• About us
  • Contact us
  • Disclaimer
Wednesday, January 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಕಾರ್ಮಿಕರನ್ನು ಬೆದರಿಸಲು ಮಾಲೀಕ ಹಾರಿಸಿದ ಗುಂಡು ಮಗನಿಗೆ ತಾಗಿ ಗಾಯ

Coastal Times by Coastal Times
October 5, 2021
in ಕ್ರೈಮ್ ನ್ಯೂಸ್
ಮಂಗಳೂರು: ಕಾರ್ಮಿಕರನ್ನು ಬೆದರಿಸಲು ಮಾಲೀಕ ಹಾರಿಸಿದ ಗುಂಡು ಮಗನಿಗೆ ತಾಗಿ ಗಾಯ
53
VIEWS
WhatsappTelegramShare on FacebookShare on Twitter

ಮಂಗಳೂರು: ನಗರದ ಮೋರ್ಗನ್ಸ್ ಗೇಟ್ ಬಳಿ ಮಂಗಳವಾರ ವೈಷ್ಣವಿ ಕಾರ್ಗೋದ ಮಾಲೀಕ ಹಾಗೂ ಕಾರ್ಮಿಕರ ನಡುವೆ ಜಟಾಪಟಿ ನಡೆದಿದ್ದು ಈ ವೇಳೆ ಮಾಲೀಕ ಹಾರಿಸಿದ ಗುಂಡಿನಿಂದ ಆತನ ಮಗನೇ ಗಾಯಗೊಂಡ ಘಟನೆ ನಡೆದಿದೆ.

ಸಂಸ್ಥೆಯ ಮಾಲೀಕ ರಾಜೇಶ್ ಅವರ ಬಳಿ ಕೆಲಸಕ್ಕಿದ್ದ ನೌಕರ ವೇತನದ ಬಗ್ಗೆ ವಿಚಾರಿಸಲು ಬಂದಿದ್ದರು. ಈ ಸಂದರ್ಭದಲ್ಲಿ ಮಾಲೀಕರು ಹಾಗೂ ನೌಕರನ ನಡುವೆ ಮಾತಿನ ಚಕಮಕಿ ನಡೆದಿದೆ. ರಾಜೇಶ್ ಕೋಪದಲ್ಲಿ ತಮ್ಮ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪರಿಶೀಲಿಸಿದ ನಗರ ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್, ಶೂಟೌಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉದ್ಯಮಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ವೈಷ್ಣವಿ ಕಾರ್ಗೊ ಸಂಸ್ಥೆಯನ್ನು ರಾಜೇಶ್ ಪ್ರಭು ನಡೆಸುತ್ತಿದ್ದು, ಅವರ ಬಳಿ ಪರವಾನಗಿ ಪಡೆದ ಪಿಸ್ತೂಲ್ ಇದೆ ಎಂಬ ಮಾಹಿತಿ ಇದೆ. ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ರಾಜೇಶ್ ಪಿಸ್ತೂಲ್‌ನೊಂದಿಗೆ ಸಂಸ್ಥೆಯ ಕಚೇರಿಗೆ ಬಂದಿದ್ದಾರೆ. ಕಚೇರಿ ಬಳಿ ಗೊಂದಲಮಯ ವಾತಾವರಣ ಏರ್ಪಟ್ಟ ವೇಳೆ ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಸ್ಥಳದಲ್ಲಿ ಎರಡು ಗುಂಡುಗಳ ಅವಶೇಷ ಪತ್ತೆಯಾಗಿವೆ ಎಂದು ಮಾಹಿತಿ ನೀಡಿದರು.

ರಾಜೇಶ್ ಅವರಿಗೆ ಎಸೆಸೆಲ್ಸಿ ಓದುತ್ತಿರುವ ಸುಧೀಂದ್ರ ಹೆಸರಿನ ಪುತ್ರನಿದ್ದಾನೆ. ರಾಜೇಶ್ ಹಾರಿಸಿದ ಗುಡು, ಪುತ್ರನ ಎಡಕಣ್ಣಿನ ಭಾಗದಲ್ಲಿ ತಾಗಿಕೊಂಡು ತಲೆಭಾಗದಲ್ಲಿ ಹೊಕ್ಕಿದೆ. ಗಾಯಗೊಂಡಿರುವ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನಾ ಸ್ಥಳದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ವೇತನಕ್ಕೆ ಒತ್ತಾಯ: ವಾಗ್ವಾದ,

ರಾಜೇಶ್‌ ಪ್ರಭು ಅವರ ವಿಚಾರಣೆ ನಡೆಸಲಾಗಿದ್ದು, ಕೆಲ ಮಾಹಿತಿ ತಿಳಿದು ಬಂದಿದೆ. ಅವರ ಕಂಪನಿಯಲ್ಲಿ ಚಂದ್ರು ಮತ್ತು ಅಶ್ರಫ್‌ ಎಂಬ ಇಬ್ಬರು ಹುಡುಗರಿದ್ದು, ಚಾಲಕ ಹಾಗೂ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದಾರೆ. ಒಂದೆಡೆ ಸಾಮಗ್ರಿ ತಲುಪಿಸಿ ಬಂದಿದ್ದ ಇಬ್ಬರು, ₹4 ಸಾವಿರ ವೇತನ ನೀಡುವಂತೆ ಎರಡು ದಿನಗಳಿಂದ ಒತ್ತಾಯಿಸುತ್ತಿದ್ದರು.

ಮಂಗಳವಾರ ಮಧ್ಯಾಹ್ನ ರಾಜೇಶ್‌ ಪ್ರಭು ಅವರ ಪತ್ನಿಯ ಎದುರು ಇಬ್ಬರೂ ಮತ್ತೆ ಹಣ ನೀಡುವಂತೆ ಒತ್ತಾಯಿಸಿದ್ದಾರೆ. ಆಗ ಅವರ ಪತ್ನಿ ರಾಜೇಶ್ ಪ್ರಭು ಮತ್ತು ಅವರ ಪುತ್ರನನ್ನು ಕರೆದಿದ್ದಾರೆ. ಈ ಸಂದರ್ಭದಲ್ಲಿ ಪುತ್ರ ಸುಧೀಂದ್ರ, ಚಾಲಕ ಹಾಗೂ ಕ್ಲೀನರ್‌ನ ಕೆನ್ನೆಗೆ ಬಾರಿಸಿದ್ದಾನೆ. ಇದರಿಂದ ವಾಗ್ವಾದ ತಾರಕಕ್ಕೇರಿದ್ದು, ರಾಜೇಶ್‌ ಪ್ರಭು ರಿವಾಲ್ವರ್ ತೆಗೆದು ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಅದರಲ್ಲಿ ಒಂದು ಪುತ್ರ ಸುಧೀಂದ್ರನಿಗೆ ತಗುಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಅಮೆಜಾನ್‌ನಿಂದ ಕೇಂದ್ರ ಸರ್ಕಾರಕ್ಕೆ ಲಂಚ: ನ್ಯಾಯಾಧೀಶರಿಂದ ತನಿಖೆಗೆ ಅಮೀ ಯಾಜ್ಞಿಕ್ ಒತ್ತಾಯ

Next Post

ಪೆಟ್ರೋಲ್ ಬಂಕ್ ಮ್ಯಾನೇಜರ್ ದರೋಡೆ ಪ್ರಕರಣದ ಆರೋಪಿಗಳ ಬಂಧನ

Related Posts

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
ಕ್ರೈಮ್ ನ್ಯೂಸ್

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
23
ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ
ಕ್ರೈಮ್ ನ್ಯೂಸ್

ಪುತ್ತೂರು: ಎರಡು ವಾಹನಗಳಲ್ಲಿ 53 ಲಕ್ಷ ರೂ. ಮೌಲ್ಯದ 106 ಕೆಜಿ ಗಾಂಜಾ ವಶ: ಇಬ್ಬರು ಆರೋಪಿಗಳ ಬಂಧನ

January 20, 2026
59
Next Post
ಪೆಟ್ರೋಲ್ ಬಂಕ್ ಮ್ಯಾನೇಜರ್ ದರೋಡೆ ಪ್ರಕರಣದ ಆರೋಪಿಗಳ ಬಂಧನ

ಪೆಟ್ರೋಲ್ ಬಂಕ್ ಮ್ಯಾನೇಜರ್ ದರೋಡೆ ಪ್ರಕರಣದ ಆರೋಪಿಗಳ ಬಂಧನ

Discussion about this post

Recent News

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
18
5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
23
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

5.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ, ನೈಜೀರಿಯಾ ಮೂಲದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

January 21, 2026
ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

ಮಂಗಳೂರು ನಗರವನ್ನು ಡ್ರಗ್ಸ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಪಣ ತೊಟ್ಟಿರುವ ಪೊಲೀಸ್ ಕಮಿಷನರ್ ಅವರ ಜೊತೆಗೆ ಕೈಜೋಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘ

January 20, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d