• About us
  • Contact us
  • Disclaimer
Wednesday, January 28, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗ ಎನ್‍ಐಎ ವಶಕ್ಕೆ

Coastal Times by Coastal Times
August 5, 2021
in ತಾಜಾ ಸುದ್ದಿ
ಉಳ್ಳಾಲ: ಮಾಜಿ ಶಾಸಕ ಇದಿನಬ್ಬ ಮೊಮ್ಮಗ ಎನ್‍ಐಎ ವಶಕ್ಕೆ
0
VIEWS
WhatsappTelegramShare on FacebookShare on Twitter

ಉಳ್ಳಾಲ: ಮಾಜಿ ಶಾಸಕ ದಿ.ಇದಿನಬ್ಬ ಪುತ್ರ ಬಿ.ಎಂ. ಬಾಷಾ ಅವರ ಉಳ್ಳಾಲ ಮಾಸ್ತಿಕಟ್ಟೆಯಲ್ಲಿರುವ ಮನೆಗೆ ಬುಧವಾರ ನಸುಕಿನ ಜಾವ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳದ ತಂಡ ಅವರ ಪುತ್ರನನ್ನು ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆದುಕೊಂಡಿದೆ.
ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಉಮ್ಮರ್ ಅಬ್ದುಲ್‌ ರೆಹಮಾನ್‌ (25) ಎಂಬಾತನನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ. ಎರಡು ವಾಹನಗಳಲ್ಲಿ ಬಂದಿದ್ದ ರಾಷ್ಟ್ರೀಯ ತನಿಖಾ ದಳದ ತಂಡ ಮಧ್ಯಾಹ್ನದವರೆಗೂ ವಿಚಾರಣೆ ನಡೆಸಿ, ಉಮ್ಮರ್‌ನನ್ನು ವಶಕ್ಕೆ ಪಡೆದು ಕೊಂಡಿದೆ. ಮಧ್ಯಾಹ್ನ ನಂತರವೂ ತನಿಖೆ ಮುಂದುವರಿಸಿದ ತಂಡ ಸಾಕ್ಷ್ಯ ಗಳ ಸಂಗ್ರಹಣೆ ನಡೆಸಿ, ಸಂಜೆ 7.30ರ ಸುಮಾರಿಗೆ ವಾಪಸಾಗಿದೆ. ತಂಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 24 ಅಧಿಕಾರಿಗಳಿದ್ದರು.

ಇದಿನಬ್ಬ ಪುತ್ರ ಬಿ.ಎಂ. ಬಾಷಾ ಮಂಗಳೂರಿನಲ್ಲಿ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದರು. ಇವರ ಪುತ್ರರು ವಿದೇಶದಲ್ಲಿದ್ದಾರೆ. ಇವರ ಕುಟುಂಬದವರು ಐಸಿಸ್ ಸಂಬಂಧಿಸಿದ ಯೂಟ್ಯೂಬ್ ಚಾನೆಲ್​ಗಳನ್ನು ಸಬ್​ಸ್ಕ್ರೈಬ್ ಮಾಡಿ, ಮೃದುಧೋರಣೆ ಅನುಸರಿಸಿದ್ದರು ಎನ್ನಲಾಗಿದೆ. ಅಲ್ಲದೆ, ಐಸಿಸ್ ಸಂಪರ್ಕ ಮತ್ತು ಜಮ್ಮು ಕಾಶ್ಮೀರದ ಉಗ್ರ ಸಂಘಟನೆಯ ಯುವಕರ ಜತೆ ಮೊಬೈಲ್ ಸಂಪರ್ಕ ಇರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಎನ್ಐಎ ವಿಭಾಗದ ಡಿಐಜಿ ಶ್ರೇಣಿಯ ಅಧಿಕಾರಿ ಉಮಾ ಎಂಬವರ ನೇತೃತ್ವದಲ್ಲಿ ದಾಳಿ ನಡೆದಿದೆ.

ಮಹಮ್ಮದ್ ಅಮೀನ್ ನೇತೃತ್ವದಲ್ಲಿ ಕರ್ನಾಟಕ ಹಾಗೂ ಕೇರಳ ಮೂಲದ ಮುಖಂಡರನ್ನು ಟಾರ್ಗೆಟ್ ನಡೆಸಿ ಹತ್ಯೆ ನಡೆಸುವ ಸಂಚು ರೂಪಿಸಲಾಗಿತ್ತು. ಇದೇ ಮಾಹಿತಿ ಆಧಾರದಲ್ಲಿ ರಾಷ್ಟ್ರೀಯ ತನಿಖಾ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ಲ್ಯಾಪ್ ಟಾಪ್, ಹಾರ್ಡ್‌ಡಿಸ್ಕ್, ಹಲವು ಸಿಮ್ ಕಾರ್ಡ್‍ಗಳನ್ನು ವಶಕ್ಕೆ ಪಡೆದಿತ್ತು. ಈ ವೇಳೆ ಮಹಮ್ಮದ್ ಅಮೀನ್ ತಂಡ ಕರ್ನಾಟಕ ಮತ್ತು ಕೇರಳದಲ್ಲಿ ಐಸಿಸ್ ಸಂಘಟನೆಗೆ ನೇಮಿಸಿದ್ದ ಹಲವು ಯುವಕರ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಉಳ್ಳಾಲದ ಮಾಜಿ ಶಾಸಕ ಇದಿನಬ್ಬ ಕುಟುಂಬದ ಸದಸ್ಯರೊಬ್ಬರು ಐಸಿಸ್ ಪರ ಒಲವು ಹೊಂದಿರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆದಿದೆ. ಅಲ್ಲದೆ, ಐಎಸ್‌ ಪರವಾದ ಹಲವು ಯುಟ್ಯೂಬ್ ಚಾನೆಲ್ ಗಳು, ಇಸ್ಟ್ಯಾಗ್ರಾಂ ಮತ್ತು ಟೆಲಿಗ್ರಾಮ್ ಮೂಲಕ ಮಾಹಿತಿ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿದ ಕೆಲವು ತಾಂತ್ರಿಕ ಸಾಕ್ಷ್ಯಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬೊಮ್ಮಾಯಿ ಸಂಪುಟ ರಚನೆ : 29 ಮಂದಿ ಸಚಿವರಾಗಿ ಪ್ರಮಾಣ

Next Post

ಮಾಜಿ ಸಚಿವ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಮಾಜಿ ಸಚಿವ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ

ಮಾಜಿ ಸಚಿವ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ

Discussion about this post

Recent News

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

January 27, 2026
14
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

January 27, 2026
18
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

ಮಂಗಳೂರು ಧರ್ಮಪ್ರಾಂತ್ಯದಲ್ಲಿ ಸಂತ ವಿನ್ಸೆಂಟ್ ಪೌಲ್ ಸಂಸ್ಥೆಯ ಸ್ಥಾಪನಾ ಶತಮಾನೋತ್ಸವ ಸಮಾರೋಪ

January 27, 2026
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾಗೌಡಗೆ ನಿಂದನೆ: ಕೇರಳದಿಂದ ಗೋವಾಕ್ಕೆ ತೆರಳುವಾಗ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬಂಧನ

January 27, 2026
ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

ಮಲ್ಪೆ: ಕೋಡಿಬೆಂಗ್ರೆ ಸಮುದ್ರದಲ್ಲಿ ಪ್ರವಾಸಿಗರಿದ್ದ ದೋಣಿ ಪಲ್ಟಿ : ಮೈಸೂರು ಮೂಲದ ಇಬ್ಬರು ಸಾವು

January 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d