• About us
  • Contact us
  • Disclaimer
Wednesday, January 7, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹೃದಯಾಘಾತದಿಂದ ಮಹಾಲಿಂಗಪುರದ ಪ್ರವಚನಕಾರ ಪದ್ಮಶ್ರೀ ಇಬ್ರಾಹಿಂ ಸುತಾರ ಇನ್ನಿಲ್ಲ

Coastal Times by Coastal Times
February 5, 2022
in ರಾಜ್ಯ
ಹೃದಯಾಘಾತದಿಂದ ಮಹಾಲಿಂಗಪುರದ ಪ್ರವಚನಕಾರ  ಪದ್ಮಶ್ರೀ ಇಬ್ರಾಹಿಂ ಸುತಾರ ಇನ್ನಿಲ್ಲ
7
VIEWS
WhatsappTelegramShare on FacebookShare on Twitter

ಬಾಗಲಕೋಟೆ: ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯ ಕಂಪು ಪಸರಿಸಿದ್ದ ಕೃಷ್ಣೆಯ ನಾಡಿನ ಕಬೀರ, ಮಹಾಲಿಂಗಪುರದ ಇಬ್ರಾಹಿಂ ಸುತಾರ ಇನ್ನಿಲ್ಲ.  ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.

ಕೋಮು ದ್ವೇಷ, ಜಾತಿ–ಧರ್ಮದ ಅಮಲು ಮಾನವತೆಯನ್ನು ಮಂಕಾಗಿಸಿರುವ ವಿಪ್ಲವದ ಈ ದಿನಗಳಲ್ಲಿ ಜನಸಾಮಾನ್ಯರ ನಡುವಿದ್ದ ಈ ಕಬೀರ ದಿಢೀರನೆ ಕಣ್ಮರೆಯಾಗಿದ್ದಾರೆ. 

ಮಹಾಲಿಂಗಪುರದಲ್ಲಿ ಬಡಗಿ ವೃತ್ತಿ ಮಾಡುತ್ತಿದ್ದ ನಬಿಸಾಹೇಬ್ ಹಾಗೂ ಅಮೀನಾಬಿ ದಂಪತಿ ಪುತ್ರ ಇಬ್ರಾಹಿಂ ಸುತಾರ (ಜನ್ಮ ದಿನ: ಮೇ 10, 1940) ಅವರಿಗೆ ಮನೆಯಲ್ಲಿನ ಬಡತನದ ಪರಿಸ್ಥಿತಿ ಓದಲು ಉತ್ತೇಜಕವಾಗಿರಲಿಲ್ಲ. ಮೂರನೇ ತರಗತಿಗೆ ಶಿಕ್ಷಣ ಅಪೂರ್ಣಗೊಂಡಿತು. ಊರಿನ ಬಹುಸಂಖ್ಯಾತರ ಉದ್ಯೋಗ ನೇಕಾರಿಕೆಯನ್ನೇ ಸುತಾರ ಕಲಿತರು. ಬದುಕಿಗೆ ಅದೇ ದಾರಿಯಾಯಿತು.

ಬಾಲ್ಯದಲ್ಲಿ ಮಸೀದಿಗೆ ಹೋಗಿ ಅಲ್ಲಿ ಧರ್ಮಗುರುಗಳ ಮಾರ್ಗದರ್ಶನದಲ್ಲಿ ನಮಾಜು, ಪ್ರಾರ್ಥನೆ ಕಲಿತು ಕುರಾನ್ ಅಧ್ಯಯನ ಮಾಡಿದರು. ಈ ವೇಳೆ ಬೇರೆ ಧರ್ಮಗಳ ಸಾರ ಅರಿಯುವ ಆಶಯ ಮೊಳಕೆಯೊಡೆಯಿತು. ಅದಕ್ಕೆ ಊರಿನ ಸಾಧುನ ಗುಡಿಯಲ್ಲಿದ್ದ ಭಜನಾ ಸಂಘ ಒತ್ತಾಸೆ ನೀಡಿತು. ಅಲ್ಲಿನ ಧಾರ್ಮಿಕರ ಸಾಂಗತ್ಯದಲ್ಲಿ ತತ್ವಪದ, ವಚನಗಳನ್ನು ಕಲಿತರು. ಉಪನಿಷತ್ತಿನ ಸಾರ ಅರಿತುಕೊಂಡರು. ರಮ್ಜಾನ್ ವೇಳೆ ಮುಂಜಾನೆ ಜನರನ್ನು ಎಬ್ಬಿಸಲು ಹಳ್ಳಿಗಳಿಗೆ ಹಾಡುತ್ತಾ ಹೋಗುತ್ತಿದ್ದ ತಂಡದಲ್ಲಿ ಸಂಚರಿಸಿ ಜೀವನಾನುಭವ ಪಡೆದುಕೊಂಡ ಅವರು, ಮಹಾಲಿಂಗಪುರದಲ್ಲಿ ಬಸವಾನಂದ ಸ್ವಾಮಿಗಳ ಪುಣ್ಯಾರಾಧನೆ ನಿಮಿತ್ತ ಪ್ರತಿ ವರ್ಷ ಒಂದು ತಿಂಗಳು ಕಾಲ ಬೆಳಿಗ್ಗೆ ಹಾಗೂ ಸಂಜೆ ನಡೆಯುತ್ತಿದ್ದ ಪ್ರವಚನ ಕೇಳುತ್ತಿದ್ದರು. ‘ಅಲ್ಲಿನ ಧಾರ್ಮಿಕ ಚಿಂತನೆಗಳು ನನ್ನಲ್ಲಿನ ತಿಳಿವಳಿಕೆ ವಿಸ್ತರಿಸಲು ನೆರವಾಯಿತು’ ಎಂದು ಸುತಾರ ಸ್ಮರಿಸಿಕೊಳ್ಳುತ್ತಿದ್ದರು

‘ದೇವರು, ಧರ್ಮ, ಆರಾಧನೆಯ ವಿಧಾನ ಬೇರೆ ಬೇರೆಯಾದರೂ ಸತ್ಯ ಒಂದೇ ಎಂಬ ಸಂಗತಿ ಅರಿವಿಗೆ ಬಂದಿತು. ಜೊತೆಗೆ ತತ್ವಪದಗಳ ಅರಿವು, ನಿಜಗುಣ ಶಿವಯೋಗಿಗಳ ಶಾಸ್ತ್ರ, ಭಗವದ್ಗೀತೆಯ ಅಧ್ಯಯನ ಭವದ ಅರಿವು ವಿಸ್ತಾರಗೊಳಿಸಿತು’ ಎಂದು ವಿನಮ್ರವಾಗಿ ಹೇಳುತ್ತಿದ್ದರು.

‘1970ರಲ್ಲಿ ಸಾಧುನ ಗುಡಿಯಲ್ಲಿಯೇ ಸಮಾನ ಮನಸ್ಕ ಗೆಳೆಯರು ಸೇರಿ ‘ಭಾವೈಕ್ಯದ ಜನಪದ ಸಂಗೀತ ಮೇಳ’ ಆರಂಭಿಸಿದ್ದರು. ಅದರ ಮೂಲಕ ಭಜನೆ, ತತ್ವಪದಗಳ ಹಾಡುತ್ತಾ ಜನಸಾಮಾನ್ಯರಿಗೆ ಧರ್ಮದ ಸಾರ ಮನವರಿಕೆ ಮಾಡತೊಡಗಿದರು. 1980ರಲ್ಲಿ ತರೂರಿನ ಶಂಭುಲಿಂಗ ಶಾಸ್ತ್ರಿಗಳು ಮೊದಲ ಬಾರಿಗೆ ಮಹಾರಾಷ್ಟ್ರದ ಜತ್ ತಾಲ್ಲೂಕಿನ ಸಿಂಧೂರಿನಲ್ಲಿ (ವೀರ ಸಿಂಧೂರ ಲಕ್ಷ್ಮಣನ ಹುಟ್ಟೂರು) ಶ್ರಾವಣ ಮಾಸದಲ್ಲಿ ತಿಂಗಳ ಕಾಲ ಪ್ರವಚನ ಮಾಡುವ ಕಾರ್ಯಕ್ಕೆ ಸುತಾರ ಅವರನ್ನು ಕಳುಹಿಸಿದ್ದರು. ಮಹಾರಾಷ್ಟ್ರದಲ್ಲಿನ ಕನ್ನಡ ನೆಲದಲ್ಲಿ ಭಾವೈಕ್ಯತೆ ಹರಡುವ ಚೈತ್ರ ಯಾತ್ರೆ ಸುತಾರ ಆರಂಭಿಸಿದ್ದರು. ಅಲ್ಲಿಂದ ಪ್ರತಿ ವರ್ಷ ನಾಡಿನ ಉದ್ದಗಲಕ್ಕೂ ಪ್ರವಚನ, ಸಂವಾದ ಕಾರ್ಯಕ್ರಮ ನಡೆಸಿಕೊಂಡು ಬಂದಿದ್ದರು.

ಧರ್ಮದ ಕಠಿಣ ಅಂಶಗಳನ್ನು ಸರಳವಾಗಿ ಜನಸಾಮಾನ್ಯರಿಗೆ ತಿಳಿಯುವಂತೆ ಮಾಡಲು ಪ್ರಶ್ನೋತ್ತರದ ಜೊತೆಗೆ ತತ್ವಪದ ಹಾಡುವುದನ್ನು ರೂಢಿಸಿಕೊಂಡಿದ್ದರು. ಮಹಾಲಿಂಗಪುರದಲ್ಲಿಯೇ ಬದುಕಿನ ಸಂಧ್ಯಾಕಾಲ ಕಳೆಯುತ್ತಿದ್ದ ಸುತಾರ ಅವರಿಗೆ ನಾಲ್ಕು ವರ್ಷಗಳ ಹಿಂದೆ (2018 ಏಪ್ರಿಲ್ 2) ಕೇಂದ್ರ ಸರ್ಕಾರ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಿತ್ತು. 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಮವಸ್ತ್ರ ಕಡ್ಡಾಯ ; ಹಿಜಾಬ್ ,ಕೇಸರಿ ಶಾಲು, ಧರಿಸಲು ಅವಕಾಶ ಇಲ್ಲ: ರಾಜ್ಯ ಸರ್ಕಾರ ಖಡಕ್ ಸೂಚನೆ

Next Post

‘ಅಥರ್ವ’ ರೂಪದಲ್ಲಿ ಎಂಎಸ್ ಧೋನಿ; ಫಸ್ಟ್ ಲುಕ್ ನೋಡಿ ಅಭಿಮಾನಿಗಳಿಗೆ ಆಶ್ಚರ್ಯ

Related Posts

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
16
ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ
ರಾಜ್ಯ

ಮೈಸೂರಿನಲ್ಲಿ ಹಾಡಹಗಲೇ ಗನ್​ ತೋರಿಸಿ 4 ರಿಂದ 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ

December 29, 2025
19
Next Post
‘ಅಥರ್ವ’ ರೂಪದಲ್ಲಿ ಎಂಎಸ್ ಧೋನಿ; ಫಸ್ಟ್ ಲುಕ್ ನೋಡಿ ಅಭಿಮಾನಿಗಳಿಗೆ ಆಶ್ಚರ್ಯ

‘ಅಥರ್ವ’ ರೂಪದಲ್ಲಿ ಎಂಎಸ್ ಧೋನಿ; ಫಸ್ಟ್ ಲುಕ್ ನೋಡಿ ಅಭಿಮಾನಿಗಳಿಗೆ ಆಶ್ಚರ್ಯ

Discussion about this post

Recent News

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

January 7, 2026
2
ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

January 7, 2026
90
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮಂಗಳೂರು: ಬಿಕರ್ನಕಟ್ಟೆಯ ಇನ್ಫೆಂಟ್ ಜೀಸಸ್ ದೇಗುಲದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

January 7, 2026
ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

ರೌಡಿಶೀಟರ್​​ ಕೈ ಮುರಿದು, ಕಣ್ಣಿಗೆ ಚಾಕು ಇರಿದ ಮೊದಲ ಪತ್ನಿ

January 7, 2026
‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

‘ಸಹಕಾರ ರತ್ನ’ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಗೆ ಅಮೆರಿಕದ ಪೆನ್ಸಿಲ್ವೇನಿಯಾ ವಿವಿಯಿಂದ ‘ವಿಷನರಿ ಲೀಡರ್‌ಶಿಪ್ ಅವಾರ್ಡ್’ ಗೌರವ

January 7, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d