• About us
  • Contact us
  • Disclaimer
Friday, February 27, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲಿ ಯುವತಿಯ ಬರ್ಬರ ಹತ್ಯೆ, ಆರೋಪಿ ರಫೀಕ್ ಶವ ಕಾಡಿನಲ್ಲಿ ಪತ್ತೆ !

Coastal Times by Coastal Times
January 5, 2026
in ಕ್ರೈಮ್ ನ್ಯೂಸ್
ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲಿ ಯುವತಿಯ ಬರ್ಬರ ಹತ್ಯೆ, ಆರೋಪಿ ರಫೀಕ್ ಶವ ಕಾಡಿನಲ್ಲಿ ಪತ್ತೆ !
92
VIEWS
WhatsappTelegramShare on FacebookShare on Twitter

ಉತ್ತರ ಕನ್ನಡ ಜಿಲ್ಲೆ: ಯಲ್ಲಾಪುರ ನಗರದ ಕಾಳಮ್ಮ ನಗರದ ಆಶ್ರಯ ಬಡಾವಣೆಯ ನಿವಾಸಿ ಮದುವೆಗೆ ನಿರಾಕರಿಸಿದ ವಿಚ್ಛೇದಿತ ಮಹಿಳೆ ರಂಜಿತಾ ಎಂಬವರನ್ನು  ರಸ್ತೆ ಮಧ್ಯೆಯೇ ಶನಿವಾರ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರೋಪಿಯನ್ನ ರಫೀಕ್ ಎಂದು ಗುರುತಿಸಿದ್ದು ಆತ ತಲೆಮರೆಸಿಕೊಂಡಿದ್ದ. ಪೊಲೀಸರು ಶ್ವಾನದಳದ ಸಹಾಯದಿಂದ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಅರಣ್ಯದಲ್ಲಿ ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ.

“ಮೃತಳ ಸಹೋದರಿ ಅಕ್ಷತಾ ಮಲ್ಲಪ್ಪ ಬನಸೋಡೆ ಅವರು ಪೊಲೀಸರಿಗೆ ದೂರು ನೀಡಿದ್ದರು. ರಂಜಿತಾ ಅವರಿಗೆ ಕಳೆದ ಸುಮಾರು 12 ವರ್ಷಗಳ ಹಿಂದೆ ಸಚೀನ ಕಾಟೇರ ಎಂಬವರೊಂದಿಗೆ ಮದುವೆ ಆಗಿತ್ತು. 10 ವರ್ಷದ ಮಗ ಇದ್ದಾನೆ. ಗಂಡನ ಜೊತೆ ಹೊಂದಾಣಿಕೆ ಆಗದೇ ಸುಮಾರು 4-5 ವರ್ಷಗಳಿಂದ ಮನೆಯವರೊಂದಿಗೆ ವಾಸವಿದ್ದರು. ಬಳಿಕ ವಿಚ್ಛೇದನ ಪಡೆದಿದ್ದರು. ರಂಜಿತಾ ರಾಮಪುರ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡಿಕೊಂಡಿದ್ದರು. ರಫೀಕ್ ಇಮಾಮ್‌ ಸಾಬ ಯಳ್ಳೂರ ಎಂಬವ ರಂಜಿತಾರ ಕ್ಲಾಸ್‌ಮೇಟ್ ಆಗಿದ್ದ. ಆಗಾಗ ಮನೆಗೆ ಬಂದು ಹೋಗುತ್ತಿದ್ದ. ಫೋನ್‌ನಲ್ಲಿ ಇಬ್ಬರೂ ಮಾತನಾಡುತ್ತಿದ್ದರು. ರಫಿಕ್​ ನನ್ನನ್ನು ಮದುವೆಯಾಗು ಎಂದು ರಂಜಿತಾ ಅವರಿಗೆ ಹೇಳಿದಾಗ ಆಕೆ ಸಂಪರ್ಕ ನಿಲ್ಲಿಸಿದ್ದರು ಎಂದು ಸಹೋದರಿ ದೂರಿನಲ್ಲಿ ತಿಳಿಸಿದ್ದಾರೆ. ರಫೀಕ್ ದ್ವೇಷ ಸಾಧಿಸಿ ರಂಜಿತಾ ಕೆಲಸ ಮುಗಿಸಿ ಮನೆಗೆ ಬರುವ ದಾರಿಯಲ್ಲಿ ಅಡ್ಡಗಟ್ಟಿ ಹರಿತ ಆಯುಧದಿಂದ ಕುತ್ತಿಗೆ ಕೊಯ್ದಿದ್ದಾನೆ. ನಂತರ ಆಕೆಯ ಅಣ್ಣ, ನಾದಿನಿ ಎಲ್ಲರೂ ಸೇರಿ ಆಸ್ಪತ್ರೆಗೆ ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್​ಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟರು” ಎಂದು ತಿಳಿಸಿದರು.

ಶನಿವಾರ ಘಟನೆ ನಡೆದ ಬಳಿಕ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ವಿಳಂಬವಾಗಿದೆ ಎಂದು ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಇತ್ತ, ಹಿಂದೂ ಯುವತಿಯನ್ನು ಬರ್ಬರವಾಗಿ ಹತ್ಯೆಗೈದಿರುವುದನ್ನು ಖಂಡಿಸಿ ವಿಎಚ್‌ಪಿ ಸಂಘಟನೆ ಯಲ್ಲಾಪುರದಲ್ಲಿ ಇಂದು ಬಂದ್‌ಗೆ ಕರೆ ನೀಡಿತ್ತು. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್‌ಗೆ ಬೆಂಬಲಿಸುವಂತೆ ಮನವಿ ಮಾಡಲಾಗಿತ್ತು. ಪಟ್ಟಣದ ಬಸವೇಶ್ವರ ಸರ್ಕಲ್‌ನಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು. ಆರೋಪಿ ಬಂಧಿಸುವ ವರೆಗೂ ರಂಜಿತಾಳ ಅಂತ್ಯಕ್ರಿಯೆ ಮಾಡುವುದಿಲ್ಲ ಎಂದು ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದ್ದವು. ಆದರೆ, ಈ ಬೆಳವಣಿಗೆಗಳ ನಡುವೆಯೇ ಆರೋಪಿ ರಫೀಕ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಿಹಾರದಿಂದ ರೈಲು ಮೂಲಕ ಮಂಗಳೂರಿಗೆ ಗಾಂಜಾ ತಂದು ಮಾರಾಟ ; ಬಜಪೆಯಲ್ಲಿ ಇಬ್ಬರ ಸೆರೆ

Next Post

ಸುಳ್ಯ: ತಾಯಿ, ಮಗುವಿನ ಮೃತ ದೇಹ ಕೆರೆಯಲ್ಲಿ ಪತ್ತೆ: ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ತಂದೆ- ತಾಯಿ ಪೊಲೀಸರಿಗೆ ದೂರು

Related Posts

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
36
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ
ಕ್ರೈಮ್ ನ್ಯೂಸ್

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
9
Next Post
ಸುಳ್ಯ: ತಾಯಿ, ಮಗುವಿನ ಮೃತ ದೇಹ ಕೆರೆಯಲ್ಲಿ ಪತ್ತೆ: ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ತಂದೆ- ತಾಯಿ ಪೊಲೀಸರಿಗೆ ದೂರು

ಸುಳ್ಯ: ತಾಯಿ, ಮಗುವಿನ ಮೃತ ದೇಹ ಕೆರೆಯಲ್ಲಿ ಪತ್ತೆ: ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ತಂದೆ- ತಾಯಿ ಪೊಲೀಸರಿಗೆ ದೂರು

Discussion about this post

Recent News

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
36
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

ಅಮೆರಿಕನ್ ಕಮೊಡಿಟೀಸ್‌ ಹೆಸರಿನಲ್ಲಿ ಹೂಡಿಕೆ ; ಮಂಗಳೂರಿನ ಹಿರಿಯ ವ್ಯಕ್ತಿಗೆ 1.77 ಕೋಟಿ ರೂ. ಆನ್‌ಲೈನ್ ವಂಚನೆ

February 27, 2026
ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

ಮಂಗಳೂರು: ವಿದ್ಯಾರ್ಥಿಗೆ ಹಲ್ಲೆಗೈದು ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ

February 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d