• About us
  • Contact us
  • Disclaimer
Monday, March 9, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

21ನೇ ಪಂಚವಾರ್ಷಿಕ ಉಳ್ಳಾಲ ಉರೂಸ್‌ ಡಿ. 23ರಿಂದ ಜ. 16ರ ವರೆಗೆ ನಡೆಯಲಿದೆ

Coastal Times by Coastal Times
November 5, 2021
in ಕರಾವಳಿ
21ನೇ ಪಂಚವಾರ್ಷಿಕ  ಉಳ್ಳಾಲ ಉರೂಸ್‌ ಡಿ. 23ರಿಂದ ಜ. 16ರ ವರೆಗೆ ನಡೆಯಲಿದೆ
51
VIEWS
WhatsappTelegramShare on FacebookShare on Twitter

ಮಂಗಳೂರು: ಸಂತ ಖುತುಬುಝ್ಜಮಾನ್‌ ಹಝ್ರತ್‌ ಅಸ್ಸಯ್ಯದ್‌ ಮುಹಮ್ಮದ್‌ ಶರೀಫುಲ್ ಮದನಿ (ಖ.ಸಿ) ತಂಙಳ್‌ ಅವರ 429ನೇ ವಾರ್ಷಿಕ ಮತ್ತು 21ನೇ ಪಂಚವಾರ್ಷಿಕ ಉರೂಸ್‌ ನೇರ್ಚೆ ಡಿ. 23ರಿಂದ ಜ. 16ರ ವರೆಗೆ ಉಳ್ಳಾಲ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್‌ ರಶೀದ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಯ್ಯಿದ್‌ ಇಂಬಿಚ್ಚಿ ಕೋಯ ತಂಙಳ್‌ ನೇತೃತ್ವ ವಹಿಸುವರು. ಸಂಜೆ ಏಳು ಗಂಟೆಗೆ ಉರೂಸ್‌ ಕಾರ್ಯಕ್ರಮವನ್ನು ಸಯ್ಯಿದುಲ್‌ ಉಲಮಾ ಜಿಪ್ರಿಮುತ್ತುಕೋಯ ತಂಙಳ್‌ ಉದ್ಘಾಟಿಸಲಿದ್ದಾರೆ. ಸಮಾರೋಪ ಕಾರ್ಯಕ್ರಮವನ್ನು ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕ್ಕರ್‌ ಮುಸ್ಲಿಯಾರ್‌ ನೆರವೇರಿಸಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರು, ಸಂಸದರು, ಶಾಸಕರು, ಧಾರ್ಮಿಕ ಗಣ್ಯರು ಭಾಗವಹಿಸಲಿದ್ದಾರೆ. ಸೌಹಾರ್ದ ಸಮ್ಮೇಳನದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಪ್ರಸಿದ್ಧ ಧರ್ಮಗುರುಗಳು, ವಿದ್ವಾಂಸರು ಭಾಗವಹಿಸಲಿದ್ದಾರೆ ಎಂದರು.

ಡಿ. 26ರಂದು ಬೆಳಗ್ಗೆ ಬೃಹತ್‌ ರಕ್ತದಾನ ಶಿಬಿರ, ಸಂಜೆ ಮಜ್ಲಿಸುನ್ನೂರ್‌ ಕಾರ್ಯಕ್ರಮ, ಜ. 2ರಂದು 2.30ಕ್ಕೆ ಸನದು ದಾನ ಮಹಾಸಮ್ಮೇಳನ, ಜ. 6ರಂದು ಮದನಿ ಮೌಲೂದ್‌ ಪಾರಾಯಣ, ಜ. 9ರಂದು ಬೃಹತ್‌ ಆರೋಗ್ಯ ಶಿಬಿರ ಜರಗಲಿದೆ. ಡಿ. 23ರಿಂದ ಜ. 13ರ ವರೆಗೆ ರಾತ್ರಿ ವಿಶ್ವ ವಿಖ್ಯಾತ ಪಂಡಿತರು, ಧಾರ್ಮಿಕ ಮುಖಂಡರಿಂದ ಪ್ರವಚನ ನಡೆಯಲಿದೆ.

ಜ. 14ರಂದು ಅಸರ್‌ ನಮಾಜಿನ ಬಳಿಕ ಅಂಗವಿಕಲರಿಗೆ ಸೈಕಲ್‌ ವಿತರಣೆ, ಮಗ್ರಿಬ್‌ ನಮಾಜಿನ ಬಳಿಕ ಸರ್ವಧರ್ಮ ಮುಖಂಡರ ಸಮ್ಮೇಳನ ನಡೆಯಲಿದ್ದು, ಧಾರ್ಮಿಕ- ಸಾಮಾಜಿಕ ಮುಖಂಡರು ಭಾಗವಹಿಸಲಿದ್ದಾರೆ. ಜ. 15ರಂದು ಸಂದಲ್‌ ಮೆರವಣಿಗೆ ಹಾಗೂ ಜ. 16ರಂದು ಅನ್ನದಾನ ಕಾರ್ಯಕ್ರಮ ನಡೆಯಲಿದೆ.

ಜಮಾತಿನ 55 ಮಂದಿ ಸಮಿತಿ ಸದಸ್ಯರೊಂದಿಗೆ 8 ಕರಿಯದಿಂದ ಆಯ್ಕೆಯಾಗಿ ಬಂದ ಉರೂಸ್‌ ಸಮಿತಿ ಸೇರಿ ಒಟ್ಟು 200 ಮಂದಿಯ ಉರೂಸ್‌ ಸಮಿತಿ ರಚಿಸಲಾಗಿದ್ದು, ಈ ಪೈಕಿ 20 ಮಂದಿಯ ಮೇಲ್ವಿಚಾರಣಾ ಸಮಿತಿಗಳನ್ನು ರಚಿಸಿಕೊಂಡು ಉರೂಸ್‌ನ ಸಿದ್ಧತೆಗೆ ಶ್ರಮಿಸುತ್ತಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷ ಯು.ಕೆ. ಮೋನು ಇಸ್ಮಾಯಿಲ್‌, ಲೆಕ್ಕ ಪರಿಶೋಧಕ ಯು.ಟಿ. ಇಲ್ಯಾಸ್‌, ಜತೆಕಾರ್ಯದರ್ಶಿ ನೌಶದ್‌ ಆಲಿ ಉಪಸ್ಥಿತರಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕುಂಪಲ, ಪಿಲಾರು ಪರಿಸರದಲ್ಲಿ ಚಿರತೆ ಪತ್ತೆ ? ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ

Next Post

ಐಡಿಯಲ್‌ ಐಸ್‌ಕ್ರೀಂ ಸ್ಥಾಪಕ ʻ ಪಬ್ಬ ಮಾಮ್‌ ʼ ಇನ್ನಿಲ್ಲ

Related Posts

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್
ಕರಾವಳಿ

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
9
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
ಕರಾವಳಿ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
31
Next Post
ಐಡಿಯಲ್‌ ಐಸ್‌ಕ್ರೀಂ ಸ್ಥಾಪಕ ʻ ಪಬ್ಬ ಮಾಮ್‌ ʼ ಇನ್ನಿಲ್ಲ

ಐಡಿಯಲ್‌ ಐಸ್‌ಕ್ರೀಂ ಸ್ಥಾಪಕ ʻ ಪಬ್ಬ ಮಾಮ್‌ ʼ ಇನ್ನಿಲ್ಲ

Discussion about this post

Recent News

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
9
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

ಮಂಗಳೂರು ರಿಫೈನರಿಯ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ ವದಂತಿ ತಳ್ಳಿಹಾಕಿದ ಎಂಆರ್‌ಪಿಎಲ್

March 8, 2026
2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

2028ಕ್ಕೆ ರಮಾನಾಥ ರೈ ಅವರೇ ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ; ಬಂಟ್ವಾಳ ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

March 8, 2026
ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಇಂಗ್ಲೆಂಡ್ ವಿರುದ್ಧ 7 ರನ್​ಗಳಿಂದ ರೋಚಕ ಗೆಲುವು ಸತತ ಎರಡನೇ ಬಾರಿಗೆ ಫೈನಲ್​ಗೇರಿದ ಟೀಂ ಇಂಡಿಯಾ

March 6, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d