• About us
  • Contact us
  • Disclaimer
Tuesday, August 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ, ಬಿಸಿ ಮುಟ್ಟಿಸಿದ ವಿಶೇಷ ಪೊಲೀಸ್ ತಂಡ, 6 ಮಂದಿ ಸೆರೆ

Coastal Times by Coastal Times
June 5, 2025
in ಕ್ರೈಮ್ ನ್ಯೂಸ್
ಮಂಗಳೂರು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ, ಬಿಸಿ ಮುಟ್ಟಿಸಿದ ವಿಶೇಷ ಪೊಲೀಸ್ ತಂಡ, 6 ಮಂದಿ ಸೆರೆ
138
VIEWS
WhatsappTelegramShare on FacebookShare on Twitter

ಮಂಗಳೂರು, ಜೂನ್ 4 : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹಾಕಿ, ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡಲು ಪ್ರಯತ್ನಿಸಿದ ಆರೋಪಿಗಳ ಪತ್ತೆಗಾಗಿ ಮಂಗಳೂರು ನಗರ  ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದು, ಪ್ರಕರಣಗಳನ್ನು ದಾಖಲಿಸಿ ಆರೋಪಿತರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಲಾಗಿದೆ.

ಹೆಜಮಾಡಿಯ ಅಸ್ಲಾಂ (23 ), ಕಾಟಿಪಳ್ಳದ ಚೇತನ್ (20), ಹಳೆಯಂಗಡಿ ನಿತಿನ್ ಅಡಪ (23), ಫರಂಗಿಪೇಟೆಯ ರಿಯಾಝ್ ಇಬ್ರಾಹೀಂ (30), ಕಸಬಾ ಬೆಂಗ್ರೆಯ ಜಮಾಲ್ ಝಕೀರ್(21) ಮತ್ತು ಕೊಳವೈಲ್‌ನ ಗುರುಪ್ರಸಾದ್ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ಪೈಕಿ ಅಸ್ಲಾಂ ಎಂಬಾತನು ಸೌದಿ ಅರೇಬಿಯಾದಿಂದ team_jokerzzz._ ಎಂಬ ಇನ್‌ಸ್ಟಾಗ್ರಾಂ ಮೂಲಕ ಪ್ರಚೋದನಾಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ.192, 353 (2)ರಂತೆ ಪ್ರಕರಣ ದಾಖಲಾಗಿತ್ತು. ಆರೋಪಿ ಅಸ್ಲಾಂ ವಿರುದ್ಧ ಎಲ್‌ಒಸಿ ಹೊರಡಿಸಿ, ದಸ್ತಗಿರಿ ಮಾಡಲಾಗಿದೆ.

ಚೇತನ್ ಎಂಬಾತನು ಮುಸ್ಲಿಂ ಹೆಸರಿನ ಸಿಮ್ ಕಾರ್ಡ್ ನ್ನು ಬಳಸಿಕೊಂಡು team_karna_surathkal ಇನ್‌ಸ್ಟಾಗ್ರಾಂ ಪೇಜ್‌ನ್ನು ತೆರೆದಿದ್ದು, ಈ ಪೇಜ್‌ನಲ್ಲಿ ಚೆನ್ನಪ್ಪ ಯಾನೆ ಮುತ್ತು ಸುರತ್ಕಲ್ ಎಂಬಾತನು ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆಧಾರದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ. 196(1), 353(2) ರಂತೆ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಚೇತನ್ ಮತ್ತು ನಿತಿನ್ ಅಡಪ ಎಂಬವರನ್ನು ಪತ್ತೆ ಮಾಡಿ ದಸ್ತಗಿರಿ ಮಾಡಿಡಲಾಗಿದೆ.

ರಿಯಾಝ್ ಇಬಾಹೀಂ ಎಂಬಾತನು ಸೌದಿ ಅರೇಬಿಯಾದಿಂದ Beary_royal_nawab ಎಂಬ ಇನ್‌ಸ್ಟಾಗ್ರಾಮ್ ಪೇಜ್ ಮುಖಾಂತರ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ. 353 (2) ರಂತೆ ಮತ್ತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ.353 (1) (ಸಿ), 353(2) ಕಾಯ್ದೆಯಡಿ ಪ್ರಕರಣ ದಾಖಲಾಗಿರುತ್ತದೆ. ಈತನನ್ನು ಎಲ್‌ಒಸಿ ಹೊರಡಿಸಿ ದಸ್ತಗಿರಿ ಮಾಡಲಾಗಿದೆ.

ಆರೋಪಿ ಜಮಾಲ್ ಝಾಕೀರ್ Troll_bengare_ro_makka ಇನ್‌ಸ್ಟಾಗ್ರಾಮ್ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಕಲಂ ಬಿಎನ್‌ಎಸ್ 353 (1) (ಸಿ), 353(2) ಸಂಹಿತೆಯಂತೆ ಪ್ರಕರಣ ದಾಖಲಿಸಲಾಗಿರುತ್ತದೆ

ಗುರು ಪ್ರಸಾದ್ ಎಂಬಾತನು Guru dprasad Haleyangadi ಎಂಬ ಫೇಸ್‌ ಬುಕ್ ಖಾತೆಯ ಮುಖಾಂತರ ಸಂದೇಶಗಳನ್ನು ಹರಿಬಿಟ್ಟಿದ್ದ ಆರೋಪದಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ.196(1) (ಎ),353(2),79,56 ರಂತೆ ಪ್ರಕರಣ ದಾಖಲಿಸಲಾಗಿರುತ್ತದೆ.

ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ‌ ಗಳಲ್ಲಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗವನ್ನುಂಟು ಮಾಡಲು ಹಾಗೂ ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸಿ, ಸಮಾಜದ ಶಾಂತಿ ನೆಮ್ಮದಿಗೆ ಅಪಾಯವುಂಟು ಮಾಡುವ ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ವ್ಯಕ್ತಿಗಳ ಪತ್ತೆಗಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರು ವಿಶೇಷ ತಂಡ ರಚನೆ ಮಾಡಿದ್ದರು.

ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, , ಉಪ ಪೊಲೀಸ್ ಆಯುಕ್ತರಾದ ಸಿದ್ದಾರ್ಥ ಗೋಯಲ್ ಮತ್ತು ರವಿಶಂಕರ್ (ಅ ಮತ್ತು ಸಂ) ಮಾರ್ಗದರ್ಶನದಲ್ಲಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡಗಳಿಂದ ತನಿಖೆ ಮುಂದುವರೆಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟನೆ ತಿಳಿಸಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ 12 ಮಂದಿ ಆರೋಪಿಗಳ ಬಂಧನ

Next Post

ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆಯ ಕೆಳಭಾಗ ಕುಸಿತ

Related Posts

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ
ಕ್ರೈಮ್ ನ್ಯೂಸ್

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
22
ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಅಕ್ರಮ ಜಾನುವಾರು ಸಾಗಾಟ ಪತ್ತೆ, ಪಿಕ್‌ಅಪ್ ವಾಹನ ಚಾಲಕನ ಬಂಧನ

August 24, 2026
25
Next Post
ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆಯ ಕೆಳಭಾಗ ಕುಸಿತ

ಸೋಮೇಶ್ವರ, ಅಂಬಿಕಾ ರೋಡ್ ರಾಜಕಾಲುವೆಯ ಕಿರು ಸೇತುವೆಯ ಕೆಳಭಾಗ ಕುಸಿತ

Discussion about this post

Recent News

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
51
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

ದಕ್ಷಿಣ ಕನ್ನಡ ಜಿಲ್ಲೆಯ SIR ಕರಡು ಮತದಾರರ ಪಟ್ಟಿ ಪ್ರಕಟ: ಹೊಂದಾಣಿಕೆಯಾಗದ ಹಾಗೂ ತಾರ್ಕಿಕ ದೋಷವಿರುವ 1.50 ಲಕ್ಷ ಮಂದಿಗೆ ನೋಟಿಸ್ ಜಾರಿ

August 24, 2026
ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

ಆ.25 ರಂದು ಮೀಲಾದುನ್ನಬಿ :ಕೋಟೆಪುರದಿಂದ ದರ್ಗಾ ವರೆಗೆ ಕಾಲ್ನಡಿಗೆ ಜಾಥಾ, ಬೈಕ್ ಗಳಲ್ಲಿ ಹಸಿರು ಧ್ವಜ ಕಟ್ಟುವುದು, ವಾಹನ ರ‍್ಯಾಲಿಗೆ ಅವಕಾಶ ಇಲ್ಲ :ಹನೀಫ್ ಹಾಜಿ

August 24, 2026
ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಸ್ಕೂಟರ್ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ; ಸವಾರನಿಗೆ ಗಾಯ

August 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d