• About us
  • Contact us
  • Disclaimer
Saturday, July 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಚಿನ್ನದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ

Coastal Times by Coastal Times
July 4, 2026
in ಕ್ರೈಮ್ ನ್ಯೂಸ್
ಮಂಗಳೂರು: ಚಿನ್ನದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ
51
VIEWS
WhatsappTelegramShare on FacebookShare on Twitter

ಪಣಂಬೂರು: ಮಹಾರಾಷ್ಟ್ರದಿಂದ ಕೇರಳದ ಪೈನ್ನೂರಿಗೆ ಕುಟುಂಬದೊಂದಿಗೆ ತೆರಳುತ್ತಿದ್ದ ವಿಕಾಸ್ ಸುಬ್ಬುರಾವ್ ಧನವಡೆ ಅವರನ್ನು ಜೂ.29ರಂದು ಅಪಹರಿಸಿ, ಕಾರು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಣಂಬೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿ ನಿವಾಸಿ ನಿಮಿಲ್ ಆರ್.ಕೆ. (37), ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವಾಗಿದ್ದ ಕೊಡಗು ಜಿಲ್ಲೆಯ ಅಕ್ಕತ್ತೂರು ನಿವಾಸಿ ಇರ್ಷಾದ್ (40) ಹಾಗೂ ಕೃತ್ಯಕ್ಕೆ ಕಾರು ಒದಗಿಸಿದ್ದ ಮಡಿಕೇರಿ ನಿವಾಸಿ ಮುಸ್ತಫ (49) ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.

ಕೇರಳದ ಪಯ್ಯನ್ನೂರಿನ ಜುವೆಲ್ಲರಿ ಉದ್ಯಮಿ ವಿಕಾಸ್ ಧನವಡೆ (44) ಅವರು ಜುಲೈ 29ರಂದು ನಸುಕಿನ ಜಾವ ಸುಮಾರು 2:45 ಗಂಟೆಗೆ ಮಹಾರಾಷ್ಟ್ರದಿಂದ ತಮ್ಮ ಕುಟುಂಬದೊಂದಿಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ-66 ಮೂಲಕ ಬರುತ್ತಿದ್ದ ವೇಳೆ, ಮಂಗಳೂರಿನ ಸುರತ್ಕಲ್ ಸಮೀಪದ ಬೈಕಂಪಾಡಿ ಜಂಕ್ಷನ್ನಲ್ಲಿ ಎರಡು ಇನ್ನೋವಾ ಹಾಗೂ ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6-7 ಜನರಿದ್ದ ಮುಸುಕುಧಾರಿಗಳು ಕಾರನ್ನು ಅಡ್ಡಗಟ್ಟಿ, ತಲವಾರು ತೋರಿಸಿ ಹಲ್ಲೆ ನಡೆಸಿ 180 ಗ್ರಾಮ್ ಚಿನ್ನಾಭರಣಗಳಿದ್ದ ಸೂಟ್ ಕೇಸನ್ನು ಕಿತ್ತುಕೊಂಡು ಕಾರು ಸಹಿತ ಪರಾರಿಯಾಗಿದ್ದರು.‌

ಕಾರಿನೊಳಗೆ ಬ್ಯಾಗಿನಲ್ಲಿರಿಸಿದ್ದ ಸುಮಾರು 180 ಗ್ರಾಂ ಚಿನ್ನಾಭರಣಗಳು (ಅಂದಾಜು ಮೌಲ್ಯ ರೂ.20 ಲಕ್ಷ), ಎರಡು ಮೊಬೈಲ್ ಫೋನ್‌ (ರೂ.10,000) ಹಾಗೂ ಕಾರು (ಅಂದಾಜು ರೂ.3 ಲಕ್ಷ) ಸೇರಿದಂತೆ ಒಟ್ಟು 23,10,000 ಮೌಲ್ಯದ ದರೋಡೆ ಮಾಡಿದ್ದರು. ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ: 84/2026  ಕಲಂ: 310(2), 311, 324(2), 137(2), 126(2)  ಭಾರತೀಯ ನ್ಯಾಯ ಸಂಹಿತೆ-2023 2(b) KPDLP Act ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.

ತನಿಖೆಯ ಸಂದರ್ಭದಲ್ಲಿ ಜುಲೈ 30ರಂದು ಬೆಳಗ್ಗೆ 11:30 ಗಂಟೆಗೆ ದರೋಡೆಕೋರರು ಚಲಾಯಿಸಿ ಹೋಗಿದ್ದ ವಿಕಾಸ್ ಧನವಡೆ ಅವರಿಗೆ ಸೇರಿದ್ದ ಮಾರುತಿ ಡಿಸೈರ್ ಕಾರು ನಂಬರ್ ಪ್ಲೇಟ್ ಇಲ್ಲದೇ ಇರುವ ಸ್ಥಿತಿಯಲ್ಲಿ ಬಂಟ್ವಾಳ ತಾಲೂಕು ಪಚ್ಚಿನಡ್ಕ ಎಂಬಲ್ಲಿ ಗುಡ್ಡ ಪ್ರದೇಶದಲ್ಲಿ ಆರೋಪಿಗಳು ಬಿಟ್ಟು ಹೋಗಿದ್ದನ್ನು ಪತ್ತೆಹಚ್ಚಿ ಪೊಲೀಸರು ವಶಕ್ಕೆ ಪಡೆದಿದ್ದರು.

ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಸಹಕರಿಸಿದ ತಲಶ್ಶೇರಿ ಜಿಲ್ಲೆಯ ಮಂಬರಮ್ ಗ್ರಾಮದ ನಿಮಿಲ್ ಆರ್.ಕೆ (37) ಎಂಬಾತನನ್ನು ಪಣಂಬೂರು ಠಾಣೆ ಪೊಲೀಸ್ ನಿರೀಕ್ಷಕ ಸಲೀಂ ಅಬ್ಬಾಸ್‌ ಮತ್ತು ಸಿಬ್ಬಂದಿ ಕೇರಳದ ಕಣ್ಣೂರು ಜಿಲ್ಲೆಯ ಚಾಲ ಎಂಬಲ್ಲಿರುವ ASTER MIMS ಆಸ್ಪತ್ರೆಯ ಹತ್ತಿರ ವಶಕ್ಕೆ ಪಡೆದಿದ್ದಾರೆ. ಪಣಂಬೂರು ಠಾಣಾ ಪಿ.ಎಸ್.ಐ ಜ್ಞಾನಶೇಖರ ಅವರು ಸಿಬ್ಬಂದಿಗಳೊಂದಿಗೆ ಆರೋಪಿತರಿಗೆ ಕೃತ್ಯ ಎಸಗಲು ಸಹಕರಿಸಿ ಆಶ್ರಯ ನೀಡಿದ ಮಡಿಕೇರಿ ತಾಲೂಕಿನ ಹಕ್ಕತ್ತೂರು ನಿವಾಸಿ ಇರ್ಷಾದ್ (40) ನನ್ನು ಪೊನ್ನಂಪೇಟೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಕೃತ್ಯಕ್ಕೆ ಸಹಕರಿಸಿ ಪ್ರಮುಖ ಆರೋಪಿತರಿಗೆ ಕಾರನ್ನು ಒದಗಿಸಿ ಆಶ್ರಯ ನೀಡಿದ ಇನ್ನೋರ್ವ ಆರೋಪಿ ಮುಸ್ತಾಫ (49) ಎಂಬಾತನನ್ನು ಮಡಿಕೇರಿ ತಾಲೂಕು ಮೂರ್ನಾಡು ಜಂಕ್ಷನ್ ನಲ್ಲಿರುವ ಲಯನ್ಸ್ ಕ್ಲಬ್ ಬಳಿಯ ಬಸ್ಸು ನಿಲ್ದಾಣದಲ್ಲಿ ವಶಕ್ಕೆ ಪಡೆದಿರುತ್ತಾರೆ.

ಪ್ರಾಥಮಿಕ ವಿಚಾರಣೆಯಿಂದ ಕೃತ್ಯದಲ್ಲಿ ಒಟ್ಟು 14 ಆರೋಪಿಗಳು ನೇರವಾಗಿ ಭಾಗಿಯಾಗಿದ್ದು ಇಬ್ಬರು ಆರೋಪಿಗಳು ಕೃತ್ಯಕ್ಕೆ ಸಹಕರಿಸಿ ಆರೋಪಿತರಿಗೆ ಆಶ್ರಯ ನೀಡಿದ ಬಗ್ಗೆ ಕಂಡುಬಂದಿದೆ. ಪ್ರಕರಣದಲ್ಲಿ ಭಾಗಿಯಾದ ಒಟ್ಟು 16 ಆರೋಪಿಗಳ ಪೈಕಿ ಮೂವರು ಆರೋಪಿಗಳನ್ನು ಬಂಧಿಸಿ ಜುಲೈ 3ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಹತ್ತು ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಪ್ರಮುಖ  ಆರೋಪಿಗಳ  ಸಹಿತ ಒಟ್ಟು 13 ಆರೋಪಿಗಳ ಪ್ತತೆಗೆ ಬಾಕಿ ಇರುತ್ತದೆ. ಆರೋಪಿಗಳು ಕೃತ್ಯಕ್ಕೆ  ಬಳಸಿದ್ದ 04 ಕಾರುಗಳ ಪೈಕಿ ಒಂದು ಇನ್ನೋವಾ ಕ್ರಿಸ್ಟಾ ಕಾರನ್ನು ಸ್ವಾಧೀಪಡಿಸಿದ್ದು, ಉಳಿದ 03 ಕಾರುಗಳು ಮತ್ತು ದರೋಡೆ ಮಾಡಿರುವ 180 ಗ್ರಾಂ  ಚಿನ್ನಾಭರಣ ಹಾಗೂ 2 ಮೊಬೈಲ್ ಫೋನ್ ಪತ್ತೆಗೆ ಬಾಕಿ ಇರುತ್ತದೆ. ಆರೋಪಿಗಳೆಲ್ಲರೂ ಮಡಿಕೇರಿ ಜಿಲ್ಲೆ ಮತ್ತು ಕೇರಳ ರಾಜ್ಯದವರೆಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿರುತ್ತದೆ.

ಪತ್ತೆ ಕಾರ್ಯದಲ್ಲಿ ಉತ್ತರ ವಿಭಾಗದ ಎಸಿಪಿ ಶ್ರೀಕಾಂತ ಕೆ.  ಮತ್ತು ಮಂಗಳೂರು ನಗರದ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ಅವರ ನೇತೃತ್ವದಲ್ಲಿ ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಸಲೀಂ ಅಬ್ಬಾಸ್, ಪಣಂಬೂರು ಪೊಲೀಸ್ ಠಾಣೆ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ,  ಜ್ಞಾನಶೇಖರ ಹಾಗೂ ಕಾವೂರು, ಮುಲ್ಕಿ ,ಕಂಕನಾಡಿ, ಉರ್ವ ಠಾಣೆಗಳ ಹಾಗು ಸಿಸಿಬಿ ಘಟಕದ ಪಿಎಸ್ಐ ಗಳು ಮತ್ತು   ಸಿಬ್ಬಂದಿಗಳು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

Related Posts

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ
ಕ್ರೈಮ್ ನ್ಯೂಸ್

ಮುಂಬೈನಿಂದ ಕೇರಳಕ್ಕೆ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಚಿನ್ನದ ವ್ಯಾಪಾರಿಯನ್ನು ಪಣಂಬೂರು ಬಳಿ ಕಾರು ಅಡ್ಡಗಟ್ಟಿ ದರೋಡೆ

June 29, 2026
1.6k
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
59

Discussion about this post

Recent News

ಮಂಗಳೂರು: ಚಿನ್ನದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು: ಚಿನ್ನದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ

July 4, 2026
51
ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

July 2, 2026
71
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಚಿನ್ನದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು: ಚಿನ್ನದ ಉದ್ಯಮಿ ಕಾರು ಅಡ್ಡಗಟ್ಟಿ ದರೋಡೆ ಪ್ರಕರಣ : ಮೂವರು ಆರೋಪಿಗಳ ಬಂಧನ

July 4, 2026
ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

ಕಾಸರಗೋಡು: ಶಾಲಾ ಮೈದಾನದಲ್ಲಿ ‘ಆಪರೇಷನ್ ತೂಫಾನ್’ ಕಾರ್ ರೇಸಿಂಗ್ ; ತಡೆಯಲು ಬಂದ ಪೊಲೀಸರ ಮೇಲೆ ಹಲ್ಲೆ , 6 ಕಾರುಗಳು ವಶಕ್ಕೆ, ಹಲವು ಯುವಕರ ಬಂಧನ

July 2, 2026
114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

114 ವರ್ಷಗಳ ಸೇವೆಯ ಸಂಭ್ರಮದಲ್ಲಿ ದೇರಳಕಟ್ಟೆಯಲ್ಲಿ MCC ಬ್ಯಾಂಕ್‌ನ 22ನೇ ಶಾಖೆ ಉದ್ಘಾಟನೆ

July 2, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d