ಬ್ರಹ್ಮಾವರ: ಕಾರು , ಮೀನು ಸಾಗಾಟದ ರಿಕ್ಷಾ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೀನು ವ್ಯಾಪಾರಿ ಬಲಿಯಾಗಿದ್ದಾರೆ. ಬ್ರಹ್ಮಾವರ ಸಾೖಬ್ರಕಟ್ಟೆ ಹೈಸ್ಕೂಲ್ ಸಮೀಪ ಮಲಸವಾರಿ ದೇವಸ್ಥಾನದ ತಿರುವಿನಲ್ಲಿ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇನ್ನಿಬ್ಬರು ಗಾಯಗೊಂಡಿದ್ದು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಮೃತ ವ್ಯಕ್ತಿಯನ್ನು ಆಪೆ ರಿಕ್ಷಾ ಚಾಲಕ ಮಧುವನ ಅಚ್ಲಾಡಿ ನಿವಾಸಿ ಸುರೇಶ್ ಮರಕಾಲ (40) ಎಂದು ಗುರುತಿಸಲಾಗಿದೆ. ಹಾಗೂ ಸಹಸವಾರ ರಾಜು ಮರಕಾಲ (60) ಬೈಕ್ ಸವಾರ ಶಿರಿಯಾರ ನಿವಾಸಿ ಸುಬ್ರಹ್ಮಣ್ಯ ಕುಲಾಲ್ (42) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಂದಿನಂತೆ ಮಲ್ಪೆಯಿಂದ ಮೀನು ತುಂಬಿಸಿಕೊಂಡು ಬರುತ್ತಿದ್ದ ಆಪೆ ರಿಕ್ಷಾಕ್ಕೆ ಮಲಸವಾರಿ ದೇವಸ್ಥಾನದ ತಿರುವಿನಲ್ಲಿ ವೇಗವಾಗಿ ಬಂದ ಸ್ವಿಫ್ಟ್ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಸುರೇಶ್ ಹಾಗೂ ರಾಜು ಮರಕಾಲ ಪಿಕಪ್ ಒಳಗಡೆ ಸಿಲುಕಿ ಹಾಕಿಕೊಂಡಿದ್ದರು. ಅವರನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದ ಸುರೇಶ್ ಮರಕಾಲ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆಗೆ ದಾರಿಮದ್ಯೆ ಸಾವನ್ನಪ್ಪಿದ್ದಾರೆ.
Discussion about this post