ಪುತ್ತೂರು: ದೇಯಿ ಬೈದ್ಯೆತಿ – ಕೋಟಿ ಚೆನ್ನಯರ ಮೂಲಸ್ಥಾನವಾದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ನಂದನ ಬಿತ್ತಿಲು ಕ್ಷೇತ್ರದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಶುಕ್ರವಾರ ಬೆಳಿಗ್ಗೆ ಆರಂಭಗೊಂಡಿತು.
ಮೂಡುಬಿದಿರೆಯ ಶಿವಾನಂದ ಶಾಂತಿ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳು ನಡೆದವು. ಕ್ಷೇತ್ರದಲ್ಲಿ ಮಾ.6ರವರೆಗೆ ನಡೆಯುವ ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ದೇಯಿ ಬೈದ್ಯೆತಿ – ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಪಿತಾಂಬರ ಹೆರಾಜೆ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ ಉದ್ಘಾಟಿಸಿದರು.
ಸಮಿತಿಯ ಗೌರವ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ,ಉಪಾಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ನಿತ್ಯಾನಂದ ಡಿ.ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ, ಕಾರ್ಯದರ್ಶಿ ಮೋಹನ್ದಾಸ್ ಬಂಗೇರ, ಮೊಕ್ತೇಸರ ಶ್ರೀಧರ ಪೂಜಾರಿ, ನೇಮೋತ್ಸವ ಸಮಿತಿಯ ಉಪಾಧ್ಯಕ್ಷ ಹರೀಶ್.ಕೆ ಪೂಜಾರಿ, ಪ್ರಧಾನ ಕಾರ್ಯದರ್ಶಿ ಜನಾರ್ಧನ ಪೂಜಾರಿ ಪದಡ್ಕ, ಕೋಶಾಧಿಕಾರಿ ಶೇಖರ್ ಬಂಗೇರ ಬೆಳ್ತಂಗಡಿ, ರಾಜೇಂದ್ರ ಚಿಲಿಂಬಿ ಇದ್ದರು.
Discussion about this post