ಬೆಳ್ತಂಗಡಿ: ಬಿಜೆಪಿ ಮುಖಂಡ, ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಎಂಬವರ ಮೇಲೆ ತಲವಾರು ದಾಳಿ ಘಟನೆ ಕಾಯರ್ತಡ್ಕದಲ್ಲಿ ಇಂದು ಸಂಜೆ ನಡೆದಿದ್ದು, ಗಾಯಗೊಂಡ ರಾಜೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಯರ್ತಡ್ಕ ಕಜೆ ನಿವಾಸಿ, ಗ್ರಾ.ಪಂ. ಮಾಜಿ ಸದಸ್ಯ ಕುಶಾಲಪ್ಪ ಗೌಡ ಹಲ್ಲೆ ನಡೆಸಿದ ಆರೋಪಿ ಎಂದು ತಿಳಿದುಬಂದಿದೆ.
ರಾಜೇಶ್ ಎಮ್.ಕೆ(33) ಹಲ್ಲೆಗೊಳಗಾದವರು. ಕಳೆಂಜದ ಕುಶಲಪ್ಪ ಗೌಡ ಕಜೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಲ್ಲೆಗೊಳಗಾದ ರಾಜೇಶ್ ಬಿಜೆಪಿ ಕಾರ್ಯಕರ್ತ ಎನ್ನಲಾಗುತ್ತಿದು , ಕುಶಾಲಪ್ಪ ಗೌಡ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಲಾಗುತ್ತಿದೆ. ಜೂ 4 ರಂದು ಸಂಜೆ ಅಂಗಡಿ ಮುಚ್ಚಿ ರಾಜೇಶ್ ಮನೆಗೆ ತೆರಳುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಹೇಳಲಾಗುತ್ತಿದ್ದು, ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಫತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಜೆಪಿ ಗೆಲುವು ಸಾಧಿಸಿದ್ದಕ್ಕೆ ರಾಜೇಶ್ ಮತ್ತು ತಂಡ ಪಟಾಕಿ ಸಿಡಿಸಿದ್ದುಇದರಿಂದ ರೊಚ್ಚಿಗೆದ್ದ ಕುಶಲಪ್ಪ ಗೌಡ ಕಜೆ ಎಂಬಾತ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ವಿಷಯ ತಿಳಿದು ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post