• About us
  • Contact us
  • Disclaimer
Wednesday, May 6, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿವಾದಗಳನ್ನು ಮೆಟ್ಟಿ ನಿಂತ ‘ಜನನಾಯಕ’ ದಳಪತಿ ಕೈಹಿಡಿದ ತಮಿಳುನಾಡಿನ ಜನತೆ

Coastal Times by Coastal Times
May 4, 2026
in ರಾಜಕೀಯ, ರಾಷ್ಟ್ರೀಯ ಸುದ್ದಿ
ವಿವಾದಗಳನ್ನು ಮೆಟ್ಟಿ ನಿಂತ ‘ಜನನಾಯಕ’ ದಳಪತಿ ಕೈಹಿಡಿದ ತಮಿಳುನಾಡಿನ ಜನತೆ
41
VIEWS
WhatsappTelegramShare on FacebookShare on Twitter

ಚೆನ್ನೈ: ತಮಿಳುನಾಡಿನ ಕ್ಷಿಪ್ರ ರಾಜಕೀಯ ಬದಲಾವಣೆಯಲ್ಲಿ ಜನಪ್ರಿಯ ನಟ ವಿಜಯ್​ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಭರ್ಜರಿ ಸಾಧನೆ ಮಾಡಿದೆ. 100ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸಾಂಪ್ರದಾಯಿಕ ಪಕ್ಷಗಳಾದ ಡಿಎಂಕೆ, ಎಡಿಎಂಕೆಗಳನ್ನು ಧೂಳೀಪಟ ಮಾಡಿದೆ. ಈ ಮೂಲಕ ಏಕಾಂಗಿಯಾಗಿ ಮ್ಯಾಜಿಕ್​ ನಂಬರ್​ನತ್ತ(118) ಅವರ ಪಕ್ಷ ಮುನ್ನುಗ್ಗುತ್ತಿದೆ.

ವಿಜಯ್ ವಿಕ್ಟರಿ ಕಂಡು ರಾಜಕೀಯ ನಾಯಕರೇ ಫಿದಾ : ನಟ ವಿಜಯ್ ಗೆಲುವು ಬರೀ ತಮಿಳುನಾಡಿನಲ್ಲಿ ಅಷ್ಟೇ ಅಲ್ಲ ಇಡೀ ದೇಶದ ರಾಜ್ಯ ರಾಜಕೀಯದಲ್ಲೇ ಭಾರೀ ಚರ್ಚೆಯ ವಿಷಯವಾಗಿದೆ. ಹೊಸ ಕಟ್ಟಿ ಮೊದಲ ಬಾರಿಗೆ ಚುನಾವಣೆಯಲ್ಲಿ ನಿಂತ ನಟ ದಳಪತಿ ವಿಜಯ್​​ ಇದೀಗ ತಮಿಳುನಾಡಿನ ದಳಪತಿಯೇ ಆಗಿದ್ದಾರೆ. ವಿಜಯ್ ವಿಕ್ಟರಿ ಕಂಡು ರಾಜಕೀಯ ನಾಯಕರು ಕೂಡ ಅಚ್ಚರಿಗೊಂಡಿದ್ದಾರೆ.

ನಿಜವಾದ ಆ್ಯಕ್ಸಿಸ್​ ಮೈ ಇಂಡಿಯಾ ಸಮೀಕ್ಷೆಯ ಭವಿಷ್ಯ: ನಟನೆಯಿಂದ ಜನಮಾನಸದಲ್ಲಿ ಪ್ರಭಾವ ಬೀರಿ, ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ವಿಜಯ್​ ಈಗ ರಾಜಕೀಯದಲ್ಲೂ ವಿಜಯದ ಹೊಸ್ತಿಲಲ್ಲಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳಲ್ಲಿ ಆ್ಯಕ್ಸಿಸ್​ ಮೈ ಇಂಡಿಯಾ ಹೊರತಾಗಿ ಯಾವುದೇ ಸಮೀಕ್ಷೆಗಳು ವಿಜಯ್​ ಅವರಿಗೆ ಅಧಿಕಾರ ಹಿಡಿಯುವಷ್ಟು ಸ್ಥಾನ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದವು.

ವಿವಾದಗಳನ್ನು ಮೆಟ್ಟಿ ನಿಂತ ‘ಜನನಾಯಕ’: ಆದರೆ, ಎಲ್ಲಾ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿರುವ ವಿಜಯ್​ ತಾನೊಬ್ಬನೇ ಏಕಾಂಗಿಯಾಗಿ ನಿಂತು ಪಕ್ಷವನ್ನು ಅಧಿಕಾರದ ಗದ್ದುಗೆಯ ಸನಿಹದಲ್ಲಿ ನಿಲ್ಲಿಸಿದ್ದಾರೆ. ಡಿಎಂಕೆ ನೇತೃತ್ವದ ಸರ್ಕಾರದ ಅಡ್ಡಿ, ಜನನಾಯಕ ಸಿನಿಮಾ ವಿವಾದ, ವೈಯಕ್ತಿಕ ಜೀವನದಲ್ಲಿನ ಸಮಸ್ಯೆಗಳೆಲ್ಲವನ್ನೂ ಮೆಟ್ಟಿನಿಂತ ವಿಜಯ್​ ಅಮೋಘ ಗೆಲುವಿನ ಸಂಭ್ರಮದಲ್ಲಿದ್ದಾರೆ.

ಮತವಾಗಿ ಬದಲಾದ ಅಭಿಮಾನ!: ಸದ್ಯದ ಟ್ರೆಂಡ್​ನ ಪ್ರಕಾರ, ವಿಜಯ್​​ರ ಟಿವಿಕೆ 106 ಸ್ಥಾನ, ಎಡಿಎಂಕೆ 64, ಡಿಎಂಕೆ 43, ಕಾಂಗ್ರೆಸ್​ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಸ್ಪಷ್ಟ ಬಹುಮತಕ್ಕೆ ಬೇಕಾದ 118ಕ್ಕೆ ವಿಜಯ್​​ಗೆ ಇನ್ನೂ 12 ಸ್ಥಾನಗಳು ಬೇಕಾಗಿವೆ. ವಿಜಯ್​ ಹೊರತಾಗಿ ಯಾವುದೇ ಪಕ್ಷಗಳು ದೊಡ್ಡ ಯಶಸ್ಸು ಸಾಧಿಸಿಲ್ಲ. ಟಿವಿಕೆ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಸಹಿ ಹಂಚಿ ಟಿವಿಕೆ ಕಾರ್ಯಕರ್ತರಿಂದ ಸಂಭ್ರಮ: ಇತ್ತ ಪಕ್ಷವು ಗೆಲುವು ಸಾಧಿಸುವ ಸ್ಪಷ್ಟ ಸುಳಿವು ಸಿಕ್ಕ ಬೆನ್ನಲ್ಲೇ, ಟಿವಿಕೆ ಕಾರ್ಯಕರ್ತರು ಸಿಹಿ ಹಂಚಿ ಗೆಲುವನ್ನು ಸಂಭ್ರಮಿಸುತ್ತಿದ್ದಾರೆ. ಚೆನ್ನೈನಲ್ಲಿರುವ ಟಿವಿಕೆ ಕಚೇರಿಯ ಮುಂದೆ ಭಾರೀ ಸಂಖ್ಯೆಯಲ್ಲಿ ಜಮಾಯಿಸುತ್ತಿದ್ದಾರೆ.

ವಿಜಯ್​ ಕುಟುಂಬದಲ್ಲಿ ಸಂಭ್ರಮದ ಅಲೆ: ಇತ್ತ ತಮ್ಮ ಪಕ್ಷವು ಗೆಲುವು ಸಾಧಿಸಲಿದೆ ಎಂಬುದು ತಿಳಿಯುತ್ತಿದ್ದಂತೆ, ವಿಜಯ್​ ಕುಟುಂಬದಲ್ಲಿ ಸಂಭ್ರಮದ ಅಲೆ ಎದ್ದಿದೆ. ಬಂಧುಗಳು ಎಲ್ಲರೂ ಸೇರಿಕೊಂಡು ಸೀಟಿ ಹೊಡೆಯುತ್ತಾ ಕುಣಿದಾಡುತ್ತಿರುವ ವಿಡಿಯೋ ವೈರಲ್​ ಆಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

Next Post

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ 2026

Related Posts

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ 2026
ರಾಜಕೀಯ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ 2026

May 4, 2026
78
ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!
ರಾಷ್ಟ್ರೀಯ ಸುದ್ದಿ

ರೀಲ್ಸ್​ಗಾಗಿ ಓವರ್​ಹೆಡ್​ ಟ್ಯಾಂಕ್​ ಮೇಲೆ ಹತ್ತಿ ಹೋಗುವಾಗ ಏಣಿ ಕುಸಿದು ಓರ್ವ ಸಾವು, 16 ಗಂಟೆ ಮೇಲೆಯೇ ಸಿಲುಕಿದ್ದ ಇಬ್ಬರು!

May 3, 2026
31
Next Post
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ 2026

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಫಲಿತಾಂಶ 2026

Discussion about this post

Recent News

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
2
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
21
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರ ನೂತನ ಕೃತಿ ‘ವಿಂಚ್ಣಾರ್ ಕಾಣಿಯೊ’ ಬಿಡುಗಡೆ

May 6, 2026
ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

ಸಚಿವ ಜಮೀರ್ ಮನೆಯಿಂದ 1 ಕೆ.ಜಿ 200 ಗ್ರಾಂ ಚಿನ್ನಾಭರಣ ಕಳ್ಳತನ; ಸಂಬಂಧಿ ಸೇರಿ ಇಬ್ಬರು ಸೆರೆ

May 6, 2026
ಮೇ 9 -10 ರಂದು : ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

ಮೇ 9 -10 ರಂದು : ಸುರತ್ಕಲ್ ನಲ್ಲಿ ರಾಜ್ಯಮಟ್ಟದ “ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ – 5” ಹಿರಿಯರ ಕ್ರಿಕೆಟ್ ಹಬ್ಬ

May 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d