ಚಂಡೀಗಢ: ಪಾಕಿಸ್ತಾನದ ನಂಟು ಹೊಂದಿರುವ ನಾಲ್ವರು ಶಂಕಿತ ಖಲಿಸ್ತಾನಿ ಭಯೋತ್ಪಾದಕರನ್ನು ಹರಿಯಾಣದ ಟೋಲ್ ಪ್ಲಾಜಾದಲ್ಲಿ ಗುರುವಾರ ಬಂಧಿಸಲಾಗಿದ್ದು, ಅವರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿಂದೆ ಜೈಲಿನಲ್ಲಿದ್ದ ಪ್ರಮುಖ ಆರೋಪಿ ಗುರ್ ಪ್ರೀತ್, ಜೈಲಿನಲ್ಲಿನಲ್ಲಿ ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ರಾಜಬೀರ್ ನನ್ನು ಭೇಟಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಬಿಳಿ ಬಣ್ಣದ ಟೊಯೊಟಾ ಇನ್ನೋವಾ ಎಸ್ಯುವಿಯಲ್ಲಿ ದೆಹಲಿಗೆ ತೆರಳುತ್ತಿದ್ದಾಗ ಕರ್ನಾಲ್ನ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ನಾಲ್ವರನ್ನು ಬಂಧಿಸಲಾಯಿತು. ಇತರ ಮೂವರು ಶಂಕಿತರನ್ನು ಪಂಜಾಬ್ ನಿವಾಸಿಗಳಾದ ಭೂಪೇಂದ್ರ, ಅಮನದೀಪ್ ಮತ್ತು ಪರ್ವಿಂದರ್ ಸಿಂಗ್ ಎಂದು ಗುರುತಿಸಲಾಗಿದೆ.
ಬಂಧಿತರಾಗಿರುವ ಗುರ್ ಪ್ರೀತ್ ಮತ್ತು ಇತರ ಮೂವರು ಸ್ಫೋಟಕಗಳ ಸರಕುಗಳನ್ನು ಭಾರತದಾದ್ಯಂತ ತಲುಪಿಸುತ್ತಿದ್ದರು. ಈ ನಾಲ್ವರು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಅಥವಾ ಐಎಸ್ಐ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ವರು ಶಂಕಿತರು ಪಾಕಿಸ್ತಾನದ್ದ ಇನ್ನೊಬ್ಬ ಭಯೋತ್ಪಾದಕ ಹರ್ವಿಂದರ್ ಸಿಂಗ್ ಆದೇಶದ ಮೇರೆಗೆ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.