಿ ಇದ್ದಾಗ ಬೇರೆಯವರ ಹೆಸರಿನಲ್ಲಿ ನಕಲಿ ದಾಖಲೆ ಕೊಟ್ಟು ಸಿಮ್​ ಖರೀದಿ ಮಾಡಿದ್ದ. ಎರಡು ವರ್ಷಗಳ ಕಾಲ ದುಬೈನಲ್ಲಿದ್ದ ಈತ ನಾಲ್ಕು ತಿಂಗಳ ಹಿಂದೆ ಊರಿಗೆ ಮರಳಿದ್ದ. ವಿದೇಶದ ನಂಟು ಇರುವುದರಿಂದ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಆರೋಪಿಗಳು ಸಾಗಿಸುತ್ತಿದ್ದ ನಿಕಲಿ ಸಿಮ್​ಗಳು ಬೆಂಗಳೂರಿನಲ್ಲಿರುವ ಆಗಂತುಕರ ಕೈ ಸೇರುತ್ತಿತ್ತಾ ಎನ್ನುವ ಶಂಕೆ ವ್ಯಕ್ತವಾಗಿದೆ. ಅಕ್ಬರ್ ಆಲಿ ಮೊದಲಿನಿಂದಲೂ ದುಬೈನಲ್ಲಿ ಇದ್ದುಕೊಂಡೇ ಸಿಮ್ ಕಾರ್ಡ್ ಸಂಗ್ರಹಿಸುತ್ತಿದ್ದನು. ತನ್ನ ಸ್ನೇಹಿತ ಮೊಹಮ್ಮದ್ ಮುಸ್ತಫಾನ ಮೂಲಕ ಸಿಮ್​ಗಳನ್ನು ಕಲೆಕ್ಟ್​ ಮಾಡುತ್ತಿದ್ದನು.

ಮೊಹಮ್ಮದ್ ಮುಸ್ತಫಾ ತನ್ನ ಸ್ನೇಹಿತರಾಗಿರುವ ರಮೀಝ್ ಮತ್ತು ಮಹಮ್ಮದ್ ಸಾಧಿಕ್​ಗೆ ಸಿಮ್​ಗಳ ವ್ಯವಸ್ಥೆಗೆ ಸೂಚನೆ ನೀಡುತ್ತಿದ್ದನು. ಎಷ್ಟು ಸಿಮ್ ಕಾರ್ಡ್ ಬೇಕು ಅಷ್ಟುನ್ನು ತಮ್ಮ ಅತ್ಮಿಯರಿಂದ ಕಮಿಷನ್ ಕೊಡಿಸಿ ಕಲೆಕ್ಟ್ ಮಾಡಿ ಮುಸ್ತಫಾನಿಗೆ ನೀಡುತ್ತಿದ್ದರು. ನಂತರ ಅಕ್ಬರ್ ಅಲಿ ಹೇಳಿದಂತೆ ಸಿಮ್ ಕಾರ್ಡ್ ಮಹಮ್ಮದ್ ಮುಸ್ತಫಾ ಪಡೆದುಕೊಂಡು ಬೆಂಗಳೂರು ವ್ಯಕ್ತಿಗಳಿಗೆ ಖಾಸಗಿ ಬಸ್ ಮೂಲಕ ಕಳುಹಿಸುವ ಕೆಲಸ ಮಾಡುತ್ತಿದ್ದ ಎಂಬ ವಿಚಾರ ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.

ದುಬಾೖಯಲ್ಲಿ ಬಳಕೆ ಉದ್ದೇಶ? : ಆರೋಪಿಗಳು ಯಾವುದೇ ಸಂಘಟನೆ ಅಥವಾ ಪಕ್ಷದಲ್ಲಿ ಭಾಗಿಯಾಗಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುವುದಿಲ್ಲ. ಅವರ ವಿರುದ್ಧ ಈ ಹಿಂದೆ ಯಾವುದೇ ಪ್ರಕರಣಗಳು ದಾಖಲಾಗಿರುವುದಿಲ್ಲ. ಆರೋಪಿ ಅಕ್ಬರ್ ದುಬಾೖಯಲ್ಲಿ ಕೆಲಸ ಮಾಡಿಕೊಂಡಿದ್ದು ಅಲ್ಲಿನ ವ್ಯವಹಾರಕ್ಕೆ ಯುಪಿಐ ಐಡಿ ಆ್ಯಕ್ಟಿವೇಟ್‌ ಮಾಡಲು ದುಬಾೖಗೆ ಕೊಂಡೊಯ್ಯಲು ತನ್ನ ಸ್ನೇಹಿತರ ಮುಖಾಂತರ ಇಲ್ಲಿಂದ ಬೇರೆ ಬೇರೆ ಸಿಮ್‌ ಕಾರ್ಡ್‌ಗಳನ್ನು ಪಡೆದಿರುವುದಾಗಿ ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ದುಬಾೖಯಲ್ಲಿ ಒಂದು ಸಿಮ್‌ ಕಾರ್ಡ್‌ನಲ್ಲಿ ಕನಿಷ್ಠ 20 ಸಾವಿರ ರೂ. ಮಾತ್ರ ವ್ಯವಹಾರಕ್ಕೆ ಅವಕಾಶ ಇರುವುದರಿಂದ ಹಲವು ಸಿಮ್‌ಗಳನ್ನು ಪಡೆದುಕೊಂಡಿರುವ ಸಾಧ್ಯತೆ ಕಂಡುಬಂದಿದೆ.

ಒಬ್ಬನ ಹೆಸರಿನಲ್ಲಿ 9 ಸಿಮ್‌ ಕಾರ್ಡ್‌ ಪಡೆಯಲು ಅವಕಾಶ ಇದ್ದು ಎಲ್ಲ ಆರೋಪಿಗಳು ತಮ್ಮ ತಮ್ಮ ಮನೆಯವರ ಹಾಗೂ ಸಂಬಂಧಿಗಳ ಹೆಸರಿನಲ್ಲಿ ಸ್ಥಳೀಯವಾಗಿಯೇ ಸಿಮ್‌ ಕಾರ್ಡ್‌ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಆರೋಪಿಗಳ ಕುಟುಂಬದ 10 ಮಂದಿಯ ಆಧಾರ್‌ ಕಾರ್ಡ್‌ಗಳನ್ನು ನೀಡಿ ನೆರಿಯದ ಎರಡು ಮೊಬೈಲ್‌ ಅಂಗಡಿಗಳಿಂದ ಕ್ರಮವಾಗಿ 9 ಮತ್ತು 33 ಸಿಮ್‌ ಕಾರ್ಡ್‌ ಪಡೆದುಕೊಂಡಿದ್ದಾರೆ.ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಮಳಲಿ ಮಸೀದಿ ಕೇಸ್​ಗೆ ವಕ್ಫ್ ಬೋರ್ಡ್ ಎಂಟ್ರಿ ಆಗುತ್ತೆ: ಜಿಲ್ಲಾ ಸಮಿತಿ ಅಧ್ಯಕ್ಷ ಅಬ್ದುಲ್‌ ನಾಸಿರ್‌ ಸ್ಪಷ್ಟನೆ

Next Post

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಬಿಜೆಪಿ ವಿಧಿಸಿರುವ ಷರತ್ತೇನು?

Related Posts

ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ
ಕ್ರೈಮ್ ನ್ಯೂಸ್

ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ

September 11, 2026
17
ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ
ಕ್ರೈಮ್ ನ್ಯೂಸ್

ಮುಂಬೈ ಸರಣಿ ಬಾಂಬ್​ ಸ್ಫೋಟದ ಅಪರಾಧಿ ಅಬು ಸಲೇಮ್ ಬಿಡುಗಡೆ ಕೋರಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

September 10, 2026
30
Next Post
ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಬಿಜೆಪಿ ವಿಧಿಸಿರುವ ಷರತ್ತೇನು?

ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆಗೆ ಬಿಜೆಪಿ ಗಡುವು: ಬಿಜೆಪಿ ವಿಧಿಸಿರುವ ಷರತ್ತೇನು?

Discussion about this post

Recent News

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
10
ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ

ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ

September 11, 2026
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ

ಉಡುಪಿ: ಜಾಮೀನು ಪಡೆಯಲು ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ ಆರೋಪ; ಇಬ್ಬರ ಬಂಧನ

September 11, 2026
ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ:  ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

ಬೆಳೆಗಾರರ ಬೆಂಬಲದಿಂದ 2025-26 ರ ಆರ್ಥಿಕ ವರ್ಷದಲ್ಲಿ ಕ್ಯಾಂಪ್ಕೊ, ದಾಖಲೆ ಸಾಧನೆ: ರೂ.3,735 ಕೋಟಿ ವಹಿವಾಟು, ರೂ.49.62 ಕೋಟಿ ಲಾಭ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d