• About us
  • Contact us
  • Disclaimer
Friday, October 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ

Coastal Times by Coastal Times
February 6, 2022
in ಗ್ಯಾಜೆಟ್
ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ
54
VIEWS
WhatsappTelegramShare on FacebookShare on Twitter

ನವದೆಹಲಿ, ಫೆಬ್ರವರಿ 5: ಎಲಾನ್ ಮಸ್ಕ್‌ ಮಾಡಿದ್ದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ. ಟೆಸ್ಲಾ ಹಾಗೂ ಕೇಂದ್ರ ಸರ್ಕಾರದ ನಡುವೆ ಕಳೆದ ಕೆಲ ವರ್ಷಗಳಿಂದಲೇ ತೆರಿಗೆ ನೀತಿ ಕುರಿತು ಗೊಂದಲವಿದೆ. ಆಮದು ಸುಂಕ ಹಾಗೂ ಇತರ ತೆರಿಗೆ ಹೆಚ್ಚಿರುವ ಕಾರಣ ಟೆಸ್ಲಾ ಕಾರು ಭಾರತದಲ್ಲಿ ಅತ್ಯಂತ ದುಬಾರಿ ಕಾರಾಗಿ ಮಾರ್ಪಡಲಿದೆ.

ಟೆಸ್ಲಾ ಕಾರುಗಳ ಆಮದು, ಬಿಡಿ ಭಾಗಗಳ ಆಮದಿಗೆ ಸುಂಕ ಕಡಿತಗೊಳಿಸಲು ಟೆಸ್ಲಾ ಮನವಿ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕಾರಣ ಈಗಾಗಲೇ ಹಲವು ವಿದೇಶಿ ಕಂಪನಿಗಳು ಭಾರತದ ತೆರಿಗೆ ನೀತಿ ಮೂಲಕ ವ್ಯವಹಾರ ನಡೆಸುತ್ತಿದೆ. ಬಿಡಿ ಭಾಗಗಳ ಆಮದು ಮಾಡಿಕೊಳ್ಳಲು ಸದ್ಯ ಚಾಲ್ತಿಯಲ್ಲಿರುವ ನೀತಿಯನ್ನು ಒಪ್ಪಿಕೊಂಡಿದೆ. ಹೀಗಾಗಿ ಇತರ ಕಂಪನಿಗಳಿಗೆ ನೀಡದ ವಿನಾಯಿತಿ, ಕೇವಲ ಟೆಸ್ಲಾಗೆ ನೀಡಲು ಸಾಧ್ಯವಿಲ್ಲ ಎಂದು ವಿವೇಕ್ ಜೋಹ್ರಿ ಹೇಳಿದ್ದಾರೆ.

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಒತ್ತು ನೀಡಿರುವ ಕೇಂದ್ರ ಮಾಲಿನ್ಯ ಮುಕ್ತವಾಗಿಸುವ ಪಣತೊಟ್ಟಿದೆ. ಇದಕ್ಕಾಗಿ ಹೊಸ ಹೊಸ ಎಲೆಕ್ಟ್ರಿಕ್ ವಾಹನ ಕಂಪನಿಗಳು ಭಾರತದಲ್ಲಿ ಕಾರ್ಯಾರಂಭ ಮಾಡಿದೆ.

ಅಮೆರಿಕದ ಅತೀ ದೊಡ್ಡ ಎಲೆಕ್ಟ್ರಿಕ್ ವಾಹನ ತಯಾರಿಕಾ ಘಟಕ ಟೆಸ್ಲಾ ಭಾರತದಲ್ಲಿ ಕಾರು ಬಿಡುಗಡೆಗೆ ಕಳೆದ ಹಲವು ವರ್ಷಗಳಿಂದ ಪ್ರಯತ್ನಗಳು ನಡೆಯುತ್ತಲೇ ಇದೆ. ಇತ್ತೀಚೆಗೆ ಟ್ವಿಟರ್ ಮೂಲಕ ಕೆಲ ಘರ್ಷಣೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಮತ್ತೊಂದು ಮಾಹಿತಿ ಬಹಿರಂಗವಾಗಿದೆ. ಈ ಮಾಹಿತಿ ಪ್ರಕಾರ ಟೆಸ್ಲಾ ಮಾಡಿದ ಮನವಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಎಲಾನ್ ಮಸ್ಕ್ ಟ್ವೀಟ್ ಮಾಡಿದ ಬೆನ್ನಲ್ಲೇ ಪಂಜಾಬ್, ಕರ್ನಾಟಕ, ತಮಿಳುನಾಡು ಸೇರಿದಂತೆ ಭಾರತ 5ಕ್ಕೂ ಹೆಚ್ಚು ರಾಜ್ಯಗಳು ಟ್ವೀಟ್ ಮೂಲಕ ಎಲಾನ್ ಮಸ್ಕ್‌ಗೆ ಮನವಿ ಮಾಡಿತ್ತು. ತಮ್ಮ ತಮ್ಮ ರಾಜ್ಯಗಳಲ್ಲಿ ಘಟಕ ಸ್ಥಾಪಿಸಲು ಮನವಿ ಮಾಡಿತ್ತು. ಆದರೆ ಟೆಸ್ಲಾಗೆ ಅಡ್ಡಿಯಾಗಿರುವುದು ಇಲ್ಲಿನ ರಾಜ್ಯ ಸರ್ಕಾರದ ನೀತಿಗಳಿಂದ, ಕೇಂದ್ರದ ಆಮದು ಸುಂಕ ನೀತಿಯಿಂದ ಅನ್ನೋದು ರಾಜ್ಯಗಳಿಗೂ ತಿಳಿಯದಾಯಿತು.

ಇದರಿಂದ ಟೆಸ್ಲಾ ಭಾರತದಲ್ಲಿ ಮಾರಾಟ ತೀರಾ ಕಳಪೆಯಾಗಲಿದೆ. ಹೀಗಾಗಿ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳ ಆಮದಿಗೆ ಸುಂಕ ಹಾಗೂ ಇತರ ತೆರಿಗೆ ಕಡಿತಗೊಳಿಸಬೇಕು ಎಂದು ಟೆಸ್ಲಾ ಮನವಿ ಮಾಡಿದೆ. ಈಗ ಟೆಸ್ಲಾ ಮನವಿಯನ್ನು ಕೇಂದ್ರ ಸರ್ಕಾರ ತರಿಸ್ಕರಿಸಿರುವುದಾಗಿ ಸೆಂಟ್ರಲ್ ಬೋರ್ಡ್ ಆಫ್ ಇಂಡೈರೆಕ್ಟ್ ಟ್ಯಾಕ್ಸ್ ಹಾಗೂ ಕಸ್ಟಮ್ ಮುಖ್ಯಸ್ಥ ವಿವೇಕ್ ಜೋಹ್ರಿ ಹೇಳಿದ್ದಾರೆ. ಸಂದರ್ಶನದಲ್ಲಿ ಎಲಾನ್ ಮಸ್ಕ್ ಭಾರತದಲ್ಲಿ ಟೆಸ್ಲಾ ಕಾರು ಬಿಡುಗಡೆ ತೊಡಕನ್ನು ಹೇಳಿದ್ದರು. ಅಮೆರಿಕದಲ್ಲಿ ಟೆಸ್ಲಾದ ಮಾಡೆಲ್ 3 ಕಾರಿನ ಬೆಲೆ 30 ಲಕ್ಷ ರೂಪಾಯಿ ಭಾರತದಲ್ಲಿನ ಈ ಕಾರಿನ ಬೆಲೆ ತೆರಿಗೆ ಕಾರಣದಿಂದ ಸರಿಸುಮಾರು 60 ಲಕ್ಷ ರೂಪಾಯಿ ಆಗಲಿದೆ. ಕಾರಣ ಆಮದು ಸುಂಕ ಹಾಗೂ ಇತರ ತೆರಿಗೆ ಶೇಕಡಾ 100. ಹೀಗಾಗಿ ಕೈಗೆಟುಕುವ ದರದ ಟೆಸ್ಲಾ ಕಾರು ಭಾರತದಲ್ಲಿ ದುಬಾರಿಯಾಗಲಿದೆ. ಹೀಗಾಗಿ ತೆರಿಗೆ ಕಡಿತಗೊಳಿಸಬೇಕು ಎಂದು ಮನವಿ ಮಾಡಲಾಗಿತ್ತು.

ಎಲಾನ್ ಮಸ್ಕ್ ಭಾರತದಲ್ಲಿ ಅತೀ ಹೆಚ್ಚು ತೆರಿಗೆ ಇದೆ. ವಿಶ್ವದಲ್ಲೂ ಎಲ್ಲೂ ಇಲ್ಲದ ತೆರಿಗೆ ನೀತಿಯಿಂದ ಕಾರು ಬಿಡುಗಡೆ ವಿಳಂಬವಾಗುತ್ತಿದೆ ಎಂದು ಸಂದರ್ಶನದಲ್ಲಿ ಹೇಳಿದ್ದರು. ಇಷ್ಟೇ ಅಲ್ಲ ಸಾಮಾಜಿಕ ಜಾಲತಾಣದಲ್ಲಿ ಕೇಳಲಾಗಿದ್ದ ಪ್ರಶ್ನೆಗೆ ಉತ್ತರಿಸುತ್ತಾ, ಸರ್ಕಾರದ ಜೊತೆ ಮಾತುಕತೆ ನಡಯುತ್ತಿದೆ. ಹಲವು ಸವಾಲುಗಳನ್ನು ಎದುರಿಸುತ್ತಿದ್ದೇವೆ ಎಂದು ಟೆಸ್ಲಾ ಕಾರು ಭಾರತದಲ್ಲಿ ಬಿಡುಗಡೆ ಕುರಿತು ಉತ್ತರ ನೀಡಿದ್ದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಭಾರತ ಕ್ರಿಕೆಟ್ ತಂಡ ಮುಡಿಗೇರಿದ ಐಸಿಸಿ ಅಂಡರ್-19 ವಿಶ್ವಕಪ್‌ – 2022

Next Post

ಖ್ಯಾತ ಗಾಯಕಿ ‘ಗಾನಕೋಗಿಲೆ’ ಲತಾ ಮಂಗೇಶ್ಕರ್ ಇನ್ನಿಲ್ಲ

Related Posts

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ
ಗ್ಯಾಜೆಟ್

ಸ್ಯಾಮ್‌ಸಂಗ್ ತನ್ನ ಹೊಸ ‘Samsung Galaxy F17 5G’ ಸ್ಮಾರ್ಟ್​ಫೋನ್ ಅನ್ನು​ ಮಾರುಕಟ್ಟೆಗೆ ಪರಿಚಯಿಸಿದೆ

September 15, 2025
31
XIAOMI ENTRY IN AUTOMOBILE SECTOR- ಆಟೋಮೊಬೈಲ್​ ವಲಯಕ್ಕೆ ಎಂಟ್ರಿ ಕೊಟ್ಟ ಶಿಯೋಮಿ!
ಗ್ಯಾಜೆಟ್

XIAOMI ENTRY IN AUTOMOBILE SECTOR- ಆಟೋಮೊಬೈಲ್​ ವಲಯಕ್ಕೆ ಎಂಟ್ರಿ ಕೊಟ್ಟ ಶಿಯೋಮಿ!

July 10, 2025
37
Next Post
ಖ್ಯಾತ ಗಾಯಕಿ ‘ಗಾನಕೋಗಿಲೆ’ ಲತಾ ಮಂಗೇಶ್ಕರ್ ಇನ್ನಿಲ್ಲ

ಖ್ಯಾತ ಗಾಯಕಿ 'ಗಾನಕೋಗಿಲೆ' ಲತಾ ಮಂಗೇಶ್ಕರ್ ಇನ್ನಿಲ್ಲ

Discussion about this post

Recent News

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
14
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
118
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

ಎರಡೂ ಕಾಲು ಕಳೆದುಕೊಂಡ ಅಶ್ವಿ‌ನಿಗೆ ನೋಟಿಸ್‌ ನೀಡಿ ಅಧಿಕಾರಿಯೇ ಗೈರು ಸ್ಥಳೀಯರ ತೀವ್ರ ಆಕ್ರೋಶ

October 10, 2025
ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

ಮೈಸೂರು ದಸರಾದಲ್ಲಿ ಬಲೂನು ಮಾರಾಟಕ್ಕೆ ಬಂದ 9 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಕೀಚಕನಿಗೆ ಪೊಲೀಸ್ ಗುಂಡೇಟು

October 10, 2025
ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d