• About us
  • Contact us
  • Disclaimer
Friday, August 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ಗೆ ಸೇರಿದ್ದ 17.29 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

Coastal Times by Coastal Times
March 5, 2025
in ಕ್ರೈಮ್ ನ್ಯೂಸ್
ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ಗೆ ಸೇರಿದ್ದ 17.29 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ
47
VIEWS
WhatsappTelegramShare on FacebookShare on Twitter

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಬಂಧಿಸಲ್ಪಟ್ಟಿರುವ ನಟಿ ರನ್ಯಾ ರಾವ್ ಅವರ ಮನೆಯಲ್ಲಿಯೂ ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಸೋಮವಾರ ರಾತ್ರಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದ ಬಳಿಕ ಅವರು ವಾಸವಿದ್ದ ನಗರದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಫ್ಲ್ಯಾಟ್‌ನಲ್ಲಿ ಡಿಆರ್​ಐ ಅಧಿಕಾರಿಗಳ ತಂಡ ಶೋಧ ನಡೆಸಿದ್ದು, ಈ ವೇಳೆ 2.06 ಕೋಟಿ ರೂ. ಮೌಲ್ಯದ ಚಿನ್ನ ಹಾಗೂ ನಗದು ಸೇರಿ 4.73 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು‌ ತಿಳಿಸಿವೆ.

ಚಿನ್ನ ಸೇರಿ ಒಟ್ಟು 17.29 ಕೋಟಿ ಮೌಲ್ಯದ ಆಸ್ತಿ ವಶಕ್ಕೆ: ಈ ಮೂಲಕ ರನ್ಯಾ ಅವರಿಂದ ಒಟ್ಟು 12.56 ಕೋಟಿ ಮೌಲ್ಯದ 14.2 ಕೆ.ಜಿ ವಿದೇಶಿ ಮೂಲದ ಚಿನ್ನ ಮತ್ತು 4.73 ಕೋಟಿ ಮೌಲ್ಯದ ಇತರ ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ತಿಳಿಸಿದೆ. 1962ರ ಕಸ್ಟಮ್ಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಡಿಆರ್‌ಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕರಣದಲ್ಲಿ ಚಿನ್ನ, ನಗದು ಸೇರಿದಂತೆ ಒಟ್ಟು 17.29 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡ ಅತಿದೊಡ್ಡ ಪ್ರಮಾಣದ ಚಿನ್ನದಲ್ಲಿ ಇದೂ ಒಂದಾಗಿದೆ ಎಂದು ಡಿಆರ್‌ಐ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ರನ್ಯಾ: ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ನಟಿ ರನ್ಯಾ ರಾವ್ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸೋಮವಾರ ರಾತ್ರಿ ಎಮಿರೇಟ್ಸ್ ಏರ್‌ಲೈನ್ಸ್ ಮೂಲಕ ದುಬೈನಿಂದ ಬೆಂಗಳೂರಿಗೆ ಬಂದಿಳಿದ ರನ್ಯಾ ರಾವ್ ಅವರನ್ನು 14.2 ಕೆ.ಜಿ ಚಿನ್ನದ ಸಮೇತ ಡಿಆರ್​ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ವೈದ್ಯಕೀಯ ತಪಾಸಣೆಗೊಳಪಡಿಸಿ ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸದ ಮುಂದೆ ರನ್ಯಾ ರಾವ್ ಅವರನ್ನು ಹಾಜರುಪಡಿಸಲಾಗಿತ್ತು. ಮಾರ್ಚ್ 18ರ ವರೆಗೂ ರನ್ಯಾ ರಾವ್ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶಿಸಿದ್ದರು.

ಇತ್ತೀಚಿನ ದಿನಗಳಲ್ಲಿ ಭಾರತ ಹಾಗೂ ದುಬೈ ನಡುವೆ ನಿರಂತರವಾಗಿ ಪ್ರಯಾಣಿಸುತ್ತಿದ್ದ ರನ್ಯಾ ರಾವ್ ಕುರಿತು ಕಂದಾಯ ಗುಪ್ತಚರ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಿದ್ದರು. ಕಳೆದ 15 ದಿನಗಳ ಅವಧಿಯಲ್ಲಿ 4 ಬಾರಿ ರನ್ಯಾ ರಾವ್ ದುಬೈಗೆ ತೆರಳಿ ಪಾಪಸ್ ಮರಳಿದ್ದರು. ಸೋಮವಾರ ರಾತ್ರಿ ರನ್ಯಾ ರಾವ್ ಬೆಂಗಳೂರಿಗೆ ಬಂದಿಳಿಯಲಿರುವ ಮಾಹಿತಿ ಪಡೆದಿದ್ದ ಕಂದಾಯ ಗುಪ್ತಚರ ಅಧಿಕಾರಿಗಳು ರನ್ಯಾ ಚಿನ್ನದ ಸಮೇತ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆದಿದ್ದರು.

ಹೆಚ್ಚಿನ ಚಿನ್ನಾಭರಣಗಳನ್ನು ಧರಿಸಿದ್ದ ರನ್ಯಾ ರಾವ್, ಉಳಿದ ಚಿನ್ನವನ್ನು ಬಟ್ಟೆಯಲ್ಲಿ ಬಚ್ಚಿಟ್ಟಿದ್ದರು. ಏರ್‌ಪೋರ್ಟ್‌ನಲ್ಲಿ ತಾನು ಡಿಜಿಯವರ ಪುತ್ರಿ ಎಂದು ಹೇಳಿಕೊಂಡು ತೆರಳುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಶಿವಾಜಿಯಂಥ ರಾಜ ಮತ್ತೊಬ್ಬನಿಲ್ಲ, “ಶಿವಾಜಿಯನ್ನು ವಿರೋಧಿಸುವವರು ನಾಟಕ ನೋಡಿ!“ – ವಿಜಯ್ ಕುಮಾರ್ ಕೊಡಿಯಾಲ್ ಬೈಲ್

Next Post

ಮಂಗಳೂರು ಜೈಲಿನಲ್ಲಿ ಅವಲಕ್ಕಿ, ಅನ್ನ ಸಾಂಬಾರ್​ ತಿಂದ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್​ಪಾಯಿಸನ್: ಒಬ್ಬನ ಸ್ಥಿತಿ ಗಂಭೀರ

Related Posts

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ
ಕ್ರೈಮ್ ನ್ಯೂಸ್

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
89
ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !
ಕ್ರೈಮ್ ನ್ಯೂಸ್

ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದರಿಂದ ನೊಂದು ಹಾಸ್ಟೆಲ್‌ನಲ್ಲಿ ತಂಗಿ ಆತ್ಮಹತ್ಯೆ ; ದುಬೈನಲ್ಲಿ ಇಂಜಿನಿಯರ್ ಆಗಿದ್ದ ಅಣ್ಣನೂ ಮಂಗಳೂರಿಗೆ ಬಂದು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣು !

August 11, 2026
74
Next Post
ಮಂಗಳೂರು ಜೈಲಿನಲ್ಲಿ ಅವಲಕ್ಕಿ, ಅನ್ನ ಸಾಂಬಾರ್​ ತಿಂದ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್​ಪಾಯಿಸನ್: ಒಬ್ಬನ ಸ್ಥಿತಿ ಗಂಭೀರ

ಮಂಗಳೂರು ಜೈಲಿನಲ್ಲಿ ಅವಲಕ್ಕಿ, ಅನ್ನ ಸಾಂಬಾರ್​ ತಿಂದ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್​ಪಾಯಿಸನ್: ಒಬ್ಬನ ಸ್ಥಿತಿ ಗಂಭೀರ

Discussion about this post

Recent News

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
14
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

ರಾಜ್ಯದಲ್ಲಿ ತಂಬಾಕು, ನಿಕೋಟಿನ್ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಬಲಿಪಶುವಾಗದಂತೆ ಸ್ಪಷ್ಟ ಚೌಕಟ್ಟು ರಚಿಸುವಂತೆ ಕ್ಯಾಂಪ್ಕೋ ಆಗ್ರಹ

August 13, 2026
ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ತಂಬಾಕು, ಗುಟ್ಕಾ ಹಾಗೂ ಪಾನ್ ಮಸಾಲ ಒಂದು ವರ್ಷ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ

August 12, 2026
ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

ಆಪರೇಷನ್ ತೂಫಾನ್: ಕರ್ನಾಟಕ ಗಡಿ ಮೂಲಕ ಕೇರಳಕ್ಕೆ ಭಾರೀ ಪ್ರಮಾಣದಲ್ಲಿ ಎಂಡಿಎಂಎ ಸಾಗಿಸಲು ಯತ್ನಿಸಿದ ಯುವಕ-ಯುವತಿಯ ಬಂಧನ

August 12, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d