• About us
  • Contact us
  • Disclaimer
Thursday, September 18, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ನಡುವೆ ಗುಂಪುಗಾರಿಕೆ, 6 ಮಂದಿ ಅಮಾನತು- 26 ಮಂದಿ ವರ್ಗಾವಣೆ

Coastal Times by Coastal Times
January 6, 2022
in ಕರಾವಳಿ
ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ನಡುವೆ ಗುಂಪುಗಾರಿಕೆ, 6 ಮಂದಿ ಅಮಾನತು- 26 ಮಂದಿ ವರ್ಗಾವಣೆ
76
VIEWS
WhatsappTelegramShare on FacebookShare on Twitter

ಮಂಗಳೂರು, ಜ.6: ಪಾಂಡೇಶ್ವರದಲ್ಲಿರುವ ಮಹಿಳಾ ಠಾಣೆಯಲ್ಲಿ ಕೆಲ ಸಿಬ್ಬಂದಿ ನಡುವೆ ಗುಂಪುಗಾರಿಕೆ, ಭಿನ್ನಾಭಿಪ್ರಾಯ ಇರುವ ಬಗ್ಗೆ ಮಾಹಿತಿ ಬಂದಿರುವ ಹಿನ್ನೆಲೆಯಲ್ಲಿ ಅಲ್ಲಿದ್ದ 32 ಸಂಪೂರ್ಣ ಅಧಿಕಾರಿ, ಸಿಬ್ಬಂದಿಯನ್ನು ವರ್ಗಾವಣೆ (ಆರು ಮಂದಿ ಅಮಾನತು ಸೇರಿ) ಮಾಡಲಾಗಿದೆ. ಠಾಣೆಗೆ ಇಬ್ಬರು ಪಿಎಸ್‌ಐ, ಒಬ್ಬರು ಎಚ್‌ಸಿ ಹಾಗೂ 16 ಪಿಸಿಗಳು ಸೇರಿ 20 ಮಂದಿಯ ಹೊಸ ತಂಡವನ್ನು ನೇಮಕ ಮಾಡಿ ಪೊಲೀಸ್ ಆಯಕ್ತ ಎನ್. ಶಶಿಕುಮಾರ್ ಆದೇಶ ನೀಡಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ರೇವತಿಯವರಿಗೆ ಅಪಘಾತವಾಗಿದ್ದು, 2 ತಿಂಗಳ ಕಾಲ ವಿಶ್ರಾಂತಿ ಅಗತ್ಯವಿರುವ ಕಾರಣ ಸಿಸಿಆರ್‌ಬಿ ವಿಭಾಗದ ಪೊಲೀಸ್ ನಿರೀಕ್ಷಕರಾದ ಸಿದ್ಧನಗೌಡ ಎಚ್. ಬಜಂತ್ರಿಗೆ ಮಹಿಳಾ ಪೊಲೀಸ್ ಠಾಣೆಯ ಹೆಚ್ಚುವರಿ ಪ್ರಭಾರವನ್ನು ವಹಿಸಲಾಗಿದೆ. ಮಹಿಳಾ ಠಾಣೆಗೆ ಇನ್ನೂ 12 ಜನ ಸಿಬ್ಬಂದಿ ಅಗತ್ಯವಿದ್ದು, ಕೌಶಲ್ಯವನ್ನು ಆಧರಿಸಿ ನೇಮಕಕ್ಕೆ ಕ್ರಮ ವಹಿಸಲಾಗುವುದು. ಪ್ರಸ್ತುತ ಡಿಸಿಪಿ ಹಾಗೂ ಎಸಿಪಿಗಳು ಠಾಣೆಯ ಮೇಲುಸ್ತುವಾರಿ ನೋಡಲಿದ್ದು, ದಿನಂಪ್ರತಿ ಅಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಲು ಸೂಚನೆ ನೀಡಲಾಗಿದೆ ಎಂದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಕಳೆದ ಆಗಸ್ಟ್ 26ರಂದು ರಾತ್ರಿ ಮಹಿಳಾ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿ ಠಾಣೆಯಲ್ಲಿ ಮದ್ಯಪಾನ ಮಾಡಿ ಪಾರ್ಟಿ ಮಾಡಿರುವುದು ಠಾಣೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಾವಳಿಯ ಪರಿಶೀಲನೆಯ ವೇಳೆ ದೃಢಪಟ್ಟಿದೆ. ಕೇಂದ್ರ ಉಪ ವಿಭಾಗದ ಎಸಿಪಿ ನಡೆಸಿದ್ದ ತನಿಖೆಯ ಪ್ರಾಥಮಿಕ ವಿಚಾರಣೆಯಿಂದ ಈ ಆರೋಪ ಮೇಲ್ನೋಟಕ್ಕೆ ದೃಢಪಟ್ಟಿತ್ತು.

ಇದಲ್ಲದೆ, ಮಹಿಳಾ ಪೊಲೀಸ್ ಠಾಣೆಯಲ್ಲಿ ಜುಲೈ 27ರಂದು ದಾಖಲಾದ ಪೊಕ್ಸೋ ಕಾಯ್ದೆ ಪ್ರಕರಣದಲ್ಲಿ ಕಂಕನಾಡಿ ಪೊಲೀಸ್ ಠಾಣೆಯ ಓರ್ವ ಸಿಎಚ್‌ಸಿಯನ್ನು ಜು.29ರಂದು ಸೇವೆಯಿಂದ ಅಮಾನತುಗೊಳಿಸಲಾಗಿತ್ತು. ಈ ಪ್ರಕರಣದಲ್ಲಿ ನವೆಂಬರ್ 15ರಂದು ಮಾನ್ಯ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಸಿಎಚ್‌ಸಿ ವಿರುದ್ದ ಇಲಾಖಾ ವಿಚಾರಣೆಯನ್ನು ಸಹ ನಡೆಸಲಾಗುತ್ತಿದೆ. ಈ ಪ್ರಕರಣದ ತನಿಖಾಧಿಕಾರಿಯಾದ ಮಹಿಳಾ ಪಿಎಸ್‌ಐ ರೋಸಮ್ಮರವರು ಕರ್ತವ್ಯ ಲೋಪ ಎಸಗಿರುವ ಕುರಿತು ಎಸಿಪಿ ಪರಿಶೀಲಿಸಿ ವರದಿ ಸಲ್ಲಿಸಿದ್ದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಡಿಸಿಪಿಯವರೂ ವರದಿಯನ್ನು ಸಲ್ಲಿಸಿದ್ದಾರೆ.

ಈ ಎರಡೂ ಪ್ರತ್ಯೇಕ ಘಟನೆಗಳಲ್ಲಿ ಕರ್ತವ್ಯ ಲೋಪ ಹಾಗೂ ಠಾಣೆಯಲ್ಲಿ ಅಧಿಕಾರಿ ಸಿಬ್ಬಂದಿ ಅಶಿಸ್ತು ಸಾಬೀತಾದ ಹಿನ್ನೆಲೆಯಲ್ಲಿ ಮಹಿಳಾ ಠಾಣೆಯ ಪಿಎಸ್ಸೈ ರೋಸಮ್ಮ ಹಾಗೂ ಠಾಣೆಯಲ್ಲಿ ಪಾರ್ಟಿ ಮಾಡಿ ಮದ್ಯಪಾನ ಮಾಡಿದ ಆರೋಪದಲ್ಲಿ ಬಾಬು ನಾಯ್ಕ, ಮತ್ತು ದಯಾನಂದ ಎಂಬ ಇಬ್ಬರು ಎಎಸ್ಸೈ, ಸಿಎಚ್‌ಸಿ ರವಿಚಂದ್ರ ಹಾಗೂ ಇಬ್ಬರು ಮಹಿಳಾ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಮಹಿಳಾ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರ ಅಮಾನತು

Next Post

ಮಂಗಳೂರು ಅಶೋಕನಗರ, ಬಾಲಕಿಗೆ ಅಶ್ಲೀಲ, ಕಿರುಕುಳ ; ಆರೋಪಿ ಸೆರೆ.

Related Posts

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ
ಕರಾವಳಿ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
1
ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ
ಕರಾವಳಿ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
8
Next Post
ಮಂಗಳೂರು ಅಶೋಕನಗರ, ಬಾಲಕಿಗೆ ಅಶ್ಲೀಲ, ಕಿರುಕುಳ ; ಆರೋಪಿ ಸೆರೆ.

ಮಂಗಳೂರು ಅಶೋಕನಗರ, ಬಾಲಕಿಗೆ ಅಶ್ಲೀಲ, ಕಿರುಕುಳ ; ಆರೋಪಿ ಸೆರೆ.

Discussion about this post

Recent News

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
1
ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
8
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ- ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

September 18, 2025
ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವ್ಯಸನ ಮತ್ತು ಸಾಮಾಜಿಕ ಸಾಮರಸ್ಯದ ಜಾಗೃತಿ ಕಾರ್ಯಕ್ರಮ

September 18, 2025
ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಮಂಗಳೂರಿನ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d