• About us
  • Contact us
  • Disclaimer
Wednesday, February 4, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗುವನ್ನು ಶಿರ್ವದ ಮಕ್ಕಳಾಗದ ದಂಪತಿಗೆ ಮಾರಾಟ, ವೈದ್ಯ ಸೇರಿ ಮೂವರ ಬಂಧನ

Coastal Times by Coastal Times
September 4, 2025
in ಕ್ರೈಮ್ ನ್ಯೂಸ್
ಮಂಗಳೂರು: ಅತ್ಯಾಚಾರ ಸಂತ್ರಸ್ಥೆಯ ಮಗುವನ್ನು ಶಿರ್ವದ ಮಕ್ಕಳಾಗದ ದಂಪತಿಗೆ ಮಾರಾಟ, ವೈದ್ಯ ಸೇರಿ ಮೂವರ ಬಂಧನ
82
VIEWS
WhatsappTelegramShare on FacebookShare on Twitter

ಉಡುಪಿ, ಸೆ.4 : ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಿಂದ ಕಾನೂನುಬಾಹಿರವಾಗಿ ನವಜಾತ ಶಿಶುವನ್ನು ಮಾರಾಟ ಮಾಡಿರುವ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದಾರೆ. ಕೃತ್ಯದಲ್ಲಿ ಶಾಮೀಲಾಗಿರುವ ವೈದ್ಯ, ಮಧ್ಯವರ್ತಿ ಮಹಿಳೆ ಮತ್ತು ಅತ್ಯಾಚಾರ ಮಾಡಿ ಮಗುವಿನ ಜನನಕ್ಕೆ ಕಾರಣವಾಗಿದ್ದ ವ್ಯಕ್ತಿಯ ಸಹಿತ ಮೂವರನ್ನು ಬಂಧಿಸಲಾಗಿದ್ದು, ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡ್‌ ನಲ್ಲಿ ಕ್ಲಿನಿಕ್ ಹೊಂದಿರುವ ವೈದ್ಯ ಡಾ.ಸೋಮೇಶ್ ಸೊಲೊಮನ್, ಮಧ್ಯವರ್ತಿ ವಿಜಯಲಕ್ಷ್ಮೀ ಹಾಗೂ ನವನೀಶ್ ನಾರಾಯಣ ಬಂಧಿತ ಆರೋಪಿಗಳು.

ಶಿರ್ವ ಠಾಣೆ ವ್ಯಾಪ್ತಿಯ 92ನೇ ಹೇರೂರು ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪ್ರಭಾವತಿ ಮತ್ತು ರಮೇಶ್ ಮೂಲ್ಯ ದಂಪತಿ ತಮಗೆ ಮಕ್ಕಳಾಗದ ಕಾರಣ ಮಧ್ಯವರ್ತಿ ಮೂಲಕ ಮಂಗಳೂರಿನ ಆಸ್ಪತ್ರೆಯಲ್ಲಿ ಜನಿಸಿದ್ದ 4 ದಿನದ ಶಿಶುವನ್ನು 4.50 ಲಕ್ಷ ರೂ. ನೀಡಿ ಖರೀದಿಸಿದ್ದರು ಎನ್ನಲಾಗಿದೆ. ದಂಪತಿ ಆ ಮಗುವನ್ನು ಪೋಷನ್ ಟ್ರ್ಯಾಕರ್‌ನಲ್ಲಿ ರಿಜಿಸ್ಟ‌ರ್ ಮಾಡಲು ತಮ್ಮೂರಿನ ಅಂಗನವಾಡಿಗೆ ತೆರಳಿದ್ದು, ಆ ಸಂದರ್ಭ ದಂಪತಿಗೆ ಮಗು ಇಲ್ಲದಿರುವುದು ಗೊತ್ತಿದ್ದ ಅಂಗನವಾಡಿ ಕಾರ್ಯಕರ್ತೆ ಈ ಬಗ್ಗೆ ವಿಚಾರಿಸಿದಾಗ ಮಂಗಳೂರಿನ ಆಸ್ಪತ್ರೆಯల్లి ಅವಿವಾಹಿತ ಮಹಿಳೆಗೆ ಹೆರಿಗೆಯಾಗಿದ್ದು ಅವರಿಗೆ ಹಣ ನೀಡಿ ಆಸ್ಪತ್ರೆಯ ಮುಖಾಂತರ ಇದೆ ಮಗುವನ್ನು ಪಡೆದಿರುವುದಾಗಿ ತಿಳಿಸಿದ್ದರು.

ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಶಿರ್ವ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ದಂಪತಿಯ ಮನೆಗೆ ತೆರಳಿ ವಿಚಾರಿಸಿದಾಗ ಪ್ರಭಾವತಿ ನಿಜ ವಿಷಯ ತಿಳಿಸಿದ್ದಾರೆ. ತನ್ನ ಚಿಕ್ಕಮ್ಮನ ಮಗಳು ಅವಿವಾಹಿತ ಮಹಿಳೆ ಮಗುವಿಗೆ ಜನ್ಮ ನೀಡಿರುವ ವಿಷಯ ತಿಳಿದು ವಿಜಯಲಕ್ಷ್ಮೀ ಎಂಬವರ ಮಾತುಕತೆ ಮಾಡಿ ಹಣ ನೀಡಿ ಮಗುವನ್ನು ಪಡೆದಿರುವುದಾಗಿ ತಿಳಿಸಿದ್ದರು.‌

ಮಗು ಮಾರಾಟ ಜಾಲದ ಬೆನ್ನತ್ತಿದ ಪೊಲೀಸರು, ವೈದ್ಯ ಡಾ.ಸೋಮೇಶ್ ಸೋಲೊಮನ್, ವಿಜಯಲಕ್ಷ್ಮೀ ಹಾಗೂ ನವನೀತ್ ನಾರಾಯಣ ಎಂಬವರನ್ನು ಬಂಧಿಸಿದ್ದಾರೆ. ಆರೋಪಿ ಮಹಿಳೆ ವಿಜಯಲಕ್ಷ್ಮೀ ಮಂಗಳೂರಿನ ಆಸ್ಪತ್ರೆಯ ಬಳಿ ಪೇಯಿಂಗ್ ಗೆಸ್ಟ್ ಹೊಂದಿದ್ದು, ಆಸ್ಪತ್ರೆಯಲ್ಲಿ ಕ್ಯಾಂಟೀನ್ ಕೂಡ ನಡೆಸುತ್ತಿದ್ದಾರೆ. ಅವರ ಬಳಿ ಕೆಲಸ ಮಾಡಿಕೊಂಡಿದ್ದ ಮಹಿಳೆಯೊಬ್ಬಳ 22 ವರ್ಷದ ಮಾನಸಿಕ ಸಮಸ್ಯೆಯಿದ್ದ ಮಗಳು ಅತ್ಯಾಚಾರ ಸಂತ್ರಸ್ತೆಯಾಗಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಕಾರಣ ಅವಳನ್ನೂ ಅಲ್ಲಿಗೆ ಕರೆತಂದಿದ್ದರು. ನಾಲ್ಕು ತಿಂಗಳ ಬಳಿಕದ ಗರ್ಭಿಣಿಯ ಸ್ಕ್ಯಾನಿಂಗ್ ಸಹಿತ ಇತರ ಪರೀಕ್ಷೆಯನ್ನು ಶಿರ್ವದ ಪ್ರಭಾವತಿಯ ಹೆಸರಿನಲ್ಲೇ ನಡೆಸಿ, ಆಕೆಯ ಆಧಾರ್ ಕಾರ್ಡ್ ನೀಡಿ ಆಕೆಯದ್ದೇ ಮಗುವೆಂದು ಬಿಂಬಿಸಲಾಗಿತ್ತು.

ಮಗುವಿನ ಜನನದ ನಾಲ್ಕು ದಿನದ ಬಳಿಕ ದಂಪತಿ ಮಗುವನ್ನು ಶಿರ್ವಕ್ಕೆ ಕರೆತಂದಿದ್ದು, ಅಂಗನವಾಡಿಗೆ ದಾಖಲಾತಿಗೆ ಹೋಗಿದ್ದರಿಂದ ವಿಷಯ ಬಹಿರಂಗವಾಗಿತ್ತು. ಆರೋಪಿ ನವನೀತ್ ನಾರಾಯಣ ಮಾನಸಿಕ ವೈಕಲ್ಯದ ಯುವತಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹನಿಟ್ರ್ಯಾಪ್ ಜಾಲವೊಂದನ್ನು ಬೇಧಿಸಿದ ಕುಂದಾಪುರ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಸೆರೆ

Next Post

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಜೈಲಿನಿಂದ ಬಿಡುಗಡೆ

Related Posts

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು
ಕ್ರೈಮ್ ನ್ಯೂಸ್

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
33
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
44
Next Post
ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ಮೈಸೂರಿನಲ್ಲಿ ಪೊಲೀಸ್‌ ವಶಕ್ಕೆ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಜೈಲಿನಿಂದ ಬಿಡುಗಡೆ

Discussion about this post

Recent News

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
9
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
33
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

ತೀವ್ರ ರಕ್ತದೊತ್ತಡ ; ಮಂಗಳೂರು ಸಿಎಆರ್ ಹೆಡ್ ಕಾನ್ಸ್ ಟೇಬಲ್ ಕುಸಿದು ಬಿದ್ದು ಸಾವು

February 3, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d