ಬೆಳ್ತಂಗಡಿ : ಕಾಂತಾರ ಸಿನಿಮಾ ರೀತಿಯಲ್ಲಿ ‘ಪಂಜುರ್ಲಿ’ ದೈವದ ವೇಷ ಧರಿಸಿ ಇನ್ಸ್ಟಾ ಗ್ರಾಂನಲ್ಲಿ ರೀಲ್ಸ್ ಮಾಡಿ ತುಳುನಾಡಿದ ಜನರ ಆಕ್ರೋಶಕ್ಕೆ ಗುರಿಯಾಗಿದ್ದ ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳ ಕ್ಷೇತ್ರಕ್ಕೆ ಬಂದು ಕ್ಷಮೆಯಾಚಿಸಿದ್ದಾರೆ.
ವರಹಾ ರೂಪಂ ಹಾಡಿಗೆ ರೀಲ್ಸ್ ಮಾಡಲು ಯುವತಿ ಪಂಜುರ್ಲಿ ದೈವದಂತೆ ಬಣ್ಣ ಹಚ್ಚಿ, ವೇಷ ಧರಿಸಿದ್ದರು. ಬಳಿಕ ರೀಲ್ಸ್ ಮಾಡಿ ಇನ್ಸ್ಟಾ ಗ್ರಾಂನಲ್ಲಿ ಪೋಸ್ಟ್ ಮಾಡಿದ್ದರು. makeoverbyshwetha.s_reddy ಎಂಬ ಇನ್ಸ್ಟಾ ಖಾತೆಯಲ್ಲಿ ಮೂರು ವಿಡಿಯೊಗಳನ್ನು ಹಾಕಲಾಗಿತ್ತು. ಎರಡರಲ್ಲಿ ವರಾಹ ರೂಪಂ ಹಾಡಿನ ನೃತ್ಯದ ಸನ್ನಿವೇಶವಗಳಿದ್ದರೆ, ಮತ್ತೊಂದರಲ್ಲಿ ಮೇಕಪ್ ಮಾಡುವ ದೃಶ್ಯಗಳಿದ್ದವು.ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದ್ದಂತೆ ಅನೇಕರು ಯುವತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಕೆಲವರು ‘ಈಕೆಯನ್ನು ಧರ್ಮಸ್ಥಳ ಮಂಜುನಾಥನೇ ನೋಡಿಕೊಳ್ಳಲಿ’ ಎಂದು ಹೇಳಿದ್ದರು.
ಜನ ಆಕ್ರೋಶಗೊಂಡಿದ್ದರಿಂದ ಯುವತಿ ತಕ್ಷಣ ತನ್ನ ರೀಲ್ಸ್ ಅನ್ನು ಡಿಲೀಟ್ ಮಾಡಿ ಮಂಜುನಾಥ ಸ್ವಾಮಿಗೆ ಕ್ಷಮೆ ಕೇಳುವುದಾಗಿ ಹೇಳಿದ್ದರು. ಸದ್ಯ ಯುವತಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ತಪ್ಪು ಕಾಣಿಕೆ ಸಲ್ಲಿಸಿ ಬಳಿಕ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಕ್ಷಮೆ ಯಾಚಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post